ಬಳ್ಳಾರಿ / ಕಂಪ್ಲಿ : ತಾಲೂಕಿನ ಎಮ್ಮಿಗನೂರು ಗ್ರಾಮದ ಶ್ರೀ ಜಡಿಸಿದ್ದೇಶ್ವರ ಎಜುಕೇಶನಲ್ ಟ್ರಸ್ಟ್ ವತಿಯಿಂದ ಡಾ. ಎಸ್. ಆರ್. ರಂಗನಾಥ್ ಅವರ ಸ್ಮರಣಾರ್ಥ ರಾಷ್ಟ್ರೀಯ ಗ್ರಂಥ ಪಾಲಕರ ದಿನವನ್ನು ಆಚರಿಸಲಾಯಿತು.
ಟ್ರಸ್ಟಿನ ಅಧ್ಯಕ್ಷ ಎಸ್. ರಾಮಪ್ಪ ಮಾತನಾಡಿ, ಗ್ರಂಥಾಲಯದಲ್ಲಿನ ಪುಸ್ತಕಗಳು ನಮ್ಮ ಜ್ಞಾನ ಭಂಡಾರವನ್ನು ಹೆಚ್ಚಿಸುವ ನಿಟ್ಟಿನಲ್ಲಿ ಪೂರಕವಾಗಿದ್ದು ಅಲ್ಲದೆ ಗ್ರಂಥಾಲಯಗಳ ಅಭಿವೃದ್ಧಿಗೆ ಎಸ್ ಆರ್ ರಂಗನಾಥ್ ತಮ್ಮದೇ ಆದ ಕೊಡುಗೆ ನೀಡಿದ ಮಹಾನ್ ಚೇತನ ಎಂದರು.
ಟ್ರಸ್ಟಿನ ಪದಾಧಿಕಾರಿಗಳು ವಿದ್ಯಾರ್ಥಿಗಳಾದ ಪ್ರವೀಣ್ ದಿಗಂತಗೌಡ ರಾಹುಲ್ ರಾಜ ಸಾಬ್ ವಿದ್ಯಾರ್ಥಿಯರಾದ ವೈಷ್ಣವಿ ಗಾಯಿತ್ರಿ ದೀಕ್ಷಾ ಮಾನಸ ಸೇರಿದಂತೆ ಇತರರು ಇದ್ದರು.
ವರದಿ : ಜಿಲಾನಸಾಬ್ ಬಡಿಗೇರ್



















