ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಶಾಸಕ ಅಜ್ಜಿಕುಟ್ಟಿರ ಎಸ್. ಪೊನ್ನಣ್ಣ ಅವರಿಗೆ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಹುದ್ದೆ

ವಿರಾಜಪೇಟೆ : ಇದೇ ಮೊದಲ ಬಾರಿಗೆ ಕೊಡಗು ಜಿಲ್ಲೆಯ ಶಾಸಕರೊಬ್ಬರಿಗೆ ಸಿ. ಎಂ. ರಾಜಕೀಯ ಕಾರ್ಯದರ್ಶಿ ಹುದ್ದೆ ದೊರೆತಿದೆ.
ವಿರಾಜಪೇಟೆ ಕ್ಷೇತ್ರದ ಕಾಂಗ್ರೆಸ್ ಶಾಸಕ ಅಜ್ಜಿಕುಟ್ಟಿರ ಎಸ್. ಪೊನ್ನಣ್ಣ ಅವರನ್ನು ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಯಾಗಿ ನೇಮಕ ಮಾಡಿ ಸಂಪುಟ ದರ್ಜೆ ಸಚಿವರ ಸ್ಥಾನವನ್ನುನೀಡಲಾಗಿದೆ.

ಕೊಡಗು ಜಿಲ್ಲೆಯ ಇತಿಹಾಸದಲ್ಲಿ ಮೊದಲ ಬಾರಿಗೆ ಯಾವುದೇ ಶಾಸಕರಿಗೆ ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆ ಸಿಕ್ಕಿದೆ.

ಡೆಪ್ಯೂಟಿ ಸ್ಪೀಕರ್ ಬದಲು : ಆಗಸ್ಟ್ 3, 2026 ರಂದು ಪೊನ್ನಣ್ಣ ಅವರನ್ನು ವಿಧಾನಸಭೆ ಉಪಸಭಾಧ್ಯಕ್ಷರಾಗಿ ನೇಮಕ ಮಾಡಲಾಗಿತ್ತು. ಆದರೆ ಆ ಹುದ್ದೆಯನ್ನು ಬಿಟ್ಟು ರಾಜಕೀಯ ಕಾರ್ಯದರ್ಶಿ ಹುದ್ದೆಗೆ ಅವರು ಒಲವು ತೋರಿಸಿದ್ದಾರೆ ಎನ್ನಲಾಗುತ್ತಿದೆ. ಹಾಗೂ ಅವರ ನಾಯಕತ್ವ ಮತ್ತು ಸಂಘಟನಾ ಚತುರತೆಯಿಂದ ಕೊಡಗು ಜಿಲ್ಲೆಯ ಅಭಿವೃದ್ಧಿ ಮತ್ತು ಸಮಗ್ರ ಬೆಳವಣಿಗೆ ಹಾಗೂ ರಾಜ್ಯಾದ್ಯಂತ ಶ್ರೀ ಸಿದ್ದರಾಮಯ್ಯನವರ ಕಾನೂನು ಸಲಹೆಗಾರರಾಗಿಯೂ ಹೆಸರಾಗಿದ್ದರು. ಈ ಕಾರಣಗಳಿಂದ ಅವರಿಗೆ ಈ ಹುದ್ದೆ ನೀಡಲಾಗಿದೆ.

ವರದಿ : ಪ್ರಿತುನ್ ಪೂವಣ್ಣ ಅಯ್ಯನೆರವಂಡ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!