ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ರಾಮಸಾಗರದಲ್ಲಿ ಕುಷ್ಠ ರೋಗ ಅಂಗವಿಕಲರಿಗೆ ಕಿರಾಣಿ ಅಂಗಡಿ ನೆರವು: ಸ್ವಾವಲಂಬಿ ಬದುಕಿಗೆ ಆಸರೆ

ಬಳ್ಳಾರಿ / ಕಂಪ್ಲಿ : ತಾಲೂಕಿನ ರಾಮಸಾಗರ ಪ್ರಾಥಮಿಕ ಆರೋಗ್ಯ ಕೇಂದ್ರದ ವ್ಯಾಪ್ತಿಯ ರಾಮಸಾಗರ ಗ್ರಾಮದಲ್ಲಿ ಇಂದು ಕುಷ್ಠ ರೋಗದಿಂದ ಅಂಗವಿಕಲತೆ ಹೊಂದಿರುವ ವ್ಯಕ್ತಿಗೆ ಜೀವನೋಪಾಯಕ್ಕಾಗಿ ಡೇಮಿಯನ್ ಫೌಂಡೇಶನ್ (DFIT) ವತಿಯಿಂದ ಕಿರಾಣಿ ಅಂಗಡಿಯ ಸಾಮಗ್ರಿಗಳನ್ನು ನೀಡಿ ನೆರವು ನೀಡಲಾಯಿತು. ತಾಲೂಕು ಆರೋಗ್ಯ ಅಧಿಕಾರಿಗಳಾದ ಡಾ. ಅರುಣ್ ಜಿ. ಅವರ ನೇತೃತ್ವದಲ್ಲಿ ಈ ಶ್ಲಾಘನೀಯ ಕಾರ್ಯಕ್ರಮ ನಡೆಯಿತು. ಸಂಕಷ್ಟದಲ್ಲಿರುವ ವ್ಯಕ್ತಿ ಯಾರ ಮೇಲೆಯೂ ಅವಲಂಬಿತರಾಗದೆ, ಸ್ವಂತ ಕಾಲಿನ ಮೇಲೆ ನಿಂತು ಗೌರವಯುತ ಬದುಕು ಸಾಗಿಸಲಿ ಎಂಬ ಉದ್ದೇಶದಿಂದ ಈ ಜೀವನೋಪಾಯದ ನೆರವನ್ನು ಒದಗಿಸಲಾಗಿದೆ.
ಈ ಸಂದರ್ಭದಲ್ಲಿ ಡೇಮಿಯನ್ ಫೌಂಡೇಶನ್‌ನ ಅಧಿಕಾರಿ ಸುಧಾಕರ್, ಬಳ್ಳಾರಿ ಡಿ.ಎಲ್.ಒ (DLO) ಕಚೇರಿಯ ಮೇಲ್ವಿಚಾರಕರಾದ ಪಂಚಾಕ್ಷರಿ, ಕಂಪ್ಲಿ ತಾಲೂಕಿನ ಆರೋಗ್ಯ ನಿರೀಕ್ಷಣಾಧಿಕಾರಿಗಳಾದ ಪಿ. ಬಸವರಾಜ ಹಾಗೂ ಫಲಾನುಭವಿಯ ಕುಟುಂಬದ ಸದಸ್ಯರು ಉಪಸ್ಥಿತರಿದ್ದರು. ಆರೋಗ್ಯ ಇಲಾಖೆ ಮತ್ತು ಡೇಮಿಯನ್ ಫೌಂಡೇಶನ್‌ನ ಈ ಜಂಟಿ ಮಾನವೀಯ ಕಾರ್ಯಕ್ಕೆ ಸಾರ್ವಜನಿಕ ವಲಯದಲ್ಲಿ ಭಾರೀ ಮೆಚ್ಚುಗೆ ವ್ಯಕ್ತವಾಗಿದೆ.

ವರದಿ : ಜಿಲಾನಸಾಬ್ ಬಡಿಗೇರ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!