ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಕಂಪ್ಲಿಯಲ್ಲಿ ಎಬಿವಿಪಿಯಿಂದ 100 ಮೀಟರ್ ಉದ್ದದ ತಿರಂಗಾಯಾತ್ರೆ, 800 ವಿದ್ಯಾರ್ಥಿಗಳು ಭಾಗಿ

ಬಳ್ಳಾರಿ / ಕಂಪ್ಲಿ : ಬಳ್ಳಾರಿ: ವಂದೇ ಮಾತರಂ ಗೀತೆಗೆ 150 ವರ್ಷಗಳಾದ ಹಿನ್ನೆಲೆಯಲ್ಲಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಪಟ್ಟಣದಲ್ಲಿ 100 ಮೀಟರ್ ಉದ್ದದ ಬೃಹತ್ ತಿರಂಗಾ ಯಾತ್ರೆ ಹಮ್ಮಿಕೊಂಡಿತ್ತು.

ಇಲ್ಲಿನ ಷಾಮಿಯ ಚಂದ್ ಬಾಲಕರ ಕಾಲೇಜ್ ದಿಂದ ಪ್ರಾರಂಭಗೊಂಡ ತಿರಂಗಾ ಯಾತ್ರೆಯು ನಾಲ್ಕನೇ ವಾರ್ಡ್, ನಡುವಲ್ ಮಸೀದಿ, ಮುಖ್ಯ ರಸ್ತೆಯ ಸಾಗುತ್ತಾ ಡಾ. ಬಿ.ಆರ್. ಅಂಬೇಡ್ಕರ್ ಸರ್ಕಲ್‌ವರೆಗೆ ನಡೆಯಿತು. 800ಕ್ಕೂ ಹೆಚ್ಚಿನ ವಿದ್ಯಾರ್ಥಿಗಳು ಹಾಗೂ ಯುವಕರು ಕೈಯಲ್ಲಿ ರಾಷ್ಟ್ರಧ್ವಜವನ್ನು ಹಿಡಿದು ಶಿಸ್ತುಬದ್ಧವಾಗಿ ಯಾತ್ರೆಯಲ್ಲಿ ಭಾಗವಹಿಸಿದ್ದರು. ಯಾತ್ರೆಯುದ್ದಕ್ಕೂ ಭಾರತ ಮಾತಾ ಕೀ ಜೈ, ವಂದೇ ಮಾತರಂ ಸೇರಿದಂತೆ ದೇಶಭಕ್ತಿ ಘೋಷಣೆಗಳು ಮೊಳಗಿದವು.
ಸುಮಾರು 100 ಮೀಟರ್ ಉದ್ದದ ರಾಷ್ಟ್ರಧ್ವಜ ಯಾತ್ರೆಯ ಪ್ರಮುಖ ಆಕರ್ಷಣೆಯಾಗಿದ್ದು, ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಲ್ಲಿ ದೇಶಭಕ್ತಿಯ ಭಾವನೆಯನ್ನು ಮೂಡಿಸಿತು. ಯಾತ್ರೆಯ ನೇತೃತ್ವ ವಹಿಸಿದ್ದ ಎಬಿವಿಪಿಯ ಬಳ್ಳಾರಿ ಜಿಲ್ಲಾ ಸಂಚಾಲಕರಾದ ಸಪ್ತಾಗಿರಿ ಮಂಚಕಂಠಿ ಮಾತನಾಡಿ, “ಭಾರತದ ರಾಷ್ಟ್ರಧ್ವಜ ಕೇವಲ ಒಂದು ಧ್ವಜವಲ್ಲ; ಅದು ನಮ್ಮ ದೇಶದ ಸ್ವಾಭಿಮಾನ, ಸಾರ್ವಭೌಮತ್ವ, ಏಕತೆ ಮತ್ತು ಅಖಂಡತೆಯ ಪ್ರತೀಕವಾಗಿದೆ. ತ್ರಿವರ್ಣ ಧ್ವಜವನ್ನು ಕೈಯಲ್ಲಿ ಹಿಡಿದು ಸಾಗುವುದು ಪ್ರತಿಯೊಬ್ಬ ಭಾರತೀಯನಿಗೂ ಹೆಮ್ಮೆಯ ಸಂಗತಿಯಾಗಿದೆ ಎಂದರು.

ಸ್ವಾತಂತ್ರ‍್ಯವನ್ನು ಕೇವಲ ಆಚರಿಸುವುದಷ್ಟೇ ಅಲ್ಲದೆ, ದೇಶದ ಏಕತೆ ಮತ್ತು ಅಖಂಡತೆಯನ್ನು ಕಾಪಾಡುವ ಜವಾಬ್ದಾರಿಯನ್ನೂ ಯುವಜನತೆ ಹೊತ್ತುಕೊಳ್ಳಬೇಕು. ವಿದ್ಯಾರ್ಥಿ ಜೀವನದಲ್ಲಿಯೇ ದೇಶದ ಬಗ್ಗೆ ಜವಾಬ್ದಾರಿ, ಸಾಮಾಜಿಕ ಕಾಳಜಿ ಮತ್ತು ರಾಷ್ಟ್ರಭಕ್ತಿಯ ಮನೋಭಾವ ಬೆಳೆಸಿಕೊಳ್ಳಬೇಕು ಹಾಗೂ ಭಾರತವು ವಿವಿಧ ಭಾಷೆ, ಸಂಸ್ಕೃತಿ, ಸಂಪ್ರದಾಯ ಮತ್ತು ಆಚರಣೆಗಳನ್ನು ಹೊಂದಿರುವ ವಿಶಾಲ ರಾಷ್ಟ್ರ. ಈ ವೈವಿಧ್ಯತೆಯ ನಡುವೆಯೂ ನಮ್ಮನ್ನು ಒಂದಾಗಿ ಬಂಧಿಸುವ ಶಕ್ತಿ ಭಾರತೀಯತೆಯಾಗಿದೆ ಎಂದು ಹೇಳಿದರು.

ಬಳ್ಳಾರಿ ಜಿಲ್ಲಾ ಸಂಘಟನಾ ಕಾರ್ಯದರ್ಶಿ ಟಿ. ಭರತ್, ವಿದ್ಯಾರ್ಥಿನಿ ವಿಸ್ತಾರಕಿ ವಿದ್ಯಾ, ಮುಖ್ಯ ವಕ್ತಾರ ಶಿವಾನಂದ ಹುಲಿಯನ್ನವರ, ಕಂಪ್ಲಿಯ ಎಬಿವಿಪಿಯ ಪದಾಧಿಕಾರಿಗಳು, ವಿದ್ಯಾರ್ಥಿಗಳು, ಸಾರ್ವಜನಿಕರು ಸೇರಿದಂತೆ ಮತ್ತಿತರರು ಪಾಲ್ಗೊಂಡಿದ್ದರು.

ವರದಿ : ಜಿಲಾನಸಾಬ್ ಬಡಿಗೇರ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!