ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ವೈವಿಧ್ಯಗಳ ನಡುವೆಯೂ ಭಾರತೀಯತೆಯ ಏಕತೆ, ಯುವಜನರು ಸದೃಢರಾಗಿ : ತಹಶೀಲ್ದಾರ್ ಜೂಗಲ ಮಂಜುನಾಯಕ


ಬಳ್ಳಾರಿ / ಕಂಪ್ಲಿ :
ಷಾಮಿಯಾಚಂದ್ ಸರ್ಕಾರಿ ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ತಾಲ್ಲೂಕು ಆಡಳಿತದಿಂದ ಆಯೋಜಿಸಿದ್ದ ಸ್ವಾತಂತ್ರ್ಯ ದಿನಾಚರಣೆಯಲ್ಲಿ ತಹಶೀಲ್ದಾರ್ ಜೂಗಲ ಮಂಜುನಾಯಕ ವಿದ್ಯಾರ್ಥಿಗಳಿಂದ ಧ್ವಜವಂದನೆ ಸ್ವೀಕರಿಸಿದರು.
ನಂತರ ಮಾತನಾಡಿ,
ಭಾರತವು ವೈವಿಧ್ಯತೆಯಲ್ಲಿ ಏಕತೆ ಎಂಬ ವಿಶಿಷ್ಟ ಪರಂಪರೆಯನ್ನು ಹೊಂದಿರುವ ರಾಷ್ಟ್ರವಾಗಿದೆ. ಭಾಷೆ, ಧರ್ಮ, ಸಂಸ್ಕೃತಿ, ಆಚರಣೆ, ಜೀವನಶೈಲಿ ಹಾಗೂ ಭೌಗೋಳಿಕ ವೈವಿಧ್ಯಗಳ ನಡುವೆಯೂ ಭಾರತೀಯತೆಯ ಭಾವನೆ ನಮ್ಮೆಲ್ಲರನ್ನೂ ಒಂದಾಗಿಸುತ್ತದೆ. ಈ ಏಕತೆಯೇ ಭಾರತದ ದೊಡ್ಡ ಶಕ್ತಿಯಾಗಿದೆ, ಯುವಜನರು ಶೈಕ್ಷಣಿಕವಾಗಿ ಸದೃಢರಾಗಬೇಕು ಎಂದು ತಹಶೀಲ್ದಾರ್ ಜೂಗಲ ಮಂಜುನಾಯಕ ತಿಳಿಸಿದರು.
ಈ ಸಂದರ್ಭದಲ್ಲಿ ತಾಲ್ಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಕೆ. ಶ್ರೀನಿವಾಸರಾವ್, ಎಪಿಎಂಸಿ ಅಧ್ಯಕ್ಷ ಎನ್. ಹಬೀಬ್‍ರೆಹಮಾನ್, ಅಧಿಕಾರಿ ಗಳಾದ ಆರ್.ಕೆ. ಶ್ರೀಕುಮಾರ್, ಕೆ.ಬಿ. ವಾಸುಕುಮಾರ್, ಬಿ. ಮಲ್ಲಿಕಾರ್ಜುನ, ಶ್ರೀನಿವಾಸ್, ನರಸಪ್ಪ, ಸಿದ್ದಣ್ಣ ಪರಮೇಶ್ವರ, ಸುಜಾತ, ಡಾ.ಕೆ.ಯು. ಬಸವರಾಜ, ಟಿ.ಎಂ. ಬಸವರಾಜ, ಮುದುಕಪ್ಪ ನೆಲಜೇರಿ ಇದ್ದರು. ಪುರಸಭೆಯಲ್ಲಿ ಪ್ರಭಾರ ಮುಖ್ಯಾಧಿಕಾರಿ ಬಿ. ಮಲ್ಲಿಕಾರ್ಜುನ ರಾಷ್ಟ್ರಧ್ವಜಾರೋಹಣ ನೆರವೇರಿಸಿದರು. ಲೆಕ್ಕಿಗ ರಮೇಶ ಬೆಳಂಕರ್, ಜೆಇ ಪಿ. ತೇಜಸ್ವಿನಿ ಸೇರಿದಂತೆ ತಾಲೂಕು ಆಡಳಿತ, ಪುರಸಭೆಯ ಅಧಿಕಾರಿಗಳು ಹಾಗೂ ಸಿಬ್ಬಂದಿ ಹಾಜರಿದ್ದರು.

ವರದಿ : ಜಿಲಾನಸಾಬ್ ಬಡಿಗೇರ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!