ಮಡಿಕೇರಿ: ಕ್ಷೇತ್ರದ ಶಾಸಕರಾದ ಮಂಥರ್ ಗೌಡರ ನೇತೃತ್ವದಲ್ಲಿ ನಗರ ದಸರಾ ಸಮಿತಿಯಿಂದ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ರವರನ್ನು ಭೇಟಿ ಮಾಡಿ ಮಡಿಕೇರಿ ದಸರಾಕ್ಕೆ ಅನುದಾನ ಕೋರಿಕೆಗೆ ತಕ್ಷಣವೇ ಸ್ಪಂದಿಸಿದ ಮಾನ್ಯ ಮುಖ್ಯಮಂತ್ರಿಗಳು 2 ಕೋಟಿ ರೂ. ಘೋಷಣೆ ಮಾಡಿದ್ದಾರೆ.
ನಿಯೋಗದಲ್ಲಿ ಮಡಿಕೇರಿ ದಸರಾ ಸಮಿತಿಯ ಉಪಾಧ್ಯಕ್ಷರಾದ ಶ್ರೀ ಮಹೇಶ್ ಜೈನಿ, ದಸರಾ ಕಾರ್ಯಧ್ಯಕ್ಷ ಬಿ ಕೆ ಅರುಣ್ ಕುಮಾರ್, ಪ್ರಧಾನ ಕಾರ್ಯದರ್ಶಿ ಅರುಣ್ ಶೆಟ್ಟಿ, ಖಜಾಂಚಿ ಸಬೀತ ಕಾರ್ಯದರ್ಶಿ ಮುದ್ದುರಾಜ್, ದಶ ಮಂಟಪ ಸಮಿತಿ ಅಧ್ಯಕ್ಷರಾದ ಪೂಣಚ್ಚ, ಪ್ರಧಾನ ಕಾರ್ಯದರ್ಶಿ ವಿನೋದ್ ಪ್ರಕಾಶ್ ಆಚಾರ್ಯ, ಕಾರ್ಯದರ್ಶಿ ಮೋಹನ್ ಗಜೇಂದ್ರ , ಜಗದೀಶ್ ಸೇರಿದಂತೆ ದಸರಾ ಸಮಿತಿಯ ಪದಾಧಿಕಾರಿಗಳು ಹಾಜರಿದ್ದರು.
ವರದಿ: ಪ್ರಿತುನ್ ಪೂವಣ್ಣ




















