ರೋಣ: ಕರ್ನಾಟಕ ವಿಧಾನಸಭೆಯ ಸಭಾಧ್ಯಕ್ಷರಾಗಿ ಆಯ್ಕೆಯಾದ ಬಳಿಕ ತಮ್ಮ ಮತಕ್ಷೇತ್ರವಾದ ರೋಣಕ್ಕೆ ಪ್ರಥಮ ಬಾರಿಗೆ ಆಗಮಿಸಿದ ಜಿ.ಎಸ್. ಪಾಟೀಲ ಅವರನ್ನು ಕೆ ಪಿ ಸಿ ಸಿ ಸದಸ್ಯರು ಹಾಗೂ ಗದಗ ಜಿಲ್ಲಾ ಕಾಂಗ್ರೆಸ್ ಪರಿಶಿಷ್ಟ ಜಾತಿ ವಿಭಾಗದ ಮಾಧ್ಯಮ ವಕ್ತಾರ ಸಂಜಯ್ ಆರ್. ದೊಡ್ಡಮನಿ ಅವರು ಗೌರವಿಸಿ ಸನ್ಮಾನಿಸಿದರು.
ಈ ಸಂದರ್ಭದಲ್ಲಿ ಸಭಾಧ್ಯಕ್ಷ ಜಿ.ಎಸ್. ಪಾಟೀಲ ಅವರಿಗೆ ಅಭಿನಂದನೆ ಸಲ್ಲಿಸಿ ಅವರ ನೇತೃತ್ವದಲ್ಲಿ ಕ್ಷೇತ್ರ ಹಾಗೂ ಜಿಲ್ಲೆ ಮತ್ತಷ್ಟು ಅಭಿವೃದ್ಧಿ ಹೊಂದಲಿ ಎಂದು ಹರ್ಷ ವ್ಯಕ್ತಪಡಿಸಿದರು. ಸಭಾಧ್ಯಕ್ಷರಾಗಿ ಜಿ.ಎಸ್. ಪಾಟೀಲ ಅವರು ಜವಾಬ್ದಾರಿಯುತವಾಗಿ ಕಾರ್ಯ ನಿರ್ವಹಿಸುತ್ತಿರುವುದು ಹೆಮ್ಮೆಯ ಸಂಗತಿಯಾಗಿದೆ ಎಂದು ಸಂಜಯ್ ಆರ್. ದೊಡ್ಡಮನಿ ಹೇಳಿದರು.
ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಯುವಕ ಮಿತ್ರರು ಉಪಸ್ಥಿತರಿದ್ದರು.
ವರದಿ ಶರಣಪ್ಪಗೌಡ ಸಕ್ಕರಗೌಡರ




















