ಮಡಿಕೇರಿ : ಅರಣ್ಯ ಜೀವಿಶಾಸ್ತ್ರ ಮತ್ತು ಪರಿಸರ ಸಚಿವರಾದ ಶ್ರೀ ರಾಮಲಿಂಗಾರೆಡ್ಡಿ ಅವರು ನಾಳೆ ಕೊಡಗು ಜಿಲ್ಲಾ ಪ್ರವಾಸ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ.
ಮಾನ್ಯ ಸಚಿವರು ಆಗಸ್ಟ್ 28 ರಂದು ಮಧ್ಯಾಹ್ನ ೨ ಗಂಟೆಗೆ ಮಡಿಕೇರಿ ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮಾನವ ಮತ್ತು ಪ್ರಾಣಿ ಸಂಘರ್ಷಗಳಿಗೆ ಸಂಬಂಧಿಸಿದಂತೆ ಜನ ಪ್ರತಿನಿಧಿಗಳು, ಸಂಘಟನೆಗಳು ಹಾಗೂ ಅರಣ್ಯ ಅಧಿಕಾರಿಗಳೊಂದಿಗೆ ಸಭೆ ನಡೆಸಲಿದ್ದಾರೆ ಎಂದು ಸಚಿವರ ಆಪ್ತ ಕಾರ್ಯದರ್ಶಿ ಕೆ.ಎಸ್.ಜಗದೀಶ್ ರೆಡ್ಡಿ ಅವರು ತಿಳಿಸಿದ್ದಾರೆ.
ವರದಿ: ಪ್ರಿತುನ್ ಪೂವಣ್ಣ




















