ಬೆಂಗಳೂರು : ಕರ್ನಾಟಕ ಮಹರ್ಷಿ ವಾಲ್ಮೀಕಿ
ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಲ್ಲಿ ನಡೆದಿದೆ ಎನ್ನಲಾದ ಕೋಟ್ಯಂತರ ರೂಪಾಯಿ ಅಕ್ರಮ ಹಣ ವರ್ಗಾವಣೆ/ಹಗರಣಕ್ಕೆ ಸಂಬಂಧಿಸಿದಂತೆ ಭ್ರಷ್ಟಾಚಾರದ ಆರೋಪ ಎದುರಿಸುತ್ತಿರುವ ಸಚಿವ ಬಿ.ನಾಗೇಂದ್ರ ಅವರು ತನ್ನ ಸಚಿವ ಸ್ಥಾನಕ್ಕೆ ಶುಕ್ರವಾರ (ಆ.28) ರಾಜೀನಾಮೆ ನೀಡಿದ್ದಾರೆ.
ವಿಧಾನಸೌಧದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ವಿರೋಧ ಪಕ್ಷಗಳು ಸದನದಲ್ಲಿ ನನ್ನ ರಾಜೀನಾಮೆಗೆ ಅಗ್ರಹಿಸಿ ಇಡೀ ಅಧಿವೇಶನವನ್ನೇ ಹಾಳು ಮಾಡಿದರು. ರಾಜ್ಯದಲ್ಲಿನ ಬರ ಪರಿಸ್ಥಿತಿ, ಕಸ್ತೂರಿ ರಂಗನ್ ಕರಡು ಅಧಿಸೂಚನೆಯ ಸಂಕಷ್ಟ ಸೇರಿದಂತೆ ಜನರನ್ನು ಕಾಡುತ್ತಿರುವ ಜ್ವಲಂತ ಸಮಸ್ಯೆಗಳು ಅವರ ಕಣ್ಣಿಗೆ ಕಾಣಲೇ ಇಲ್ಲ. ಮನುಸ್ಮೃತಿ ಪಾಲಿಸುವ ಅವರಿಗೆ ಸಂವಿಧಾನದ ಆಶಯಗಳೇ ಬೇಕಿಲ್ಲ ಎಂದು ದೂರಿದರು.
ವಾಲ್ಮೀಕಿ ನಿಗಮದ ಹಗರಣದಲ್ಲಿ ಆರೋಪ ಬಂದಾಗ ಅಂದು ನಾನೇ ಸ್ವಯಂ ರಾಜೀನಾಮೆ ನೀಡಿದ್ದೆ. ಅಂದು ರಾಜ್ಯದ ತನಿಖಾ ಸಂಸ್ಥೆಗಳು ಆರೋಪ ಮುಕ್ತ ಮಾಡಿವೆ. ಅದರೆ, ಬಿಜೆಪಿ ನಾಯಕರು ಕೇಂದ್ರದ ತನಿಖಾ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಂಡು ಹಗರದಲ್ಲಿ ಮತ್ತೆ ಸಿಲುಕಿಸುವ ಪ್ರಯತ್ನ ಮಾಡಿವೆ ಎಂದು ಆರೋಪಿಸಿದರು.
ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರ ಮೇಲೂ ಆರೋಪವಿದೆ. ರಾಜ್ಯಪಾಲರ ಅನುಮತಿ ಕೋರಲಾಗಿದೆ. ಆದರೆ, ಅವರು ಎನ್ಡಿಎ ಭಾಗವಾಗಿರುವ ಕಾರಣ ಅವರನ್ನು ರಕ್ಷಿಸಲಾಗುತ್ತಿದೆ. ಪರಿಶಿಷ್ಟ ಪಂಗಡದ ನನ್ನನ್ನು ಸಿಲುಕಿಸಲಾಗುತ್ತಿದೆ ಎಂದರು.
ನಾನು ನಿರಪರಾಧಿ. ಆದರೆ, ಸಂವಿಧಾನದ ಮೇಲೆ ನಂಬಿಕೆ ಇಟ್ಟು. ಪಕ್ಷಕ್ಕೆ, ಸರ್ಕಾರಕ್ಕೆ, ಅಭಿವೃದ್ಧಿ ಗೆ ಆಗುತ್ತಿರುವ ಅಡ್ಡಿ ನಿವಾರಣೆಗೆ ರಾಜೀನಾಮೆ ನೀಡುತ್ತಿದ್ದೇನೆ ಎಂದು ಹೇಳಿದರು.
ಬಿಜೆಪಿ ಸುಳ್ಳು ಆರೋಪಗಳ ವಿರುದ್ಧ ಪ್ರತಿ ಕ್ಷೇತ್ರದ ಜನರಲ್ಲೂ ಜಾಗೃತಿ ಮೂಡಿಸುತ್ತೇನೆ. ರಾಜ್ಯದ ಎಲ್ಲೆಡೆ ಪ್ರವಾಸ ಮಾಡುತ್ತೇನೆ ಎಂದರು.
ಬಹುಕೋಟಿ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಪಕ್ಷಗಳಾದ ಬಿಜೆಪಿ ಮತ್ತು ಜೆಡಿಎಸ್ ತೀವ್ರ ಪ್ರತಿಭಟನೆ ನಡೆಸಿ ಸಚಿವರ ರಾಜೀನಾಮೆಗೆ ಪಟ್ಟು ಹಿಡಿದಿದ್ದವು.
ವರದಿ : ಜಿಲಾನಸಾಬ್ ಬಡಿಗೇರ್




















