ಪೊನ್ನಂಪೇಟೆ : ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ಕುಟ್ಟದ ಶ್ರೀಕೃಷ್ಣ ದೇವಸ್ಥಾನದಲ್ಲಿ ನಡೆದ ಕಾರ್ಯಕ್ರಮಕ್ಕೆ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಮಾನ್ಯ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಯವರಾದ ಶ್ರೀ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ ರವರು, ತಮ್ಮ ಧರ್ಮಪತ್ನಿ ಶ್ರೀಮತಿ ಕಾಂಚನ್ ಪೊನ್ನಣ್ಣ ರವರೊಂದಿಗೆ ಆಗಮಿಸಿದರು.
ಕೃಷ್ಣಾಷ್ಟಮಿ ಪ್ರಯುಕ್ತ ಶ್ರೀ ಕ್ಷೇತ್ರದಲ್ಲಿ ನಡೆಯುತ್ತಿರುವ ಕಾರ್ಯಕ್ರಮದಲ್ಲಿ ಭಾಗವಹಿಸಿ ಎಲ್ಲರಿಗೂ ಹಬ್ಬದ ಶುಭಾಶಯ ಕೋರಿದ ಮಾನ್ಯ ಶಾಸಕರು, ಅಷ್ಟಮಿಯ
ಶುಭಾಷಯಗಳನ್ನು ಕೋರಿ ,ಎಲ್ಲರಿಗೂ ಒಳ್ಳೆಯದು ಮಾಡಲಿ ಎಂದು ಹಾರೈಸಿದರು.
ಈ ಸಂದರ್ಭದಲ್ಲಿ ಪೊನ್ನಂಪೇಟೆ ಬ್ಲಾಕ್ ಅಧ್ಯಕ್ಷರಾದ ಮಿದೇರಿರ ನವೀನ್, ಕುಟ್ಟ ವಲಯ ಅಧ್ಯಕ್ಷರಾದ ರಾಮಕೃಷ್ಣ, ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷರಾದ ಕಾಳಿಮಾಡ ಪ್ರಶಾಂತ್, ಕುಟ್ಟ ಮಾಜಿ ವಲಯ ಅಧ್ಯಕ್ಷರಾದ ಮುಕಟೀರ ನವೀನ್ ಅಯ್ಯಪ್ಪ, ಶ್ರೀಮಂಗಲ ವಲಯ ಅಧ್ಯಕ್ಷರಾದ ಪಾಲ್ವಿನ್ ಪೂಣಚ್ಚ, ತಿತೀರ ಮಂದಣ್ಣ, ರಾಜನ್, ಸುರೇಶ್, ಶೇಖರ್, ಫಾರ್ದಿನ್ ಹಾಗೂ ಪ್ರಮುಖರು ಉಪಸ್ಥಿತರಿದ್ದರು.
ವರದಿ : ಪ್ರಿತುನ್ ಪೂವಣ್ಣ




















