ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಮಡಿಕೇರಿಯಲ್ಲಿ ಪ್ರಜಾಸೇವೆ ಆಂದೋಲನಕ್ಕೆ ಶಾಸಕ ಅಜ್ಜಿಕುಟ್ಟಿರ ಎಸ್. ಪೊನ್ನಣ್ಣರವರಿಂದ ಚಾಲನೆ

ಮಡಿಕೇರಿ :ಕರ್ನಾಟಕ ರಾಜ್ಯ ಸರಕಾರ ಹಾಗೂ ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಡಿ.ಕೆ ಶಿವಕುಮಾರ್ ರವರ ಮಹತ್ವಕಾಂಕ್ಷೆಯ “ಪ್ರಜಾ ಸೇವೆ ಆಂದೋಲನ”ದ ಮೊದಲ ಸಭೆ ಇಂದು ಮಡಿಕೇರಿಯಲ್ಲಿ ಜರುಗಿತು.

ಮಡಿಕೇರಿಯ ಅಂಬೇಡ್ಕರ್ ಭವನ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ‘ಪ್ರಜಾಸೇವೆ’ ಕಾರ್ಯಕ್ರಮವನ್ನು ಇಂದು ಮಾನ್ಯ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ನರೇಂದ್ರ ಸ್ವಾಮಿ ರವರೊಂದಿಗೆ ಮಾನ್ಯ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಗಳು ಹಾಗೂ ವಿರಾಜಪೇಟೆ ವಿಧಾನ ಸಭಾ ಕ್ಷೇತ್ರದ ಶಾಸಕರಾದ ಶ್ರೀ ಅಜ್ಜಿಕುಟ್ಟಿರ ಎಸ್. ಪೊನ್ನಣ್ಣ ಅವರು ಉದ್ಘಾಟಿಸಿ, ಸಾರ್ವಜನಿಕ ಸೇವೆಗಳಿಗೆ ಚಾಲನೆ ನೀಡಲಾಯಿತು.

ಸಭೆಯನ್ನು ಉದ್ದೇಶಿಸಿ ಮಾತನಾಡಿದ ಮಾನ್ಯ ವಿರಾಜಪೇಟೆ ಶಾಸಕರು ಹಾಗೂ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಯವರಾದ ಶ್ರೀ ಎ.ಎಸ್ ಪೊನ್ನಣ್ಣ ರವರು, ಜನರಿಗೆ ಅತ್ಯುತ್ತಮ ಸೇವೆಯನ್ನು ನೀಡುತ್ತಾ ಜನರಿಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ಶ್ರೀ ಡಿ.ಕೆ ಶಿವಕುಮಾರ್ ನೇತೃತ್ವದ ಕರ್ನಾಟಕ ರಾಜ್ಯ ಕಾಂಗ್ರೆಸ್ ಸರಕಾರವು ಸದಾ ಹೊಸ ಹೊಸ ಯೋಜನೆಗಳನ್ನು ಜಾರಿಗೆ ತರಲು ಚಿಂತಿಸುತ್ತಿದೆ. ಅದರ ಭಾಗವಾಗಿ ಈ ಸಂದರ್ಭದಲ್ಲಿ ಮಾನ್ಯ ಮುಖ್ಯಮಂತ್ರಿಗಳು “ಪ್ರಜಾ ಸೇವೆ” ಎಂಬ ಹೊಸ ಆಂದೋಲನವನ್ನು ಆರಂಭಿಸಿದ್ದು, ಈ ಕಾರ್ಯಕ್ರಮದಲ್ಲಿ ಪ್ರತಿ 15 ದಿನಗಳಿಗೊಮ್ಮೆ ರಾಜ್ಯದ ಸಚಿವರುಗಳು ಪ್ರತ್ಯೇಕ ತಾಲೂಕುಗಳಲ್ಲಿ ಅಧಿಕಾರಿಗಳ ಹಾಗೂ ಶಾಸಕರುಗಳ ಸಮ್ಮುಖದಲ್ಲಿ ವಿಶೇಷ ಸಭೆಗಳನ್ನು ನಡೆಸಿ ಜನರ ಸಮಸ್ಯೆಗಳನ್ನು ಆಲಿಸುವುದರೊಂದಿಗೆ ಮತ್ತಷ್ಟು ಪರಿಣಾಮಕಾರಿಯಾಗಿ ಜನರ ಸೇವೆಯನ್ನು ಮಾಡಬೇಕು ಎಂಬ ಉದ್ದೇಶವನ್ನು ಹೊಂದಿದ್ದಾರೆ. ಇಂದು ಮಡಿಕೇರಿಯಲ್ಲಿ ಈ ಕಾರ್ಯಕ್ರಮದ ಮೊದಲ ಸಭೆಯು ನಡೆಯುತ್ತಿದ್ದು ಕೊಡಗು ಜಿಲ್ಲೆಯಲ್ಲಿ ಈ ಕಾರ್ಯಕ್ರಮಕ್ಕೆ ಚಾಲನೆ ದೊರಕಿದಂತಾಗಿದೆ. ಮುಂದೆ ಸತತವಾಗಿ ಈ ಕಾರ್ಯಕ್ರಮಗಳು ನಡೆಯಲಿದ್ದು, ಜನಸಾಮಾನ್ಯರಿಗೆ ಆಡಳಿತ ವರ್ಗಕ್ಕೆ ತಮ್ಮ ದೂರು ದುಮ್ಮಾನಗಳನ್ನು ಸಲ್ಲಿಸಿ ತಮ್ಮ ಕೆಲಸಗಳನ್ನು ಮಾಡಿಸಿಕೊಳ್ಳಲು ಇದು ಮತ್ತಷ್ಟು ಸಹಕಾರಿಯಾಗಲಿದೆ .
ಸರ್ಕಾರದ ವಿವಿಧ ಜನಕಲ್ಯಾಣ ಯೋಜನೆಗಳು ಹಾಗೂ ಅಗತ್ಯ ನಾಗರಿಕ ಸೇವೆಗಳನ್ನು ಜನಸಾಮಾನ್ಯರ ಮನೆಬಾಗಿಲಿಗೆ ನೇರವಾಗಿ, ಸುಲಭವಾಗಿ ತಲುಪಿಸುವುದೇ ಈ ಕಾರ್ಯಕ್ರಮದ ಮುಖ್ಯ ಉದ್ದೇಶ.

ಪ್ರತಿಯೊಬ್ಬ ಅರ್ಹ ಫಲಾನುಭವಿಗೆ ಸರ್ಕಾರದ ಸೌಲಭ್ಯಗಳು ಪಾರದರ್ಶಕವಾಗಿ ಸಿಗಬೇಕು ಹಾಗೂ ಸಾರ್ವಜನಿಕರ ಕುಂದುಕೊರತೆಗಳು ಒಂದೇ ವೇದಿಕೆಯಲ್ಲಿ ಪರಿಹಾರವಾಗಬೇಕು ಎಂಬ ಆಶಯವನ್ನು ಈ ಸಂದರ್ಭದಲ್ಲಿ ಹಂಚಿಕೊಳ್ಳಲಾಯಿತು.
ಜನರ ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸಿ, ಅವರ ಏಳಿಗೆಗೆ ಶ್ರಮಿಸುವುದೇ ನಮ್ಮ ಸರ್ಕಾರದ ಮೊದಲ ಆದ್ಯತೆಯೆಂದರು.

ಈ ಸಂದರ್ಭದಲ್ಲಿ ಮಡಿಕೇರಿ ಶಾಸಕರಾದ ಶ್ರೀ ಮಂತರ್ ಗೌಡ, ಜಿಲ್ಲಾ ಗ್ಯಾರಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷರಾದ ತಿತೀರ ಧರ್ಮಜ ಉತ್ತಪ್ಪ, ಜಿಲ್ಲಾಧಿಕಾರಿಗಳಾದ ಶ್ರೀ ಸೋಮಶೇಖರ್, ಮಡಿಕೇರಿ ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷರಾದ ಮಂದ್ರೀರ ಮೋಹನ್ ದಾಸ್, ಹಿರಿಯ ಅಧಿಕಾರಿಗಳು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

✍️ವರದಿ: ಪ್ರಿತುನ್ ಪೂವಣ್ಣ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

ಚಿಕ್ಕನಾಯಕನಹಳ್ಳಿ ಯಲ್ಲಿ ರೈತರನ್ನು ಒಕ್ಕಲೆಬ್ಬಿಸಿರುವುದರ ವಿರುದ್ಧ ಕರ್ನಾಟಕ ವಿಧಾನ ಸಭೆಯ, ಅನುಸೂಚಿತ ಜಾತಿ ಮತ್ತು ಅನುಸೂಚಿತ ಪಂಗಡಗಳ ಕಲ್ಯಾಣ ಸಮಿತಿಯ, ಅಧ್ಯಕ್ಷರು ಹಾಗೂ ಕೊಳ್ಳೇಗಾಲ ಶಾಸಕರಾದ ಎ.ಆರ್ ಕೃಷ್ಣಮೂರ್ತಿ ರವರಿಗೆ ರೈತರಿಂದ ದೂರು.

ಚಿಕ್ಕನಾಯಕನಹಳ್ಳಿ ಯಲ್ಲಿ ರೈತರನ್ನು ಒಕ್ಕಲೆಬ್ಬಿಸಿರುವುದರ ವಿರುದ್ಧ ಕರ್ನಾಟಕ ವಿಧಾನ ಸಭೆಯ, ಅನುಸೂಚಿತ ಜಾತಿ ಮತ್ತು ಅನುಸೂಚಿತ ಪಂಗಡಗಳ ಕಲ್ಯಾಣ ಸಮಿತಿಯ, ಅಧ್ಯಕ್ಷರು ಹಾಗೂ ಕೊಳ್ಳೇಗಾಲ ಶಾಸಕರು ಆದಂತಹ  ಎ.ಆರ್ ಕೃಷ್ಣಮೂರ್ತಿ ರವರಿಗೆ ರೈತರಿಂದ ದೂರು.

error: Content is protected !!