ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಸೇತುವೆ ಅಭಿವೃದ್ಧಿಗೆ ಭೂಮಿ ಪೂಜೆ

ಕೊಳ್ಳೇಗಾಲ : ತಾಲ್ಲೂಕಿಗೆ ಒಳಪಡುವ
ಹನೂರು ವಿಧಾನಸಭಾ ವ್ಯಾಪ್ತಿಗೆ ಸೇರಿದ
ಚಿಕ್ಕಲ್ಲೂರು ರಸ್ತೆಯಲ್ಲಿ 5.5 ಕೋಟಿ ರೂ. ವೆಚ್ಚದಲ್ಲಿ ಎರಡು ಸೇತುವೆ ಅಭಿವೃದ್ಧಿಗೆ ಭೂಮಿ ಪೂಜೆ ನೆರವೇರಿಸಿದ ಹನೂರು ಶಾಸಕ ಎಂ.ಆರ್ ಮಂಜುನಾಥ್ ಸಂಚಾರ ಸಮಸ್ಯೆಗೆ ಶಾಶ್ವತ ಪರಿಹಾರ ಒದಗಿಸುವ ನಿಟ್ಟಿನಲ್ಲಿ ಶ್ರಮಿಸುವುದಾಗಿ ಘೋಷಿಸಿದರು.

ಕೊಳ್ಳೇಗಾಲ‌ ಕ್ಷೇತ್ರದ ಗ್ರಾಮೀಣ ಭಾಗಗಳ ಮೂಲಸೌಕರ್ಯ ಬಲಪಡಿಸುವ ನಿಟ್ಟಿನಲ್ಲಿ ಹನೂರು ವಿಧಾನಸಭಾ ಕ್ಷೇತ್ರದ ಚಿಕ್ಕಲ್ಲೂರು ರಸ್ತೆಯಲ್ಲಿ ಗೋನಾಳ ಬಸವೇಶ್ವರ ದೇವಸ್ಥಾನದ ಸಮೀಪ ಹಳ್ಳದಲ್ಲಿ ಲೋಕೋಪಯೋಗಿ ಇಲಾಖೆಯ 2.50 ಕೋಟಿ ವೆಚ್ಚದಲ್ಲಿ ಸೇತುವೆ ನಿರ್ಮಾಣ ಕಾಮಗಾರಿ ಹಾಗೂ ಕೊತ್ತನೂರಿನ ಜಿ.ವಿ. ಗೌಡ ಶಾಲೆ ಸಮೀಪ ಹಳ್ಳದಲ್ಲಿ 3.ಕೋಟಿ ವೆಚ್ಚದಲ್ಲಿ ಸೇತುವೆ ನಿರ್ಮಾಣ ಒಟ್ಟು 5.5 ಕೋಟಿ ವೆಚ್ಚದ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಎಂ. ಆರ್. ಮಂಜುನಾಥ್ ಅವರು ಭೂಮಿಪೂಜೆ ನೆರವೇರಿಸಿ ಚಾಲನೆ ನೀಡಿದರು.

ಕಾಮಗಾರಿಗಳ ಭೂಮಿ ಪೂಜೆ ನೆರವೇರಿಸಿ ಶಾಸಕ ಎಂ.ಆರ್. ಮಂಜುನಾಥ್ ರವರು ಮಾತನಾಡಿ
ಬಹುದಿನಗಳಿಂದ ಈ ಭಾಗದ ಜನರು ಎದುರಿಸುತ್ತಿದ್ದ ಸಂಚಾರದ ಸಮಸ್ಯೆಗಳಿಗೆ ಸೇತುವೆಗಳ ಅಭಿವೃದ್ಧಿ ಪರಿಹಾರ ಒದಗಿಸಲಿದ್ದು, ಮಳೆಗಾಲದಲ್ಲಿ ನೀರು ಹರಿದು ರಸ್ತೆ ಸಂಪರ್ಕ ಕಡಿತಗೊಳ್ಳುವಂತಹ ಪರಿಸ್ಥಿತಿಯನ್ನು ತಪ್ಪಿಸಲು ಸೇತುವೆಗಳ ನಿರ್ಮಾಣದಿಂದ ಸುತ್ತಮುತ್ತಲಿನ ಗ್ರಾಮಗಳ ಜನರು, ವಿದ್ಯಾರ್ಥಿಗಳು, ರೈತರು ಹಾಗೂ ವಾಹನ ಸವಾರರಿಗೆ ಸುಗಮ, ಸುರಕ್ಷಿತ ಹಾಗೂ ನಿರಂತರ ಸಂಚಾರ ವ್ಯವಸ್ಥೆ ಕಲ್ಪಿಸಲು ಸಾಧ್ಯವಾಗಲಿದೆ ಎಂದು ಅವರು ತಿಳಿಸಿದರು.

ಗ್ರಾಮೀಣ ಪ್ರದೇಶಗಳ ಅಭಿವೃದ್ಧಿಗೆ ಅಗತ್ಯವಿರುವ ಮೂಲಸೌಕರ್ಯ ಕಾಮಗಾರಿಗಳಿಗೆ ಆದ್ಯತೆ ನೀಡಲಾಗುತ್ತಿದೆ. ಜನರ ದೈನಂದಿನ ಬದುಕಿಗೆ ನೇರವಾಗಿ ಅನುಕೂಲವಾಗುವ ರಸ್ತೆ, ಸೇತುವೆ ಸೇರಿದಂತೆ ಅಗತ್ಯ ಕಾಮಗಾರಿಗಳನ್ನು ಹಂತ ಹಂತವಾಗಿ ಕೈಗೆತ್ತಿಕೊಂಡು ಕ್ಷೇತ್ರದ ಅಭಿವೃದ್ಧಿಗೆ ಶ್ರಮಿಸಲಾಗುತ್ತಿದೆ ಎಂದು ಶಾಸಕರು ತಿಳಿಸಿದರು.

ಈ ಸಂದರ್ಭದಲ್ಲಿ ಲೋಕೋಪಯೋಗಿ ಇಲಾಖೆಯ ಎಇಇ ಕುಮಾರ್, ನಾಗರಾಜು, ಭದ್ರ, ಲೋಕೇಶ್, ಷಣ್ಮುಖ, ಮಹೇಶ್, ಮಹದೇವಸ್ವಾಮಿ, ಪಾಪಣ್ಣ, ಮಲಯಪ್ಪ, ನಾಗಣ್ಣ, ಬಸವರಾಜು, ರಾಜಗೋಪಾಲ್, ಮಂಜೇಶ್ ಗೌಡ, ಮಣಿ, ಗೋವಿಂದ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ವರದಿ: ಕೊಡಕ್ಕಲ್ ಶಿವಪ್ರಸಾದ್, ಶಿವಮೊಗ್ಗ/ ಬೆಂಗಳೂರು.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

ಚಿಕ್ಕನಾಯಕನಹಳ್ಳಿ ಯಲ್ಲಿ ರೈತರನ್ನು ಒಕ್ಕಲೆಬ್ಬಿಸಿರುವುದರ ವಿರುದ್ಧ ಕರ್ನಾಟಕ ವಿಧಾನ ಸಭೆಯ, ಅನುಸೂಚಿತ ಜಾತಿ ಮತ್ತು ಅನುಸೂಚಿತ ಪಂಗಡಗಳ ಕಲ್ಯಾಣ ಸಮಿತಿಯ, ಅಧ್ಯಕ್ಷರು ಹಾಗೂ ಕೊಳ್ಳೇಗಾಲ ಶಾಸಕರಾದ ಎ.ಆರ್ ಕೃಷ್ಣಮೂರ್ತಿ ರವರಿಗೆ ರೈತರಿಂದ ದೂರು.

error: Content is protected !!