ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಜೇಡಿ ಮಣ್ಣಿನ ಗಣಪತಿ ಮೂರ್ತಿ ತಯಾರಿಕಾ ಸ್ಪರ್ಧೆ

ಮೈಸೂರು ಜಿಲ್ಲೆಯ ನಂಜನಗೂಡು ಪಟ್ಟಣದ ದಳವಾಯಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಜೇಡಿ ಮಣ್ಣಿನ ಗಣಪತಿ ಮೂರ್ತಿ ತಯಾರಿಕಾ ಸ್ಪರ್ಧೆಯನ್ನು ಮಡಿಲು ಶಿಕ್ಷಣ ಮತ್ತು ಗ್ರಾಮೀಣ ಅಭಿವೃದ್ಧಿ ಸಂಸ್ಥೆ ಮೈಸೂರು ಹಾಗೂ ನೆಸ್ಲೆ ಇಂಡಿಯಾ ಲಿಮಿಟೆಡ್ ನಂಜನಗೂಡು ಸಹಯೋಗದೊಂದಿಗೆ ಏರ್ಪಡಿಸಲಾಗಿತ್ತು.
ಶಾಲಾ ವಿದ್ಯಾರ್ಥಿಗಳು ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.
ಇವರಿಗೆ ಸಂಸ್ಥೆಯ ಕಾರ್ಯ ನಿರ್ವಾಹಕ ನಿರ್ದೇಶಕರಾದ ಶ್ರೀನಿವಾಸ್ ಅವರು ಸಮಾರಂಭದಲ್ಲಿ ವಿದ್ಯಾರ್ಥಿಗಳು ಹಾಗೂ ಶಿಕ್ಷಕರನ್ನು ಉದ್ದೇಶಿಸಿ ಮಾತನಾಡಿ ದೇಶ ವಿದೇಶಗಳಲ್ಲಿ ಗಣಪತಿ ಹಬ್ಬವನ್ನು ಸಂಭ್ರಮದಿಂದ ಆಚರಿಸುತ್ತಿದ್ದಾರೆ, ಗಣೇಶನ ತಯಾರಿಗೆ ಕೈಯಲ್ಲಿ ರಾಸಾಯನಿಕ ವಸ್ತುಗಳನ್ನು ಬಳಸಿ ಪರಿಸರ ಹಾನಿಗೆ ಕಾರಣರಾಗುತ್ತಿದ್ದಾರೆ ಹಾಗೂ ಧ್ವನಿವರ್ಧಕಗಳನ್ನು ಬಳಸಿ, ಪಟಾಕಿಗಳನ್ನು ಸಿಡಿಸುತ್ತಿದ್ದಾರೆ ಇವುಗಳಿಂದ ಪರಿಸರ ಮಾಲಿನ್ಯ ವಾಯುಮಾಲಿನ್ಯ ಸೇರಿದಂತೆ ಶಬ್ದ ಮಾಲಿನ್ಯವೂ ಸಹ ಉಂಟಾಗುತ್ತಿದೆ.
ಪ್ರತಿಷ್ಠಾಪನೆ ಮಾಡಿದ ಗಣೇಶ ಮೂರ್ತಿಗಳನ್ನು ನೀರಿನಲ್ಲಿ ವಿಸರ್ಜಿಸಿದಾಗ ಕರಗದ ರಾಸಾಯನಿಕಗಳು ಜಲಚರ ಪ್ರಾಣಿಗಳ ಮೇಲೆ ಹಾನಿಯನ್ನು ಉಂಟು ಮಾಡುತ್ತಿವೆ.
ಈ ಆಚರಣೆಗಳು ಪ್ರಕೃತಿಗೆ ಪ್ರಿಯವಾಗಿರಲಿ ಎಂದು ಜಾಗೃತಿ ಮೂಡಿಸಿದರು. ನೈಸರ್ಗಿಕ ಪ್ರಿಯ ಗಣೇಶಗಳನ್ನು ಆರಾಧಿಸಿ ದೇವರಿಗೆ ಪ್ರಿಯವಾಗಿ ಬದಲಾಗೋಣ ಎಂದರು.
ನಂತರ ಮುಖ್ಯ ಶಿಕ್ಷಕರಾದ ನಾಗೇಶ್ ನಾಯಕ್ ಅವರು ಕೂಡ ನೈಸರ್ಗಿಕ ಗಣೇಶ ಮೂರ್ತಿಯನ್ನು ಉದ್ದೇಶಿಸಿ ಮಕ್ಕಳನ್ನು ಶಿಕ್ಷಕರನ್ನು ಕುರಿತು ಮಾತನಾಡಿದರು ನಂತರ ಮಕ್ಕಳಿಗೆ ಹಾಗೂ ಶಿಕ್ಷಕರಿಗೆ ಪ್ರತಿಜ್ಞಾವಿಧಿಯನ್ನು ಬೋಧಿಸಲಾಯಿತು. ಜಯಶೀಲರಾದ ವಿದ್ಯಾರ್ಥಿಗಳಿಗೆ ಬಹುಮಾನವನ್ನು ವಿತರಿಸಲಾಯಿತು.
ಈ ಸಮಾರಂಭದಲ್ಲಿ ಶಾಲಾ ವಿದ್ಯಾರ್ಥಿಗಳು ಶಿಕ್ಷಕ ವರ್ಗ ಹಾಜರಿದ್ದರು.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!