ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ERO/AERO ಮುಂದೆ ಹಾಜರಾತಿ ಜ್ಞಾಪನ ಪತ್ರ

ಬೆಂಗಳೂರು: ಎಸ್ ಐ ಆರ್-2026 – ಹಿರಿಯ ನಾಗರಿಕರು/ವಿಕಲಚೇತನರು/ಅಸ್ವಸ್ಥರು/ವಿದೇಶದಲ್ಲಿರುವ ಮತದಾರರಿಗೆ ನೀಡಲಾದ ನೋಟಿಸ್‌ಗಳ ವಿಲೇವಾರಿ – ವಯಸ್ಕ ಕುಟುಂಬ ಸದಸ್ಯರ ಮೂಲಕ ERO/AERO ಮುಂದೆ ಹಾಜರಾಗುವ ಕುರಿತು ಭಾರತ ಮುಖ್ಯ ಚುನಾವಣಾ ಆಯುಕ್ತರು ಪ್ರಕಟಣೆಯಲ್ಲಿ ರಾಜ್ಯದ ಜಿಲ್ಲಾ ಚುನಾವಣಾಧಿಕಾರಿ, ಬೆಂಗಳೂರು ಹಾಗೂ ಮುಖ್ಯ ಆಯುಕ್ತರು, GBA, ಎಲ್ಲಾ ಜಿಲ್ಲೆಗಳ ಜಿಲ್ಲಾ ಚುನಾವಣಾಧಿಕಾರಿಗಳು ಮತ್ತು ಉಪ ಆಯುಕ್ತರು, ಹೆಚ್ಚುವರಿ ಜಿಲ್ಲಾ ಚುನಾವಣಾಧಿಕಾರಿಗಳು, BBMP ಕೇಂದ್ರ, BBMP ಉತ್ತರ ಮತ್ತು BBMP ದಕ್ಷಿಣ ಚುನಾವಣಾ ಜಿಲ್ಲೆಗಳು ಹಾಗೂ ಬೆಂಗಳೂರು ನಗರ ನಿಗಮಗಳ (ಉತ್ತರ, ದಕ್ಷಿಣ ಮತ್ತು ಕೇಂದ್ರ) ಆಯುಕ್ತರು ಹಾಗೂ ಹೆಚ್ಚುವರಿ ಜಿಲ್ಲಾ ಚುನಾವಣಾಧಿಕಾರಿ ಮತ್ತು ಬೆಂಗಳೂರು ನಗರ ಉಪ ಆಯುಕ್ತರು ಅವರ ಗಮನವನ್ನು ವಿಷಯ ಹಾಗೂ ಉಲ್ಲೇಖದತ್ತ ಸೆಳೆಯಲು ಈ ಕೆಳಗಿನ ವಿಷಯಗಳನ್ನು ಪ್ರಸ್ತಾಪಿಸಿದರು.

ಹಿರಿಯ ನಾಗರಿಕರು/ವಿಕಲಚೇತನರು/ಅಸ್ವಸ್ಥರು/ವಿದೇಶದಲ್ಲಿರುವ ಮತದಾರರಿಗೆ ನೀಡಲಾಗಿರುವ ನೋಟಿಸ್‌ಗಳ ವಿಲೇವಾರಿಗಾಗಿ, ಅವರ ಪರವಾಗಿ ಯಾವುದೇ ವಯಸ್ಕ ಕುಟುಂಬ ಸದಸ್ಯರು ERO/AERO ಅವರ ಮುಂದೆ ಖುದ್ದಾಗಿ ಹಾಜರಾಗಿ, ಸಂಬಂಧಪಟ್ಟ ಮತದಾರರಿಗೆ ಸಂಬಂಧಿಸಿದ ಅಗತ್ಯ ದಾಖಲೆಗಳು/ಮಾಹಿತಿಯನ್ನು ಸಲ್ಲಿಸಲು ಅವಕಾಶ ಕಲ್ಪಿಸುವಂತೆ EROಗಳು ಮತ್ತು AEROಗಳಿಗೆ ಅಗತ್ಯ ಸೂಚನೆಗಳನ್ನು ನೀಡುವಂತೆ ಕೋರಲಾಗಿದೆ.

ಇದಲ್ಲದೆ, EROಗಳು/AEROಗಳು ತಮ್ಮ ಹಂತದಲ್ಲಿ ವಾರಕ್ಕೊಮ್ಮೆ ನಡೆಯುವ ರಾಜಕೀಯ ಪಕ್ಷಗಳ ಸಭೆಗಳಲ್ಲಿ ನೋಟಿಸ್‌ಗಳನ್ನು ನೀಡುವ ಹಾಗೂ ಅವುಗಳನ್ನು ವಿಲೇವಾರಿ ಮಾಡುವ ಸಂದರ್ಭದಲ್ಲಿ ಅನುಸರಿಸಲಾಗುತ್ತಿರುವ ಕಾರ್ಯವಿಧಾನದ ಕುರಿತು ವಿವರಿಸುವಂತೆ ಕೋರಲಾಗಿದೆ ಎಂದು ಎಸ್. ಯೋಗೇಶ್ವರ, ಜಂಟಿ ಮುಖ್ಯ ಚುನಾವಣಾಧಿಕಾರಿ, DPAR (ಚುನಾವಣೆಗಳು) ಅವರು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

ವರದಿ: ಕೊಡಕ್ಕಲ್ ಶಿವಪ್ರಸಾದ್, ಶಿವಮೊಗ್ಗ/ ಬೆಂಗಳೂರು

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!