ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವಾರ್ಷಿಕ ಮಹಾಜನ ಸಭೆ

ಬಳ್ಳಾರಿ / ಕಂಪ್ಲಿ : ಸಹಕಾರ ಸಂಘಗಳ ಅಭಿವೃದ್ಧಿಗೆ ಪ್ರತಿಯೊಬ್ಬರ ಸಹಕಾರ ಅಗತ್ಯವಾಗಿದೆ ಎಂದು ಗೊರವರ ಹನುಮಂತಪ್ಪ ಹೇಳಿದರು. ತಾಲೂಕಿನ ದೇವಲಾಪುರ ಗ್ರಾಮದಲ್ಲಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಕಚೇರಿ ಆವರಣದಲ್ಲಿ ವಾರ್ಷಿಕ ಮಹಾಜನ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿ, ಸಂಘವು ಇತ್ತೀಚಿನ ದಿನಮಾನದಲ್ಲಿ ಅಭಿವೃದ್ಧಿ ಕಡೆಗೆ ಮುಖ ಮಾಡಿದೆ. ಇಲ್ಲಿನ ಸಂಘದ ಸಿಬ್ಬಂದಿಗಳು ಸಕಾಲದಲ್ಲಿ ರೈತರಿಗೆ ಸಾಲ, ಗೊಬ್ಬರ ಸೇರಿದಂತೆ ಸರ್ಕಾರದ ಯೋಜನೆಗಳನ್ನು ರೈತರಿಗೆ ತಲುಪಿಸಲು ಶ್ರಮಿಸಬೇಕು ಎಂದರು. ನಂತರ ಪ್ರಭಾರಿ ಮುಖ್ಯ ಕಾರ್ಯನಿರ್ವಾಹಕ ಲಿಂಗನಗೌಡ ವಾರ್ಷಿಕ ವರದಿ ಮಂಡಿಸಿ ಮಾತನಾಡಿ, ಸಂಘವು 3204 ಸದಸ್ಯರಿದ್ದು, ಸುಮಾರು 81 ಲಕ್ಷ 98 ಶೇರು ಬಂಡವಾಳ ಹೊಂದಿದೆ. 2 ಕೋಟಿ ರಸಗೊಬ್ಬರ ವ್ಯಾಪಾರ ವಹಿವಾಟು ನಡೆಸಿ, 33 ಲಕ್ಷ ವ್ಯಾಪಾರ ಲಾಭ ಹೊಂದಿದೆ. 17 ಲಕ್ಷ 56 ಸಾವಿರ 775 ನಿವ್ವಳ ಲಾಭಗಳಿಸಿದೆ. ಸಂಘದ ಅಭಿವೃದ್ಧಿಗೆ ಸಹಕಾರ ಅಗತ್ಯವಾಗಿದೆ. 5 ಕೋಟಿ 12 ಲಕ್ಷ ರೈತರಿಗೆ ಸಾಲ ವಿತರಿಸಿದೆ ಎಂದರು.
ಈ ಸಂದರ್ಭದಲ್ಲಿ ಉಪಾಧ್ಯಕ್ಷ ವಿ.ಮುಕ್ಕಣ್ಣ, ನಿರ್ದೇಶಕರಾದ ಹನುಮಂತಪ್ಪ, ಗೌಡ್ರು ಕೆ.ಸಿದ್ದಪ್ಪ, ಷಣ್ಮುಕಪ್ಪ, ಮಲ್ಲಿಕಾರ್ಜುನ, ಹನುಮಂತಪ್ಪ, ಮಹಾದೇವಪ್ಪ, ಗುಬಾಜಿ ಶಿಲ್ಪಮ್ಮ, ರಮೇಶ, ಮಲ್ಲಮ್ಮ, ವಿಶ್ವನಾಥ, ಗಂಗಾಧರ, ವಿಪ್ಕೋ ಕಂಪನಿ ನಿರ್ದೇಶಕ ಗೌಡ್ರು ನಾಗರಾಜ, ಮುಖಂಡರಾದ ಜಿ.ಮರೇಗೌಡ, ಗೌಡ್ರು ಅಂಜಿಪ್ಪ, ದೇವರಮನೆ ಮಲ್ಲಿಕಾರ್ಜುನ ಸೊಂಗ್ಟಿ ರಾಮಯ್ಯ, ವಿರೇಶ, ಕೆ.ಶಿವಕುಮಾರ ಸೇರಿದಂತೆ ರೈತರು, ಸಿಬ್ಬಂದಿ ಇದ್ದರು.

ವರದಿ : ಜಿಲಾನಸಾಬ್ ಬಡಿಗೇರ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!