ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

79ನೇ ಕಲ್ಯಾಣ ಕರ್ನಾಟಕದ ಉತ್ಸವ ದಿನಾಚರಣೆಯ ಅಂಗವಾಗಿ ಧ್ವಜಾರೋಹಣ

ಕೊಪ್ಪಳ : 79ನೇ ಕಲ್ಯಾಣ ಕರ್ನಾಟಕದ ಉತ್ಸವ ದಿನಾಚರಣೆಯ ಅಂಗವಾಗಿ ಧ್ವಜಾರೋಹಣವನ್ನು ಯಲಬುರ್ಗಾ ತಾಲೂಕಿನ ಗುನ್ನಾಳ ಗ್ರಾಮದ ಪದವಿ ಪೂರ್ವ ಕಾಲೇಜಿನಲ್ಲಿ ಕಾಲೇಜಿನ ಉಪಾಧ್ಯಕ್ಷರಾದ ಶ್ರೀ ಲಕ್ಷ್ಮಣ್ ಆಚಾರ್ ಜೋಶಿ ಮತ್ತು ಪ್ರಾಂಶುಪಾಲರಾದ ಶ್ರೀ ಬಸವರಾಜ್ ಗಂಗಾಡಿ ಶಿಕ್ಷಕರು ನೆರವೇರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಪ್ರಾಂಶುಪಾಲರು, 1947 ಆಗಸ್ಟ್ 15ರಂದು ಭಾರತ ಸ್ವತಂತ್ರ ಪಡೆದರೂ ಹೈದರಾಬಾದ್ ಸಂಸ್ಥಾನದ ಅಡಿಯಲ್ಲಿ ಇದ್ದ ನಮ್ಮ ಕಲ್ಯಾಣ ಕರ್ನಾಟಕದ ಪ್ರದೇಶಗಳಿಗೆ ತಕ್ಷಣವೇ ಸ್ವತಂತ್ರ ದೊರೆಯಲಿಲ್ಲ. ನಿಜಾಮರ ಆಡಳಿತದಿಂದ ಮುಕ್ತರಾಗಿ ಅನೇಕ ತ್ಯಾಗ, ಬಲಿದಾನ ಮತ್ತು ಹೋರಾಟದ ಫಲವಾಗಿ 1948ರ ಸೆಪ್ಟಂಬರ್ 17ರಂದು ಹೈದರಾಬಾದ್ ಸಂಸ್ಥಾನ ಭಾರತ ಒಕ್ಕೂಟಕ್ಕೆ ಸೇರ್ಪಡೆ ಆಯಿತು. ಇದು ನಮ್ಮ ಪೂರ್ವಜರ ಹೋರಾಟ ಮತ್ತು ತ್ಯಾಗವನ್ನು ನೆನೆಸಿಕೊಳ್ಳುವ ದಿನ. ನಮ್ಮ ಕಲ್ಯಾಣ ಕರ್ನಾಟಕವನ್ನು ಕೃಷಿ ಮತ್ತು ಅಭಿವೃದ್ಧಿಯಲ್ಲಿ ಮುನ್ನಡೆಸುವ ಸಂಕಲ್ಪ ಮಾಡೋಣ ಎಂದು ಕಾಲೇಜಿನ ಪ್ರಾಂಶುಪಾಲರಾದ ಶ್ರೀ ಬಸವರಾಜ್ ಗಂಗಾಡಿ ಶಿಕ್ಷಕರು ಹೇಳಿದರು.
ಈ ಸಂದರ್ಭದಲ್ಲಿ ವಿಶ್ವಕರ್ಮ ದಿನಾಚರಣೆ ಕೂಡ ಆಚರಿಸಲಾಯಿತು. ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆಗೆ ಆಗಮಿಸಿದಂತ ಊರಿನ ಪ್ರಮುಖ ಮುಖಂಡರಾದ ಶ್ರೀ ಲಕ್ಷ್ಮಣ್ ಆಚಾರ್ ಜೋಶಿ, ಕಾಲೇಜಿನ ಉಪಾಧ್ಯಕ್ಷರು, ವಿಠ್ಠಲ ವಾಲ್ಮೀಕಿ, ಗುಂಡಪ್ಪ ವಂಕಲಕುಂಟಿ, ಶ್ರೀ ಕುಂಟೆಪ್ಪ ಬೀರಲದಿನ್ನಿ, ಶ್ರೀ ಯಂಕೋಬ ಗೋಸಲ್, ಸಂಜೀವಪ್ಪ ಭಜಂತ್ರಿ, ಶಿವಾನಂದ ಹೂಗಾರ್ ಹಾಗೂ ಕಾಲೇಜಿನ ಸಿಬ್ಬಂದಿ ವರ್ಗ ಮತ್ತು ವಿದ್ಯಾರ್ಥಿಗಳು ಇದ್ದರು.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!