
ತೀರ್ಥಹಳ್ಳಿ: ಮುಖ್ಯಮಂತ್ರಿ ಶ್ರೀ ಡಿ. ಕೆ. ಶಿವಕುಮಾರ್ ಅವರು ತೀರ್ಥಹಳ್ಳಿ ತಾಲ್ಲೂಕು ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘದ ಅಮೃತ ಮಹೋತ್ಸವವನ್ನು ಶನಿವಾರ ಉದ್ಘಾಟಿಸಿ ಮಾತನಾಡಿದರು.
ಈ ಸಂದರ್ಭದಲ್ಲಿ ಸಚಿವರಾದ ಶ್ರೀ ರಾಮಲಿಂಗಾರೆಡ್ಡಿ, ಮಧು ಬಂಗಾರಪ್ಪ, ಶಾಸಕ ಬೇಳೂರು ಗೋಪಾಲಕೃಷ್ಣ, ಆರಗ ಜ್ಞಾನೇಂದ್ರ, ಮಲೆನಾಡು ಅಭಿವೃದ್ಧಿ ಮಂಡಳಿ ಅಧ್ಯಕ್ಷ ಶ್ರೀ ಆರ್ ಎಂ ಮಂಜುನಾಥ ಗೌಡ, ಮಾಜಿ ಸಚಿವ ಕಿಮ್ಮನೆ ರತ್ನಾಕರ, ಟಿಎಪಿಸಿಎಂಎಸ್ ಅಧ್ಯಕ್ಷ ನಾಗರಾಜ್ ಶೆಟ್ಟಿ, ಪಟ್ಟಣ ಪಂಚಾಯತಿ ಅಧ್ಯಕ್ಷ ರತ್ನಾಕರ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.
ಇದೇ ಸಂದರ್ಭದಲ್ಲಿ ಸಿಎಂ ಶ್ರೀ ಡಿ ಕೆ ಶಿವಕುಮಾರ್ ಅವರು ಕಸ್ತೂರಿ ರಂಗನ್ ವರದಿ ವಿಚಾರವಾಗಿ ಚರ್ಚಿಸಲು ಶಿವಮೊಗ್ಗದ ತೀರ್ಥಹಳ್ಳಿಯಲ್ಲಿ ಶನಿವಾರ ಹಮ್ಮಿಕೊಂಡಿದ್ದ ಸಾರ್ವಜನಿಕರೊಂದಿಗೆ ನೇರ ಸಂವಾದ ಸಭೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಸಚಿವರಾದ ರಾಮಲಿಂಗಾರೆಡ್ಡಿ, ಮಧು ಬಂಗಾರಪ್ಪ, ಸಂಸದ ಬಿ ವೈ ರಾಘವೇಂದ್ರ, ಶಾಸಕ ಬೇಳೂರು ಗೋಪಾಲಕೃಷ್ಣ, ಆರಗ ಜ್ಞಾನೇಂದ್ರ, ಶಾರದ ಪೂರ್ಯನಾಯ್ಕ್, ಎಸ್ ಎನ್ ಚನ್ನಬಸಪ್ಪ, ಪರಿಷತ್ ಸದಸ್ಯರಾದ ಬಲ್ಕಿಸ್ ಬಾನು, ಧನಂಜಯ್ ಸರ್ಜಿ, ಡಿ ಎಸ್ ಅರುಣ್ ಮಲೆನಾಡು ಅಭಿವೃದ್ಧಿ ಮಂಡಳಿ ಅಧ್ಯಕ್ಷರಾದ ಮಂಜುನಾಥ ಗೌಡ, ಭದ್ರಾ ಅಚ್ಚುಕಟ್ಟು ಪ್ರದೇಶ ಪ್ರಾಧಿಕಾರ ಅಧ್ಯಕ್ಷ ಅಂಶುಂಮನ್, ಸೂಡಾ ಅಧ್ಯಕ್ಷ ಉಮೇಶ್, ಜವಳಿ ಅಭಿವೃದ್ಧಿ ನಿಗಮದ ಅಧ್ಯಕ್ಷ ಚೇತನ್ ಗೌಡ, ಶ್ರೀನಿವಾಸನ್ ಕರಿಯಣ್ಣ, ಆರ್ ಪ್ರಸನ್ನ ಕುಮಾರ್, ಹೆಚ್ ಪಿ ಯೋಗೀಶ್, ಎಂ ಶ್ರೀಕಾಂತ್ ಮತ್ತಿತರರು ಉಪಸ್ಥಿತರಿದ್ದರು.
ವರದಿ: ಕೊಡಕ್ಕಲ್ ಶಿವಪ್ರಸಾದ್, ಶಿವಮೊಗ್ಗ/ಬೆಂಗಳೂರು




















