ಯಾದಗಿರಿ/ಶಹಾಪುರ:ರಾಜ್ಯದಲ್ಲಿ ಮಳೆಯ ಅಭಾವದಿಂದ ಬರಗಾಲದ ಸಮಸ್ಯೆ ಉಂಟಾಗಿ ರಾಜ್ಯದ ಎಲ್ಲಾ ಜಲಾಶಯಗಳಗಲ್ಲಿ ನೀರಿನ ಪ್ರಮಾಣವು ಕುಸಿತ ಕಂಡಿದೆ ಎಂದು ಬಿಜೆಪಿ ಯುವ ಮುಖಂಡ ದೇವಿಂದ್ರಪ್ಪ ಕೊನೇರ್ ಹೇಳಿದರು. ರೈತರ ಜಮೀನುಗಳಿಗೆ ಸರಿಯಾಗಿ ನೀರು ಪೂರೈಕೆ ಮಾಡಿದೆ ಇರುವುದಕ್ಕೆ ರೈತರು ಆತಂಕಪಡುವ ಪರಿಸ್ಥಿತಿ ನಿರ್ಮಾಣವಾಗಿದೆ.ರಾಜ್ಯ ಸರ್ಕಾರ 7 ಗಂಟೆಗಳ ಕಾಲ ವಿದ್ಯುತ್ ನೀಡಬೇಕಾಗಿತ್ತು ಆದರೆ ಇತ್ತೀಚಿನ ದಿನಗಳಲ್ಲಿ ಲೋಡ್ ಶೆಡ್ಡಿಂಗ್ ಪರಿಣಾಮ ಹಗಲು ಹೊತ್ತಿನಲ್ಲಿ ವಿದ್ಯುತ್ ಪೂರೈಸುವಲ್ಲಿ ಕಾಂಗ್ರೆಸ್ ಸರ್ಕಾರ ವಿಫಲವಾಗಿದೆ ಕಾಲಕಾಲಕ್ಕೆ ಸರಿಯಾಗಿ ಮಳೆ ಆಗಿದ ಕಾರಣ ಬರಗಾಲಕ್ಕೆ ತುತ್ತಾಗಿರುವ ಈಗಾಗಲೇ ಶೇ 80 ರಷ್ಟು ಬೆಳೆಗಳು ಬಿತ್ತನೆ ಮಾಡಿದ್ದು ಅವುಗಳನ್ನು ರಕ್ಷಿಸಿಕೊಳ್ಳಲು ವಿದ್ಯುತ್ ಸಮಸ್ಯೆ ಉಂಟಾಗಿ ರೈತರು ಪರದಾಡುವ ಪರಿಸ್ಥಿತಿ ಉಂಟಾಗಿದೆ.
ಈ ಹಿಂದೆ ಬಿಜೆಪಿ ಆಡಳಿತದಲ್ಲಿ ಜಾರಿಯಾದ ಹಲವಾರು ರೈತಪರ ಯೋಜನೆಗಳು ಕಿಸಾನ್ ಸಮ್ಮಾನ ನಿಧಿ ಯೋಜನೆ,ರೈತ ವಿದ್ಯಾ ನಿಧಿ ಯೋಜನೆ,ಭೂ ಸಿರಿ ಯೋಜನೆ,ರೈತ ಸಂಘದ ಯೋಜನೆ,ಎಪಿಎಂಸಿ ಕಾನೂನು,ಕೃಷಿ ಭೂಮಿ ಮಾರಾಟ ಕಾನೂನು,ಜಿಲ್ಲೆಗೊಂದು ಗೋಶಾಲೆ ಯೋಜನ,ಕ್ಷೀರ ಸಮೃದ್ಧಿ,ಸರ್ಕಾರ ಬ್ಯಾಂಕ್ ಈ ಎಲ್ಲಾ ಯೋಜನೆಗಳನ್ನು ರಾಜ್ಯ ಕಾಂಗ್ರೆಸ್ ನಿರ್ಲಕ್ಷಿಸಲಾಗಿದೆ ಎಂದು ಹೇಳಿದರು.
ಆಡಳಿತ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ರಾಜ್ಯದಲ್ಲಿ 42 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಮುಖ್ಯಮಂತ್ರಿಗಳು ಹಾಗೂ ಸಂಬಂಧಪಟ್ಟ ಸಚಿವರು ರೈತರ ನೆರವಿಗೆ ಬರಬೇಕು ಎಂದು ಬಿಜೆಪಿ ಕಾರ್ಯಕರ್ತರು ತಾಲೂಕ ದಂಡಾಧಿಕಾರಿ ಕಛೇರಿ ಎದುರಿಗೆ ಪ್ರತಿಭಟನೆ ಮೂಲಕ ರಾಜ್ಯ ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.
ವರದಿ- ರಾಜಶೇಖರ ಮಾಲಿ ಪಾಟೀಲ್




















