ಬಳ್ಳಾರಿ ಜಿಲ್ಲೆಯ ಸಿರುಗುಪ್ಪ ತಾಲೂಕಿನ ಭೈರಗಾಮದಿನ್ನೆ ಗ್ರಾಮದ ಕಾರಂತ ರಂಗಲೋಕ ಕಲಾತ್ಮಕ ಮನಸ್ಸುಗಳ ತಾಣ (ರಿ.) ಸಂಸ್ಥೆಯು ತನ್ನ ದಶಮಾನೋತ್ಸವದ ಸವಿನೆನಪಿಗಾಗಿ ಪ್ರತಿ ವರ್ಷದಂತೆ ಈ ವರ್ಷವೂ ಕೂಡಾ ನಾಟಕಕಾರರಿಗೆಂದೇ ಕೊಡ ಮಾಡುವ ರಾಜ್ಯ ಮಟ್ಟದ ಕಾರಂತ ಸಾಹಿತ್ಯ ರತ್ನ ಪ್ರಶಸ್ತಿಗೆ 2013 ರಿಂದ 2023ರ ಕಾಲಾವಧಿಯಲ್ಲಿ ಪ್ರಕಟವಾಗಿರುವ ನಾಟಕ ಕೃತಿಗಳನ್ನು ಆಹ್ವಾನಿಸಲಾಗಿದೆ.
• ಈ ಪ್ರಶಸ್ತಿಯನ್ನು ಕೇವಲ ನಾಟಕ ಕೃತಿಗಳಿಗೆ ಮಾತ್ರ ನೀಡಲಾಗುತ್ತದೆ.
• ಪ್ರಶಸ್ತಿಗೆ ಎಲ್ಲಾ ವಯಸ್ಸಿನವರು ಅರ್ಜಿ ಸಲ್ಲಿಸಬಹುದಾಗಿದೆ.
• ಈ ಹಿಂದೆ ಪ್ರಶಸ್ತಿ ಪಡೆದವರು ಈ ವರ್ಷದ ಪ್ರಶಸ್ತಿಗೆ ಅರ್ಹರಾಗಿರುವುದಿಲ್ಲ.
• ತಮ್ಮ ಕೃತಿಯ ಮೂರು ಪ್ರತಿಗಳನ್ನು ಪ್ರತ್ಯೇಕ ಹಾಳೆಯಲ್ಲಿ ಬರೆದ ಸ್ವಪರಿಚಯ,ಸಂಪೂರ್ಣ ಅಂಚೆ ವಿಳಾಸ ಮತ್ತು ಇತ್ತೀಚಿನ ಪಾಸ್ಪೋರ್ಟ್ ಅಳತೆಯ ಭಾವಚಿತ್ರದೊಂದಿಗೆ ಕೆಳಗಿನ ವಿಳಾಸಕ್ಕೆ ಅಂಚೆಯ ಮೂಲಕವೇ (Printed Book Registered Post) ತಮ್ಮ ಕೃತಿಗಳನ್ನು ಕಳಿಸಬಹುದಾಗಿದೆ.
• ಒಬ್ಬ ಲೇಖಕ ತನ್ನ ಎರಡು ಕೃತಿಗಳ ಮೂಲಕ ಈ ಪ್ರಶಸ್ತಿಗೆ ಅರ್ಜಿ ಸಲ್ಲಿಸಬಹುದಾಗಿದೆ.
• ಪ್ರಶಸ್ತಿಯು ನಗದು,ನೆನಪಿನ ಕಾಣಿಕೆ,ಆಕರ್ಷಕ ಪ್ರಶಸ್ತಿ ಪತ್ರದ ಜೊತೆ ಶಾಲು,ಹಾರದ ಸನ್ಮಾನವನ್ನು ಒಳಗೊಂಡಿದೆ.
• ಪ್ರಶಸ್ತಿಗೆ ಕಳುಹಿಸಿದ ಕೃತಿಗಳನ್ನು ಹಿಂತಿರುಗಿಸಲಾಗುವುದಿಲ್ಲ,ಅಲ್ಲದೇ ಯಾವುದೇ ಪತ್ರ ವ್ಯವಹಾರಕ್ಕೆ ಅವಕಾಶವಿಲ್ಲ.
• ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ:15 ಅಕ್ಟೋಬರ್ 2023
• ಪುಸ್ತಕಗಳನ್ನು ಕಳುಹಿಸಬೇಕಾದ ವಿಳಾಸ:
ಆರ್.ಪಿ.ಮಂಜುನಾಥ್.ಬಿ.ಜಿ.ದಿನ್ನೆ
ಕಾರ್ಯದರ್ಶಿಗಳು,
ಕಾರಂತ ರಂಗಲೋಕ ಕಲಾತ್ಮಕ ಮನಸ್ಸುಗಳ ತಾಣ (ರಿ.)
ಭೈರಗಾಮದಿನ್ನೆ ಗ್ರಾಮ,ಕೊತ್ತಲಚಿಂತ ಅಂಚೆ,
ಸಿರುಗುಪ್ಪ ತಾಲ್ಲೂಕು,ಬಳ್ಳಾರಿ ಜಿಲ್ಲೆ – 583114
ಮೊ :9379857775




















