ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಪರಿಸರ ಸಂರಕ್ಷಣೆ ಪ್ರತಿಯೊಬ್ಬರ ಕರ್ತವ್ಯ:ಬೀರಪ್ಪ (ಮಾಜಿ ACF ಅಧಿಕಾರಿಗಳು)

ಸಿಂಧನೂರು ನಗರದ ನೀರಾವರಿ ಇಲಾಖೆಯ ಆವರಣದಲ್ಲಿ ವನಸಿರಿ ಫೌಂಡೇಶನ್ ವತಿಯಿಂದ ಮರುಜೀವ ಪಡೆದ ಅಮರ ಶ್ರೀ ಆಲದ ಮರಕ್ಕೆ ರಾಯಚೂರು ಮಾಜಿ ಸಾಮಾಜಿಕ ಅರಣ್ಯ ವಲಯ ಅಧಿಕಾರಿಗಳಾದ ACF ಬೀರಪ್ಪ ಅವರು ಭೇಟಿ ನೀಡಿ ವೀಕ್ಷಣೆ ಮಾಡಿ ವನಸಿರಿ ಫೌಂಡೇಶನ್ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಮಾತನಾಡಿ ಕಡಿದು ಹಾಕಿದ ಆಲದ ಮರಕ್ಕೆ ಮರುಜೀವ ನೀಡಿ ಬೆಳಸಿ ಸಾರ್ವಜನಿಕರಿಗೆ ಅನುಕೂಲಕರ ವಾತಾವರಣ ನಿರ್ಮಾಣ ಮಾಡಿದ ವನಸಿರಿ ತಂಡದ ಕಾರ್ಯ ನಿಜಕ್ಕೂ ಶ್ಲಾಘನೀಯ ಅರಣ್ಯ ಇಲಾಖೆಯ ಅಧಿಕಾರಿಗಳಾದ ನಾವುಗಳು ಮಾಡಬೇಕಾದ ಕಾರ್ಯವನ್ನು ವನಸಿರಿ ಫೌಂಡೇಶನ್ ವತಿಯಿಂದ ಮಾಡುತ್ತಿದ್ದಾರೆ ಪರಿಸರ ಸಂರಕ್ಷಣೆ ಮಾಡುವುದು ಪ್ರತಿಯೊಬ್ಬರ ಕರ್ತವ್ಯ ಅದನ್ನು ವನಸಿರಿ ತಂಡದವರು ಅವರು ಚಾಚೂತಪ್ಪದೇ ಮಾಡುತ್ತಿದ್ದಾರೆ ಮತ್ತು ತಮ್ಮ ಜೊತೆಗೆ ಇನ್ನೂ ಹೆಚ್ಚಿನ ರೀತಿಯಲ್ಲಿ ಪರಿಸರ ರಕ್ಷಕರನ್ನು ಹುಟ್ಟುಹಾಕುತ್ತಿದ್ದಾರೆ ಇದರ ಮೂಲಕ ಪರಿಸರ ಸಂರಕ್ಷಣೆಯ ಕರ್ತವ್ಯವನ್ನು ಸಾರ್ವಜನಿಕರಿಗೆ ತಿಳಿಪಡಿಸುತ್ತಿರುವುದು ಒಂದು ಹೆಮ್ಮೆಯ ವಿಷಯ. ವನಸಿರಿ ತಂಡ ಕಾರ್ಯಕ್ಕೆ ನಮ್ಮ ಅರಣ್ಯ ಇಲಾಖೆಯ ವತಿಯಿಂದ ಏನೆಲ್ಲಾ ಸಹಾಯ ಸಹಕಾರ ಬೇಕು ಅದನ್ನು ನನ್ನ ಅಧಿಕಾರದ ಅವಧಿಯಲ್ಲಿ ನೀಡಲು ಪ್ರಾಮಾಣಿಕ ಪ್ರಯತ್ನ ಮಾಡಿದ್ದೇನೆ ಮುಂದೇನು ಮಾಡುತ್ತೇನೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಪರಿಸರ ರಾಜ್ಯ ಪ್ರಶಸ್ತಿ ಪುರಸ್ಕೃತರು ಹಾಗೂ ವನಸಿರಿ ಫೌಂಡೇಶನ್ ಸಂಸ್ಥಾಪಕ ಅಧ್ಯಕ್ಷ ಅಮರೇಗೌಡ ಮಲ್ಲಾಪುರ, ಸಿಂಧನೂರು ಸಾಮಾಜಿಕ ಅರಣ್ಯ ವಲಯ ಅಧಿಕಾರಿ ರುದ್ರಮುನಿ,ಶಂಕರಗೌಡ ಎಲೆಕೂಡ್ಲಿಗಿ,ರಂಜಾನ್ ಸಾಬ್,ಆದನಗೌಡ ಪೂಲಭಾವಿ,ಶಿವು ಎಲೆಕೂಡ್ಲಿಗಿ,ಅಮರಯ್ಯ ಸ್ವಾಮಿ ಪತ್ರಿಮಠ ಇನ್ನಿತರರಿದ್ದರು.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ