ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ದೇಶದ ವಾಸ್ತುಶಿಲ್ಪ ಕಲೆಗೆ ವಿಶ್ವಕರ್ಮರ ಕೊಡುಗೆ ಅಪಾರ:ನಾಗಮ್ಮ ಎಮ್ ಪಂಚಾಳ

ಅಫಜಲಪುರ:ದೇಶದ ವಾಸ್ತುಶಿಲ್ಪ ಕಲೆಗೆ ಭಗವಾನ್ ಶ್ರೀ ವಿಶ್ವಕರ್ಮರ ಕೊಡುಗೆ ಅಪಾರವಾದದ್ದು ಎಂದು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಗೊಬ್ಬುರ (ಬಿ)ಯ ಅತಿಥಿ ಶಿಕ್ಷಕಿಯಾದಂತಹ ಶ್ರೀಮತಿ ನಾಗಮ್ಮ ಎಮ್ ಪಂಚಾಳ ಅವರು ಹೇಳಿದರು.
ಕಲಬುರಗಿ ಜಿಲ್ಲೆಯ ಅಫಜಲಪುರ ತಾಲೂಕಿನ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಗೊಬ್ಬುರ ಬಿ ಯಲ್ಲಿ ಕಲ್ಯಾಣ ಕರ್ನಾಟಕ ಅಮೃತ ಮಹೋತ್ಸವದ ಆಚರಣೆಯ ಶುಭ ಸಂದರ್ಭದಲ್ಲಿ ಉಕ್ಕಿನ ಮನುಷ್ಯ ಸರ್ಧಾರ ವಲ್ಲಭಬಾಯಿ ಪಟೇಲ್ ಹಾಗೂ ಭಗವಾನ್ ಶ್ರೀ ವಿಶ್ವಕರ್ಮರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದ ನಂತರ ಮಾತನಾಡಿದ ಅವರು ದೇಶದ ವಾಸ್ತು ಶಿಲ್ಪ ಕಲೆಗೆ ವಿಶ್ವಕರ್ಮರ ಕೊಡುಗೆ ಅಪಾರವಾದದ್ದು,ವಿಶ್ವಕರ್ಮರ ಕೆಲಸ ಕಾರ್ಯಗಳು ಮೆಚ್ಚುವಂತಹವು ಎಂದು ವಿಶ್ವಕರ್ಮರನ್ನು ಕೊಂಡಾಡಿದರು.
ವೇದಿಕೆ ಮೇಲೆ ಮುಖ್ಯೋಪಾಧ್ಯಾಯರಾದ ಝಾಕೀರ್ ಹುಸೇನ್,ಎಸ್ ಡಿ ಎಮ್ ಸಿ ಅದ್ಯಕ್ಷ ಬಸವರಾಜ ಅಂತರಗಂಗಿ,ಸದಸ್ಯ ಹುಣಚಪ್ಪ ಇಟಗೊಂಡ,ಬಾಬುರಾವ,ಶಿಕ್ಷಕರಾದ ಗುರಪ್ಪ, ಕರುಣಾಕರ್ ಕುಲಕರ್ಣಿ ಹಾಗೂ ಇತರ ಶಿಕ್ಷಕ ವೃಂದದವರು ಶಾಲಾ ಮಕ್ಕಳು ಉಪಸ್ಥಿತರಿದ್ದರು.
ವರದಿ:ಅಪ್ಪಾರಾಯ ಬಡಿಗೇರ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ