ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಆರೋಗ್ಯ ಕೇಂದ್ರ ಆವರಣದಲ್ಲಿ ಸ್ವಚ್ಛ ಶುಕ್ರವಾರ ಶ್ರಮದಾನ ಕಾರ್ಯಕ್ರಮ

ಆರೋಗ್ಯ ಕೇಂದ್ರದಲ್ಲಿ ಸ್ವಚ್ಛತೆ ಕಾಪಾಡಿ:ಗುರುಪ್ರಸಾದ್.ಎಸ್.

ಕಾರಟಗಿ (ಕೊಪ್ಪಳ ಜಿಲ್ಲೆ) ಪ್ರಾಥಮಿಕ ಆರೋಗ್ಯ ಕೇಂದ್ರದ ಆವರಣದಲ್ಲಿ ಸ್ವಚ್ಛತೆ ಕಾಪಾಡಿ ಎಂದು ತಾಲೂಕು ಪಂಚಾಯತಿ ಯೋಜನಾಧಿಕಾರಿ ಗುರು ಪ್ರಸಾದ್ ಎಸ್ ಅವರು ಹೇಳಿದರು.

ತಾಲೂಕಿನ ಹೋಸಕೇರಾ ಡಗ್ಗಿಯಲ್ಲಿ ಗ್ರಾಮ ಪಂಚಾಯತಿ ವತಿಯಿಂದ ಪ್ರಾಥಮಿಕ ಆರೋಗ್ಯ ಕೇಂದ್ರದ ಆವರಣದಲ್ಲಿ ಹಮ್ಮಿಕೊಂಡಿದ್ದ ಸ್ವಚ್ಛತಾ ಶುಕ್ರವಾರ ಶ್ರಮದಾನದ ಕಾರ್ಯಕ್ರಮದಲ್ಲಿ ಮಾತನಾಡಿದರು.

ಆರೋಗ್ಯ ಕೇಂದ್ರಕ್ಕೆ ಬರುವ ಸಾರ್ವಜನಿಕರಿಗೆ ಉತ್ತಮ‌ ಆರೋಗ್ಯದ ಸೇವೆ ಒದಗಿಸುವ ಜೊತೆಗೆ, ಕೇಂದ್ರ ಸ್ವಚ್ಛತೆಗೆ ಮೊದಲ ಆದ್ಯತೆ ನೀಡಬೇಕಾಗಿದೆ. ಸುತ್ತಲೂ ಒಳ್ಳೆಯ ಗಿಡಗಳನ್ನು ನೆಟ್ಟು, ಚಿಕಿತ್ಸೆಗೆ ಬರುವವರಿಗೆ ವಿಶ್ರಾಂತಿ ಪಡೆಯಲು ಪರಿಶುದ್ಧ ವಾತಾವರಣ ಸೃಷ್ಟಿಸಬೇಕು. ವಾರಕ್ಕೊಮ್ಮೆ ಅಧಿಕಾರಿಗಳು, ಸಿಬ್ಬಂದಿಗಳು, ಸಾರ್ವಜನಿಕರೊಂದಿಗೆ ಗ್ರಾ.ಪಂ ವ್ಯಾಪ್ತಿಯಲ್ಲಿನ ಪ್ರಮುಖ ಸ್ಥಳಗಳನ್ನು ಸ್ವಚ್ಛತೆ ಮಾಡಬೇಕು ಎಂದರು.
ಈ ಸಂದರ್ಭದಲ್ಲಿ ಗ್ರಾಮ ಪಂಚಾಯತಿ ಅಧ್ಯಕ್ಷರಾದ ಮಹಾಂಕಾಳಿ ಮಾರಪ್ಪ, ಉಪಾಧ್ಯಕ್ಷರಾದ ಜೆ ರತ್ನಮ್ಮ, ಸದಸ್ಯರಾದ ಮಂಜುನಾಥ, ಚಾಂದಬಿ ಹುಸೇನ್ ಸಾಬ್, ಪಿಡಿಒ ಮಂಗಳಪ್ಪ ನಾಯಕ್, ತಾಲೂಕು ಪಂಚಾಯತಿ ಎಸ್ ಬಿಎಮ್ ವಿಷಯ ನಿರ್ವಾಹಕ ಭೀಮಣ್ಣ,ಐಇಸಿ ಸಂಯೋಜಕ ಸೋಮನಾಥ ನಾಯಕ, ಸೇರಿದಂತೆ ಅಂಗನವಾಡಿ ಕಾರ್ಯಕರ್ತೆಯರಾದ ಜಯಮ್ಮ,ನೀಲಮ್ಮ,ಮೋನಿಕ, ಶಿವಮ್ಮ,ಶಕುಂತಲಾ, ಮಹಾಂತಮ್ಮ ,ಮಹಾದೇವಿ, ಆಶಾ ಕಾರ್ಯಕರ್ತೆಯರು, ಎಂ.ಬಿ.ಕೆ,ಸ್ವ-ಸಹಾಯ ಸಂಘದ ಮಹಿಳೆಯರು ಇದ್ದರು.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ