ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಬಿಳವಾರ ಗ್ರಾಮದ ರೈತರಿಗೆ ಸಮಗ್ರ ಕೃಷಿಯ ಬಗ್ಗೆ ಮಾಹಿತಿ ನೀಡಿದ ಪ್ರಾಧ್ಯಾಪಕರು ಹಾಗೂ ಕೃಷಿ ವಿದ್ಯಾರ್ಥಿಗಳು

ಕಲಬುರಗಿ ಜಿಲ್ಲೆಯ ಯಡ್ರಾಮಿ ತಾಲೂಕಿನ ಬಿಳವಾರ ಗ್ರಾಮದಲ್ಲಿ ಸಮಗ್ರ ಕೃಷಿಯ ಬಗ್ಗೆ ಮಾಹಿತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು ಈ ಕಾರ್ಯಕ್ರಮದಲ್ಲಿ ಡಾ.ಶಾಮರಾವ್ ಕುಲಕರ್ಣಿ (ಬೇಸಾಯ ಶಾಸ್ತ್ರ ವಿಭಾಗ) ಅವರು ತೊಗರಿ ಮತ್ತು ಹತ್ತಿಯ ಬೇಸಾಯ ಕ್ರಮಗಳ ಬಗ್ಗೆ ಸವಿಸ್ತಾರವಾಗಿ ಮಾಹಿತಿ ನೀಡಿದರು.ಅದೇ ರೀತಿಯಾಗಿ ಡಾ.ಶಿವಪ್ಪ ಕರಡಿ (ತೋಟಗಾರಿಕೆ ವಿಭಾಗ) ಇವರು ಮೆಣಸಿನಕಾಯಿ ಬೇಸಾಯ ಕ್ರಮಗಳನ್ನು ವಿವರಿಸಿದರು,ಡಾ.ನಾಗರಾಜ್ (ಸಸ್ಯ ರೋಗ ಶಾಸ್ತ್ರ ವಿಭಾಗ) ಅವರು ಹತ್ತಿ,ತೊಗರಿ ಮತ್ತು ಮೆಣಸಿನಕಾಯಿ ಬೆಳೆಯ ರೋಗಗಳ ಮತ್ತು ಅದರ ನಿರ್ವಹಣಾ ಕ್ರಮಗಳನ್ನು ವಿವರಿಸಿದರು . ರೈತರೊಂದಿಗೆ ಸಂಭಾಷಣೆ ಮಾಡಿ ಮತ್ತು ಅವರ ಪ್ರಶ್ನೆಗಳಿಗೆ ಉತ್ತರಿಸಿದರು.ಡಾ.ದೊಡ್ಡಬಸಪ್ಪ ಪಾಟೀಲ,ಡಾ.ಮಲ್ಲಿಕಾರ್ಜುನ ಮತ್ತು “ಗ್ರಾಮೀಣ ಕೃಷಿ ಕಾರ್ಯನುಭವ ಶಿಬಿರ”ದ ಸಹ ಸಂಯೋಜಕರಾದ ಡಾ.ಜನಾರ್ಧನ ಕಾಂಬಳೆ ಈ ಕಾರ್ಯಕ್ರಮದಲ್ಲಿ ಭಾಗವಹಿಸಿದರು.ಅದೇ ರೀತಿಯಾಗಿ ಕಾಂಗ್ರೆಸ್ ಮುಖಂಡರು ಲಾಲ್ ಪಟೇಲ್ ಯರಗಲ್ ಶಾಂತಪ್ಪ ಕೊಂಡ ಅಲ್ಲಾ ಪಟೇಲ್ ಹೊಸಮನಿ ಜಗ್ಗು ಗೌಡ ಕೊಡಮನಹಳ್ಳಿ ಸುಲ್ತಾನ್ ಪಟೇಲ್ ರಂಜಣಗಿ ಭೀಮರಾಯ ಅಸಗಿ ವ್ಯವಸಾಯ ಸಹಕಾರ ಸೇವಾ ಸಂಘ ಬಿಳವಾರ ವಲಯ ಅಧ್ಯಕ್ಷರು ರಾಜು ಹಿರೇಮಠ ಹಾಗೂ ಮಾಧ್ಯಮ ವರದಿಗಾರರು ಮೈಬೂಬ್ ಪಟೇಲ್ ನಡುವಿನಮನಿ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ