ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಸಮಸ್ಯೆ ಆಲಿಸದ ಅಧಿಕಾರಿಗಳ ವಿರುದ್ಧ ಸಾರ್ವಜನಿಕರ ಆಕ್ರೋಶ

ಚಿತ್ರದುರ್ಗ:ದೇವಸಮುದ್ರ ಗ್ರಾಮ ಪಂಚಾಯತಿ ವ್ಯಾಪ್ತಿಯ ವೆಂಕಟಾಪುರದ ರಸ್ತೆ ಹಂಚಿನ ಹಳೆಕೇರಿ ರಾಂಪುರ ಮಾರ್ಗವಾಗಿ ಹೋಗುವ ರಸ್ತೆ ಬದಿಯಲ್ಲಿ ಕಸದ ರಾಶಿ ಬಿದ್ದುಕೊಂಡಿದ್ದು ಕಳೆದ ಮೂರ್ನಾಲ್ಕು ತಿಂಗಳಿಂದ ಈ ಸಮಸ್ಯೆ ಇದೆ ಗ್ರಾಮ ಪಂಚಾಯತಿ ಈ ಸಮಸ್ಯೆಯನ್ನು ಯಾವುದೇ ಕ್ರಮ ಕೈಗೊಂಡಿಲ್ಲ, ಈ ಬಗ್ಗೆ ಹಲವಾರು ಬಾರಿ ಮನವಿ ನೀಡಿದರೂ ಸಹ ಸ್ಪಂದನೆ ಇಲ್ಲ,ಕಸ ವಿಲೇವಾರಿ ಮಾಡಲು ಪಂಚಾಯತ್ ಯಾವುದೇ ಕ್ರಮ ಕೈಗೊಳ್ಳದೆ ಇರುವುದರಿಂದ ಇಂದು ನಾಗರಿಕರು ತೊಂದರೆಗೆ ಸಿಲುಕಿದ್ದು ಈ ಭಾಗದಲ್ಲಿ ಓಡಾಡುವುದೇ ಕಷ್ಟಕರವಾಗಿದೆ ಎಂದು ಸಾರ್ವಜನಿಕರು ದೂರಿದ್ದಾರೆ ಅವಶ್ಯಕತೆ ಮೇರೆಗೆ ದೇವಸಮುದ್ರ ಗ್ರಾಮ ಪಂಚಾಯತಿ ವತಿಯಿಂದ ಕಸದ ತೊಟ್ಟಿಗಳನ್ನು ಅಗತ್ಯವಿದ್ದ ಮೂರು ಕಡೆಗಳಲ್ಲಿ ನಿರ್ಮಾಣ ಮಾಡಿ ಕಸವನ್ನು ಅದರಲ್ಲಿಯೇ ಹಾಕುವ ವ್ಯವಸ್ಥೆ ಮಾಡಿದ್ದರು ಸರಿಯಾದ ರೀತಿಯಲ್ಲಿ ಅದರಲ್ಲಿನ ಕಸವನ್ನು ವಿಲೇವಾರಿ ಮಾಡುವುದರಲ್ಲಿ ವಿಫಲವಾಗಿದೆ ಎಂದು ಸಾರ್ವಜನಿಕರು ದೂರಿದ್ದಾರೆ ಈ ವಿಚಾರವಾಗಿ ಪಂಚಾಯಿತಿಗೆ ಹಲವಾರು ಬಾರಿ ಮನವಿ ಸಲ್ಲಿಸಿದರು ಕೂಡಾ ಅಲ್ಲಿನ ಪಿಡಿಓ ಬಾಂಡ್ರವಪ್ಪನವರು ಹಾಗೂ ಬಿಲ್ ಕಲೆಕ್ಟರ್ ಭೀಮಪ್ಪ ಎಂ ಇವರಿಗೆ ಮನವಿ ಸಲ್ಲಿಸಿರುತ್ತಾರೆ ಆದರೂ ಕೂಡ ಅದರ ಬಗ್ಗೆ ಕಿವಿಗೊಡದೆ ಇದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ,ಇಲ್ಲಿನ ಗ್ರಾಮ ಪಂಚಾಯತಿ ವ್ಯವಸ್ಥೆಯು ಕೂಡಾ ಜಾತಿ ವ್ಯವಸ್ಥೆಯ ಮೇಲೆ ನಡೆಯುತ್ತಿದೆ ಎಂದು ಸಾರ್ವಜನಿಕರು ದೂರಿದ್ದಾರೆ.ಏಕೆಂದರೆ ಇಲ್ಲಿನ ಅಧಿಕಾರಿಗಳು ಮೇಲ್ಜಾತಿಯವರು ಹೇಳಿದ ಮಾತನ್ನು ಚಾಚು ತಪ್ಪದೇ ಮಾಡುತ್ತಿದ್ದಾರೆ ಎಂದು ಕೂಡ ಆಕ್ರೋಶ ವ್ಯಕ್ತವಾಗಿದೆ ಈ ಗ್ರಾಮ ಪಂಚಾಯಿತಿಯ ವ್ಯವಸ್ಥೆಯು ಕೂಡಾ ಹೇಳಿದ ಮಾತುಗಳಿಗೆ ಕಿವಿಗೊಡದೆ ಅಧಿಕಾರಿಗಳು ಕೂಡಾ ದರ್ಪ ತೋರಿಸುತ್ತಿದ್ದಾರೆ ಎಂದು ಕೂಡಾ ಆಕ್ರೋಶ ವ್ಯಕ್ತವಾಗಿದೆ ಆದುದರಿಂದ ಮುಂಬರುವ ದಿನಗಳಲ್ಲಿ ಕೂಡಾ ಇದೇ ರೀತಿ ನಡೆಯಬಾರದೆಂದು ಸಾರ್ವಜನಿಕರು ತಮ್ಮ ಮೇಲಾಧಿಕಾರಿಗಳಿಗೆ ದೂರು ನೀಡಲು ಮುಂದಾಗಿದ್ದಾರೆ.
ವರದಿ:ಸಿದ್ದೇಶ್ ಜಿ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ