ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಪಠ್ಯೇತರ ಜೊತೆಗೆ ಕ್ರೀಡೆ ಮುಖ್ಯ:ಸಚಿವ ದರ್ಶನಾಪುರ

ಶಹಾಪುರ:ತಾಲೂಕ ಮಟ್ಟದ ಕ್ರೀಡಾಕೂಟದಲ್ಲಿ ಯಾದಗಿರಿ ಜಿಲ್ಲೆಯ ಉಸ್ತುವಾರಿ ಸಚಿವ ಶರಣಬಸಪ್ಪಗೌಡ ದರ್ಶನಾಪುರ ಪಠ್ಯೇತರ ಚಟುವಟಿಕೆಗಳ ಜೊತೆಗೆ ಉತ್ತಮ ಆರೋಗ್ಯ ಮುಖ್ಯವಾಗಿದೆ ಎಂದು ಹೇಳಿದರು.ತಾಲೂಕ ಮಟ್ಟದ 14 ರಿಂದ 17 ವಯೋಮಿತಿಯ ಒಳಗಿನ ಬಾಲಕ,ಬಾಲಕಿಯರು ಕ್ರೀಡಾಕೂಟ ಹಿನ್ನೆಲೆ ಕ್ರೀಡಾ ಜ್ಯೋತಿ ಸ್ವೀಕರಿಸಿ ಮಾತನಾಡಿದ ಸಚಿವ ದರ್ಶನಪುರ ಅವರು,ದೈಹಿಕ,ಶಾರೀರಿಕ ಚೈತನ್ಯ, ಮಾನಸಿಕ ಒತ್ತಡದಿಂದ ಹೊರಬರಲು ಸಾಧ್ಯ. ವಿದ್ಯಾರ್ಥಿಗಳು ಜೀವನದಲ್ಲಿ ಪಠ್ಯೇತರ ಚಟುವಟಿಕೆಗಳ ಜೊತೆಗೆ ಉತ್ತಮ ಆರೋಗ್ಯ ಮುಖ್ಯ ಮತ್ತು ವಿದ್ಯಾರ್ಥಿ ಪರಿಪೂರ್ಣವಾಗಲು ಸಾಧ್ಯ.
ವಿದ್ಯಾರ್ಥಿಗಳಲ್ಲಿ ಕ್ರೀಡಾ ಪ್ರತಿಭೆ ಸೇರಿದಂತೆ ಅಗಾಧ ಪ್ರತಿಭೆ ಅಡಗಿರುತ್ತವೆ ಆದರೆ ಪಾಲಕರು ಹಾಗೂ ಶಾಲಾ ಶಿಕ್ಷಕರು ಗುರುತಿಸಿ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಿಸಬೇಕು ಆಟದಲ್ಲಿ ಸೋಲು ಗೆಲುವು ಇದ್ದಿದ್ದೇ ಆಟದಲ್ಲಿ ಭಾಗವಹಿಸಿ ಪ್ರತಿಭೆ ತೋರಿಸಿ ವಿದ್ಯಾರ್ಥಿಗಳು ಕ್ರೀಡೆ,ಕಲೆ ಮತ್ತು ಸಾಂಸ್ಕೃತಿಕ ಕ್ಷೇತ್ರಗಳಲ್ಲಿ ಹೆಚ್ಚಿನ ಆಸಕ್ತಿ ಬೆಳೆಸಿಕೊಳ್ಳಬೇಕು.ಕ್ರೀಡೆಗಳ ದೈಹಿಕ, ಮಾನಸಿಕವಾಗಿ ಆರೋಗ್ಯ ಕಾಪಾಡಿಕೊಳ್ಳಬೇಕು. ಪ್ರಾಥಮಿಕ,ಪ್ರೌಢ ಶಾಲಾ ಹಂತದ ವಿದ್ಯಾರ್ಥಿಗಳು ಈಗಿನಿಂದಲೇ ಆತ್ಮಸ್ಥೈರ್ಯ ತುಂಬಿಕೊಂಡು ಆತ್ಮವಿಶ್ವಾಸ ಬೆಳೆಸಿಕೊಳ್ಳಲು ಕ್ರೀಡೆ ಬಹಳ ಮುಖ್ಯವಾದದ್ದು ಎಂದು ಹೇಳಿದರು.
ಈ ಸಂದರ್ಭದಲ್ಲಿ ತಾಲೂಕ ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿ ಸೋಮಶೇಖರ ಬಿರಾದಾರ್,ಅಕ್ಷರ ದಾಸೋಹ ಅಧಿಕಾರಿ ಸೂರ್ಯವಂಶಿ,ಸರ್ಕಾರಿ ನೌಕರರ ಸಂಘದ ತಾಲೂಕ ಅಧ್ಯಕ್ಷ ರಾಯಪ್ಪಗೌಡ ಹುಡೇದ, ಬಿ.ಆರ್.ಸಿ ಶ್ರೀಮತಿ ರೇಣುಕಾ ಪಾಟೀಲ್, ಶಿವಲಿಂಗಪ್ಪ,ಬಸವರಾಜ ಯಾಳಗಿ,ಚಂದ್ರಶೇಖರ ವೈದ್ಯ,ಸೇರಿದಂತೆ ದೈಹಿಕ ಶಿಕ್ಷಕರು ಹಾಗೂ ಸುತ್ತಮುತ್ತಲಿನ ಕ್ರೀಡಾ ಅಭಿಮಾನಿಗಳು ವಿದ್ಯಾರ್ಥಿಗಳು ಭಾಗವಹಿಸಿದ್ದರು.
ವರದಿ ರಾಜಶೇಖರ ಮಾಲಿ ಪಾಟೀಲ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ