ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಟಿಬೆಟಿಯನ್ ಕ್ಯಾಂಪ್ ನಲ್ಲಿನ ದರೋಡೆ ಪ್ರಕರಣ, ಅಪರಾಧಿಗಳಿಗೆ ಸಜೆ

ಮುಂಡಗೋಡ:ಶಿರಸಿಯ 1 ನೆಯ ಅಧಿಕ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಮುಂಡಗೋಡ ತಾಲೂಕಿನ ಟಿಬೆಟಿಯನ್ ಕ್ಯಾಂಪ್ ನಲ್ಲಿನ ಮನೆಯೊಂದರಲ್ಲಿ ಮಾರಕಾಸ್ತ್ರ ಗಳ ಸಮೇತ ಮನೆಗೆ ನುಗ್ಗಿ ದರೋಡೆ ಮಾಡಿದ್ದ ನಾಲ್ಕು ಜನ ಅಪರಾಧಿಗಳಿಗೆ 10 ವರ್ಷ ಕಠಿಣ ಕಾರಾಗೃಹ ಶಿಕ್ಷೆ ಹಾಗೂ ತಲಾ 15 ಸಾವಿರ ರೂಪಾಯಿ ಜುಲ್ಮಾನೆ ವಿಧಿಸಿ ತೀರ್ಪು ನೀಡಿದೆ.

ಏನಿದು ಪ್ರಕರಣ?
2019 ರ ಜನವರಿಯಲ್ಲಿ ಕ್ಯಾಂಪ್ ನಂಬರ್ ಒಂದರ ಜಾoಜ ಚುಪ್ ತೆಂಜಿಂಗ್ ಎಂಬುವವರ ಮನೆಗೆ ಮಾರಕಾಸ್ತ್ರಗಳಿಂದ ನುಗ್ಗಿದ ನಾಲ್ವರ ತಂಡ ಜಾoಜ ಚುಪ್ ತೆಂಜಿಂಗ್ ಅವರ ಕೈ ಬೆರಳಿಗೆ ಚಾಕು ಇರಿದು, 6 ಲಕ್ಷ ನಗದು,ಐಫೋನ್,ಸಿಸಿ ಟಿವಿ ಪ್ರೊಜೆಕ್ಟರ್,ಬಂಗಾರದ ಆಭರಣ ಹಾಗೂ ಸಿಸಿ ಟಿವಿಯ ಡಿವಿಆರ್ ಕಿತ್ತುಕೊಂಡು ಪರಾರಿಯಾಗಿದ್ದರು ಮುಂಡಗೋಡ ನಗರದಲ್ಲಿ ಭಾರಿ ಸಂಚಲನ ಮೂಡಿಸಿದ್ದ ಈ ದರೋಡೆ ಪ್ರಕರಣ
ಪೊಲೀಸ್ ಇಲಾಖೆಗೆ ಸವಾಲಾಗಿತ್ತು,ಆದರೂ ಘಟನೆ ನಡೆದ ಕೆಲವೇ ಗಂಟೆಗಳಲ್ಲಿ ಆರೋಪಿಗಳನ್ನು ಬಂದಿಸಿ ದೋಷಾರೋಪಣೆ ಪಟ್ಟಿ ಸಲ್ಲಿಸಿದ್ದರು ಶಿರಸಿಯ 1 ನೆಯ ಅಧಿಕ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ನ್ಯಾಯಾಧೀಶರು ಕಿರಣ್ ಕಿಣಿ ಅವರು ತೀರ್ಪು ನೀಡಿದ್ದಾರೆ ಪಬ್ಲಿಕ್ ಪ್ರಾಸಿಕ್ಯೂಟರ್ ಆಗಿ ರಾಜೇಶ್ ಮಳಗಿಕರ್ ವಾದ ಮಂಡಿಸಿದ್ದರು.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ