ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ನಂದಳ್ಳಿ ಆಂಜನೇಯ ದೇವಸ್ಥಾನ ಹತ್ತಿರ: ಅಕ್ರಮ ಕೆಂಪು ಮರಮ್ ಸಾಗಾಟ

ಶಹಾಪುರ:ಹಳಿಸಗರ ಸೀಮೆಯಲ್ಲಿ ಬರುವ ನಂದಳ್ಳಿ ಆಂಜನೇಯ ದೇವಸ್ಥಾನ ಹತ್ತಿರ ರೈತರ ಹೊಲಗಳಿಂದ ದಿನ ನಿತ್ಯ ಅಕ್ರಮ ಮರಮ್ ಸಾಗಾಣಿಕೆ ಮಾಡುತ್ತಿದ್ದಾರೆ ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಯಾದಗಿರಿ ಜಿಲ್ಲಾಧ್ಯಕ್ಷ ಭೀಮಣ್ಣಗೌಡ ಕಟ್ಟಿಮನಿ ಹೇಳಿದರು.
ನಂದಳ್ಳಿ ಗ್ರಾಮಸ್ಥರು ನಮ್ಮ ಹೊಲಗಳಲ್ಲಿನ ಬೆಳೆಗಳು ನಾಶವಾಗುತ್ತಿವೆ ಇದರಿಂದ ಪರಿಸರ ನಾಶವಾಗುತ್ತಿದೆ ಎಂದು ನಂದಳ್ಳಿ ಗ್ರಾಮಸ್ಥರು ಆರೋಪಿಸಿದ್ದಾರೆ ಇಲ್ಲಿನ ಮರಮ್ ಸಾಗಾಣಿಕೆ ಮಾಡುತ್ತಿರುವುದರಿಂದ ಮಡ್ನಾಳ,ಶಿರವಾಳ, ಅಣಬಿ ಹಾಗೂ ಇನ್ನಿತರ ಪಕ್ಕದ ಗ್ರಾಮದ ರಸ್ತೆಗಳು ಸಂಪೂರ್ಣವಾಗಿ ಹಾಳಾಗಿದ್ದು ದೊಡ್ಡ ಪ್ರಮಾಣದ ತೆಗ್ಗು ಗುಂಡಿಗಳು ಬಿದ್ದು ದ್ವಿಚಕ್ರ ವಾಹನಗಳು ಮತ್ತು ಕಾರು,ಜೀಪು,ಬಸ್ಸುಗಳು ಓಡಾಡದಂತೆ ಸಾರ್ವಜನಿಕರಿಗೆ ತೊಂದರೆಯಾಗುತ್ತಿದೆ.
ಕೂಡಲೇ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳು ಎಚ್ಚೆತ್ತು ಅಕ್ರಮ ಮರಮ್ ಸಾಗಾಣಿಕೆ ಮಾಡುತ್ತಿರುವರು ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಬೇಕು ಮಾನ್ಯ ಸಚಿವರೇ ಇತ್ತ ಕಡೆ ಗಮನ ಹರಿಸಿ ಅಕ್ರಮ ಮರಮ್ ಸಾಗಾಣಿಕೆ ಮಾಡುತ್ತಿರುವರ ವಿರುದ್ಧ ಮತ್ತು ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳಿಗೆ ಅಮಾನತು ಮಾಡಬೇಕು ಎಂದು ಹೇಳಿದರು.ಇದೇ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಯಾದಗಿರಿ ಜಿಲ್ಲಾ ಅಧ್ಯಕ್ಷ ಭೀಮಣ್ಣಗೌಡ ಕಟ್ಟಿಮನಿ,ಹಣಮಂತ್ರಾಯ ಕಾಡಮಗೇರಾ,ತಾಲೂಕ ಅಧ್ಯಕ್ಷರಾದ ನಾಗರಾಜ ರಾಕಂಗೇರಾ,ಉಪಾಧ್ಯಕ್ಷರಾದ ಎಲ್ಲಪ್ಪ ಶಹಾಪುರ, ಅಂಗವಿಕಲರ ರಾಜ್ಯಾಧ್ಯಕ್ಷರಾದ ಸುಭಾಷ್ ಹೋತಪೇಠ,ಸೋಪಣ್ಣ ಸೈದಾಪುರ,ಭೀಮರಾಯ ರಾಜಾಪುರ,ಶರಣಪ್ಪ ವಡಗೇರಾ,ಅಯ್ಯಣ್ಣ ವಡಗೇರಾ,ಸಂಗಣ್ಣ ರಾಕಂಗೇರಾ ಎಲ್ಲರೂ ಉಪಸ್ಥಿತರಿದ್ದರು.
ವರದಿ ರಾಜಶೇಖರ ಮಾಲಿ ಪಾಟೀಲ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ