ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಕಲ್ಯಾಣ ಕರ್ನಾಟಕದಲ್ಲಿ ಪರಿಸರ ರಕ್ಷಣೆಯಲ್ಲಿ ತೊಡಗಿರುವ ವನಸಿರಿ ಫೌಂಡೇಶನ್ ತಂಡದ ಕಾರ್ಯ ಶ್ಲಾಘನೀಯ:ಡಾ.ವೀರಸೋಮೇಶ್ವರ ರಾಜದೇಶಿಕೇಂದ್ರ ಶಿವಾಚಾರ್ಯ ಭಗವತ್ಪಾದರು ಬಾಳೆಹೊನ್ನೂರು ಮಠ

ಲಿಂಗಸೂಗೂರು ನಗರದ ಶ್ರೀ ಈಶ್ವರ ದೇವಸ್ಥಾನದಲ್ಲಿ ಶ್ರೀಮದ್ ರಂಭಾಪುರಿ ವೀರಸಿಂಹಾಸನಾಧೀಶ್ವರ ಶ್ರೀ ಶ್ರೀ ಶ್ರೀ 1008 ಜಗದ್ಗುರು ಪ್ರಸನ್ನ ರೇಣುಕ ಡಾ.ವೀರಸೋಮೇಶ್ವರ ರಾಜದೇಶಿಕೇಂದ್ರ ಶಿವಾಚಾರ್ಯ ಭಗವತ್ಪಾದರು ಬಾಳೆಹೊನ್ನೂರು ಮಠ ಮಹಾಸ್ವಾಮಿಗಳವರನ್ನು ಪರಿಸರ ರಾಜ್ಯ ಪ್ರಶಸ್ತಿ ಪುರಸ್ಕೃತರು ಹಾಗೂ ವನಸಿರಿ ಫೌಂಡೇಶನ್ ರಾಜ್ಯಾದ್ಯಕ್ಷರಾದ ಅಮರೇಗೌಡ ಮಲ್ಲಾಪುರ ಮತ್ತು ವನಸಿರಿ ಫೌಂಡೇಶನ್ ತಂಡದ ಸದಸ್ಯರು ಭೇಟಿ ನೀಡಿ ಆರ್ಶೀವಾದ ಪಡೆದರು.
ಆರ್ಶೀವಚನ ನೀಡಿದ ಶ್ರೀಮದ್ ರಂಭಾಪುರಿ ವೀರಸಿಂಹಾಸನಾಧೀಶ್ವರ ಶ್ರೀ ಶ್ರೀ ಶ್ರೀ 1008 ಜಗದ್ಗುರು ಪ್ರಸನ್ನ ರೇಣುಕ ಡಾ.ವೀರಸೋಮೇಶ್ವರ ರಾಜದೇಶಿಕೇಂದ್ರ ಶಿವಾಚಾರ್ಯ ಭಗವತ್ಪಾದರು ಮಾತನಾಡಿ ಪರಿಸರ ಸಂರಕ್ಷಣೆ ಪ್ರತಿಯೊಬ್ಬರ ಕರ್ತವ್ಯ.ನಾವು ಧರ್ಮ ರಕ್ಷಣೆ ಜೊತೆಗೆ ಪರಿಸರ ರಕ್ಷಣೆ ಮಾಡುವ ಅನಿವಾರ್ಯತೆ ಇದೆ. ಧರ್ಮವನ್ನು ನಾವು ರಕ್ಷಣೆ ಮಾಡಿದರೆ ಧರ್ಮವು ನಮ್ಮನ್ನು ರಕ್ಷಣೆ ಮಾಡುತ್ತದೆ ಅದೇರೀತಿ ಪರಿಸರವನ್ನು ನಾವು ರಕ್ಷಣೆ ಮಾಡಿದರೆ ಪರಿಸರ ನಮ್ಮನ್ನು ರಕ್ಷಿಸುವುದರಲ್ಲಿ ಸಂಶಯವಿಲ್ಲ ಪರಿಸರ ರಕ್ಷಣೆಗೆ ತಾವುಗಳು ಮುಂದಾಗದಿದ್ದರೆ ದೇಶದಲ್ಲಿ ತಾಪಮಾನ ಏರಿಕೆ,ಚಂಡಮಾರುತಗಳಂತಹ ಪ್ರಕೃತಿ ವಿಕೋಪಗಳು ಉಂಟಾಗುತ್ತದೆ,ಬಿಸಿಲ ನಾಡಾದ ಕಲ್ಯಾಣ ಕರ್ನಾಟಕದಲ್ಲಿ ಪರಿಸರ ಸಂರಕ್ಷಣೆಯ ನಿಟ್ಟಿನಲ್ಲಿ ಪರಿಸರ ರಕ್ಷಣೆಯಲ್ಲಿ ತೊಡಗಿರುವ ವನಸಿರಿ ಫೌಂಡೇಶನ್ ತಂಡದ ಕಾರ್ಯ ತುಂಬಾ ಶ್ಲಾಘನೀಯ ಇವರ ಪರಿಸರದ ಕಾಯಕ ಸದಾಕಾಲ ನಿರಂತರವಾಗಿ ನೆರವೇರಲಿ ಪರಿಸರ ಬೆಳಸುವ ಕಾಯಕಕ್ಕೆ ಮಹಾದೇವ ಒಳ್ಳೆಯದು ಮಾಡಲಿ ಇದರಿಂದ ಈ ಭೂಮಂಡಲದ ಮೇಲಿನ ಸಕಲ ಜೀವರಾಶಿಗಳಿಗೆ ಮಹಾದೇವ ಒಳ್ಳೆಯದನ್ನು ಮಾಡಲಿ ಎಂದು ಆರ್ಶೀವಚನ ನೀಡಿದರು.
ಈ ಸಂದರ್ಭದಲ್ಲಿ ಶ್ರೀ ಷ.ಬ್ರ.ಸೋಮನಾಥ ಶಿವಾಚಾರ್ಯರು ಬಾಳೆಹೊನ್ನೂರು ಶಾಖಾಮಠ ಸಿಂಧನೂರು ಹಾಗೂ ಶ್ರೀ ರೌಡಕುಂದ ಶ್ರೀಗಳು, ಕರ್ನಾಟಕ ಪರಿಸರ ರಾಜ್ಯ ಪ್ರಶಸ್ತಿ ಪುರಸ್ಕೃತರು ಹಾಗೂ ವನಸಿರಿ ಫೌಂಡೇಶನ್ ರಾಜ್ಯಾದ್ಯಕ್ಷರಾದ ಅಮರೇಗೌಡ ಮಲ್ಲಾಪುರ,ನಾಗರಾಜ ಮಾಂಡ್ರೆ ಶಿಕ್ಷಕರು,ಅಮರಯ್ಯ ಸ್ವಾಮಿ ಪತ್ರಿಮಠ,ರಂಜಾನ್ ಸಾಬ್,ಚನ್ನಪ್ಪ ಕೆ ಹೊಸಹಳ್ಳಿ,ಇನ್ನಿತರರು ಇದ್ದರು

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ