ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಯನ್ನು ವನಸಿರಿ ಫೌಂಡೇಶನ್ ಸಂಸ್ಥೆಗೆ ನೀಡಿ ಗೌರವಿಸಬೇಕು:ಸೋಮನಾಥ ಶಿವಾಚಾರ್ಯ ಮಹಾಸ್ವಾಮಿಗಳು

ರಾಯಚೂರು:ಎಲೆಮರೆಕಾಯಿಯಂತೆ ಸದ್ದಿಲ್ಲದೇ ಕಾಯಕ ಮಾಡುತ್ತಿರುವ ಕಾಯಕ ಯೋಗಿ,ಪರಿಸರ ಪ್ರೇಮಿ,ಪ್ರಾಣಿ-ಪಕ್ಷಿಗಳ ರಕ್ಷಕ,ಬಿಸಿಲು ನಾಡನ್ನು ಹಸಿರು ನಾಡನ್ನಾಗಿ ಮಾಡಲು ನಿತ್ಯ ಪರಿಸರ ಸೇವೆ ಮಾಡುತ್ತಿರುವ ಸಿಂಧನೂರಿನ ವನಸಿರಿ ಫೌಂಡೇಶನ್ ಸಂಸ್ಥೆಗೆ ಕರ್ನಾಟಕ ಸರ್ಕಾರ 2023ರ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ನೀಡುವ ಮೂಲಕ ಕಾಯಕಯೋಗಿಗಳನ್ನು ಗೌರವಿಸುವಂತಾಗಬೇಕು ಎಂದು ಒತ್ತಾಯಿಸಿದರು.

ಕಲ್ಯಾಣ ಕರ್ನಾಟಕದಾದ್ಯಂತ ಅತ್ಯಂತ ಹೆಚ್ಚು ಬಿಸಿಲನ್ನು ಹೊಂದಿದ್ದು,ಈ ಭಾಗದಲ್ಲಿ ಹಸಿರೀಕರಣ ಮಾಡಲು ಬಿಸಿಲಿನ ತಾಪವನ್ನು ಕಡಿಮೆಗೊಳಿಸಲು ಎಲೆಮರೆಯ ಕಾಯಿಯಂತೆ ಪರಿಸರ ಸೇವೆಯಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡು ಸಸಿಗಳನ್ನು ನೆಡುವುದು,ಇದ್ದ ಸಸಿಗಳಿಗೆ ನೀರುಣಿಸುವ ಮೂಲಕ ರಕ್ಷಣೆ ಮಾಡುವುದು,ಸಾರ್ವಜನಿಕರಿಗೆ ,ಶಾಲಾ ವಿದ್ಯಾರ್ಥಿಗಳಿಗೆ ವಿವಿಧ ರೀತಿಯಲ್ಲಿ ವಿವಿಧ ಕಾರ್ಯಕ್ರಮಗಳ ಮೂಲಕ ಸುಮಾರು 9 ವರ್ಷಗಳಿಂದ ದಿನನಿತ್ಯ ನಿರಂತರವಾಗಿ ಪರಿಸರ ಸೇವೆಯಲ್ಲಿ ತೊಡಗಿರುವ ವನಸಿರಿ ಫೌಂಡೇಶನ್ ಸಂಸ್ಥೆಗೆ ಕರ್ನಾಟಕ ರಾಜ್ಯ ಸರ್ಕಾರ 2023ರ ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸಬೇಕು ಎಂದು ಸಿಂಧನೂರಿನ ಬಾಳೆಹೊನ್ನೂರು ಶಾಖಾ ಮಠದ ಶ್ರೀ ಶ್ರೀ ಶ್ರೀ ಷ.ಬ್ರ.ಸೋಮನಾಥ ಶಿವಾಚಾರ್ಯ ಮಹಾಸ್ವಾಮಿಗಳು ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ