ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಪ್ರಾಮಾಣಿಕರಿಗೆ ರಾಜ್ಯೋತ್ಸವ ಪ್ರಶಸ್ತಿ ನೀಡಲು ಆಗ್ರಹ

ಕಲಬುರಗಿ:ಕನ್ನಡಕ್ಕಾಗಿ ಹೋರಾಟ ಮಾಡಿರುವ, ಕನ್ನಡ ಸೇವೆ ಸಲ್ಲಿಸುತ್ತಿರುವ ಪ್ರಾಮಾಣಿಕರಿಗೆ ಪ್ರಸಕ್ತ ಸಾಲಿನ ರಾಜ್ಯೋತ್ಸವ ಪ್ರಶಸ್ತಿಯನ್ನು ನೀಡಬೇಕು ಎಂದು ಕರವೇ(ಪ್ರವೀಣ ಶೆಟ್ಟಿ ಬಣ)ದ ಕಲ್ಯಾಣ ಕರ್ನಾಟಕ ಅಧ್ಯಕ್ಷ ಅಭಿಷೇಕ ಬಾಲಾಜಿ ಅವರು ಆಗ್ರಹಿಸಿದ್ದಾರೆ.ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿದ ಅವರು,
ರಾಜ್ಯದಲ್ಲಿ ಕನ್ನಡ ಅಭಿವೃದ್ಧಿಗಾಗಿ ಹಲವಾರು ಜನರು ತೆರೆ ಮರೆಯಲ್ಲಿ ಕೆಲಸ ಮಾಡುತ್ತಿದ್ದಾರೆ.ಅಂತಹವರನ್ನು ಗುರುತಿಸಿ ಪ್ರೋತ್ಸಾಹಿಸಬೇಕು ಎಂದ ಅವರು,ರಾಜ್ಯ ಪ್ರಶಸ್ತಿ ನೀಡುವ ವೇಳೆ ಕನ್ನಡದ ಅಭಿವೃದ್ಧಿಗೆ ಕ್ರಿಯಾತ್ಮಕವಾಗಿ ಸೇವೆ ಸಲ್ಲಿಸುತ್ತಿರುವ ಹಾಗೂ ಸಾಹಿತ್ಯ ಮತ್ತು ಸಾಂಸ್ಕೃತಿಕ ಕ್ಷೇತ್ರಕ್ಕೆ ಆದ್ಯತೆ ನೀಡಬೇಕು ಎಂದು ಹೇಳಿದರು.ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕೇವಲ ಸಾಹಿತ್ಯ ಕ್ಷೇತ್ರವನ್ನು ಮಾತ್ರ ಪರಿಗಣಿಸಿದ್ದು,ಉಳಿದ ಹಲವು ಕ್ಷೇತ್ರಗಳನ್ನು ಕಡೆಗಣಿಸಲಾಗಿದೆ ಅಲ್ಲದೆ,ಈ ಹಿಂದೆ ಪ್ರಶಸ್ತಿ ಪಡೆದವರಿಗೆ ಮತ್ತೆ ಪ್ರಶಸ್ತಿ ನೀಡುವ ಪರಿಪಾಠವನ್ನು ಆರಂಭಿಸಿದೆ ಹೀಗಾಗಿ,ಈಗಾಗಲೇ ಪ್ರಶಸ್ತಿ ಪಡೆದವರನ್ನು ಮರು ಆಯ್ಕೆ ಮಾಡಬಾರದು ಹಾಗೂ ಸರಕಾರದ ಬೇರೆ ಬೇರೆ ಇಲಾಖೆ ನೀಡುವ ಪ್ರಶಸ್ತಿಯನ್ನು ಪಡೆದವರನ್ನು ಪರಿಗಣಿಸದೆ,ಕನ್ನಡ ಸೇವೆ ಮಾಡುತ್ತಿರುವ ಹಿರಿಯ ಮತ್ತು ಕಿರಿಯರನ್ನು ಗುರುತಿಸಬೇಕು ಎಂದು ಅವರು ಆಗ್ರಹಿಸಿದರು.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ