ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಹುತಾತ್ಮ ವೀರಯೋಧರ ಅಮೃತ ಉದ್ಯಾನವನಕ್ಕೆ: ಯಾದಗಿರಿ ಜಿಲ್ಲೆಯಿಂದ ಮಣ್ಣು ಬೀಳ್ಕೊಡುಗೆ

ಯಾದಗಿರಿ ಜಿಲ್ಲೆಯ ಶಹಾಪುರ ಮತಕ್ಷೇತ್ರದಿಂದ ಬಿಜೆಪಿಯ ಶಹಾಪುರ ನಗರದ ಮಂಡಲ ಅಧ್ಯಕ್ಷರಾದ ದೇವಿಂದ್ರಪ್ಪ ಕೊನೇರ್ ಹಾಗೂ ಯಾದಗಿರಿ ಜಿಲ್ಲಾ ಶಿಕ್ಷಕರ ಪ್ರಕೋಷ್ಠದ ಸಂಚಾಲಕರಾದ ರಂಗಣ್ಣ ಜಿರ್ಲೆ ಇವರು ನವ ದೆಹಲಿಯಲ್ಲಿ ನಡೆಯಲಿರುವ ದೆಹಲಿಯ ಕರ್ತವ್ಯ ಪಥದಲ್ಲಿ ಹುತಾತ್ಮರಾದ ವೀರಯೋಧರ ಗೌರವಾರ್ಥವಾಗಿ ನಿರ್ಮಾಣ ವಾಗಲಿರುವ ಅಮೃತ ಉದ್ಯಾನವನಕ್ಕೆ ನಮ್ಮ ಯಾದಗಿರಿ ಜಿಲ್ಲೆಯಿಂದ ಅಂದರೆ ಶಹಾಪುರ,ಸುರಪುರ,ಗುರಮಿಟಕಲ್ ನಿಂದ ಪವಿತ್ರವಾದ ಮಣ್ಣು ತುಂಬಿದ ಅಮೃತ ಕಳಶವನ್ನು ಬೀಳ್ಕೊಡಲಾಯಿತು.ಇಂದು ಮಧ್ಯಾಹ್ನ 12:30 ಕ್ಕೆ ಶಹಾಪುರ ನಗರದ ಶ್ರೀ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಯಾದಗಿರಿ ಜಿಲ್ಲೆಯ ಎಲ್ಲಾ ತಾಲೂಕಿನ ಪವಿತ್ರವಾದ ಮಣ್ಣು ಪೂಜೆ ಸಲ್ಲಿಸಲಾಯಿತು.ಈ ಸಂದರ್ಭದಲ್ಲಿ ಶರಣು ಟೋಕಪುರ,ಸಾಗರ ಜೋಷಿ,ನಾಗೇಶ್ ಭಾಸುತ್ಕರ್, ವಿರೇಶ ಸುರಪುಕರ್ ಹಾಗೂ ಹಿರಿಯ ಮುಖಂಡರು ಹುತಾತ್ಮರಾದ ವೀರಯೋಧರಿಗೆ ಗೌರವ ಸಲ್ಲಿಸಿ ಈ ಕಾರ್ಯಕ್ರಮದಲ್ಲಿ ಬಿಜೆಪಿ ಕಾರ್ಯಕರ್ತರು ಹಾಗೂ ಮುಖಂಡರು ಭಾಗವಹಿಸಿದ್ದರು.
ವರದಿ ರಾಜಶೇಖರ ಮಾಲಿ ಪಾಟೀಲ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ