ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಕೆಬಿಎನ್ ವಿವಿ:”ಸೈಬರ್ ಭದ್ರತೆ ಜಾಗೃತಿ” ಉಪನ್ಯಾಸ

ಕಲಬುರಗಿ ನಗರದ ಖಾಜಾ ಬಂದಾನವಾಜದ ಪ್ರಾಣಿಶಾಸ್ತ್ರ ವಿಭಾಗದಲ್ಲಿ ಸೋಮವಾರ ಸೈಬರ್ ಭದ್ರತೆ ಜಾಗೃತಿ ಬಗ್ಗೆ ಉಪನ್ಯಾಸ ಹಮ್ಮಿಕೊಳ್ಳಲಾಗಿತ್ತು ಕಲಾ,ಮಾನವೀಕತೆ,ಭಾಷಾ, ಸಮಾಜ ವಿಜ್ಞಾನ ಮತ್ತು ವಿಜ್ಞಾನ ನಿಕಾಯದ ಡೀನ್ ಡಾ.ನಿಶಾತ್ ಆರೀಫ್ ಹುಸೇನಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು.
ಈ ಉಪನ್ಯಾಸದಲ್ಲಿ ಕೆಬಿಎನ್ ಇಂಜಿನಿಯರಿಂಗ್ ಕಾಲೇಜಿನ ಕಂಪ್ಯೂಟರ್ ವಿಜ್ಞಾನ ವಿಭಾಗದ ಸಹಾಯಕ ಪ್ರಾಧ್ಯಪಕರಾದ ಶಿರೀನ ಫಾತಿಮಾ ಮತ್ತು ಆಯೇಷಾ ಕಿರಣ ಭಾಗವಹಿಸಿದ್ದರು.
ಆಯೇಷಾ ಕಿರಣ ಅವರು ಸೈಬರ್ ಭದ್ರತೆ,ಸೈಬರ್ ಸ್ಪೇಸ್, ಸೈಬರ್ ಭದ್ರತಾ ಬೆದರಿಕೆಗಳ ವಿಧಗಳು,ಸೈಬರ್ ಭದ್ರತಾ ಮೂಲ ಪರಿಶೀಲನಾಪಟ್ಟಿ,ಸೈಬರ್ ಅಪರಾಧಕ್ಕೆ ಸುರಕ್ಷತಾ ಸಲಹೆ ಇವುಗಳ ಬಗ್ಗೆ ಮಾತನಾಡಿದರು.

ಶಿರೀನ್ ಫಾತಿಮಾ ಇವರು ಸೈಬರ್ ಭದ್ರತೆ ಬಗ್ಗೆ ಜಾಗೃತಿ,ಸೈಬರ ಕಾನೂನು,ಸೈಬರ್ ಅಪರಾಧಗಳನ್ನು ಹೇಗೆ ವರದಿ ಮಾಡುವುದು ಎಂಬುದನ್ನು ಕುರಿತು ವಿದ್ಯಾರ್ಥಿಗಳಿಗೆ ಪ್ರಾಯೋಗಿಕ ಕಲಿಕೆ ನೀಡಿದರು.
ಈ ಉಪನ್ಯಾಸ ಕಾರ್ಯಕ್ರಮದಲ್ಲಿ ಎಲ್ಲಾ ವಿಭಾಗದ ಸಹಾಯಕ ಪ್ರಾಧ್ಯಪಾಕರು ಹಾಜರಿದ್ದರು ಸೈದ ಖಾತಿಜ ಕಾರ್ಯಕ್ರಮಕ್ಕೆ ಸ್ವಾಗತ ಕೋರಿ,ಪರಿಚಯ ನೀಡಿ ನಿರೂಪಣೆ ಮಾಡಿದರೆ ಫೈಝ ನಾಜ ವಂದಿಸಿದರು.
ವರದಿ:ಅಪ್ಪಾರಾಯ ಬಡಿಗೇರ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ