ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ನಗನೂರ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ

ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ನಗನೂರ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಅದ್ಧೂರಿಯಾಗಿ ಆಚರಣೆ ಮಾಡಲಾಯಿತು.
ಈ ಕಾರ್ಯಕ್ರಮದಲ್ಲಿ ಅಧ್ಯಕ್ಷತೆಯನ್ನು ಶಾಂತಪ್ಪ ರಾಠೋಡ ಮುಖ್ಯ ಶಿಕ್ಷಕರು ಹಾಗೂ ಸಿ.ಆರ್.ಪಿ ತಿಪ್ಪಣ್ಣ ನಾಯಕ ಅತಿಥಿ ಸ್ಥಾನ ವಹಿಸಿದ್ದರು.೫೦ ನೇ ಕನ್ನಡ ರಾಜ್ಯೋತ್ಸವದ ಅಂಗವಾಗಿ ಶಾಲಾ ಅಭಿವೃದ್ಧಿ ಅಧ್ಯಕ್ಷರಾದ ಅನಂತರಡ್ಡಿ ಕೆಂಚಗೋಳ ಧ್ವಜಾರೋಹಣ ನೆರವೇರಿಸಿದರು ನಂತರ ರಾಷ್ಟ್ರಗೀತೆ ಹಾಗೂ ನಾಡ ಗೀತೆಯನ್ನು ಹಾಡಲಾಯಿತು ಶಾಲಾ ವಿದ್ಯಾರ್ಥಿಗಳಿಂದ ಸ್ವಾಗತ ಗೀತೆ ನಮ್ಮ ಚಲುವ ಕನ್ನಡ ನಾಡು ಗೀತೆಗೆ ೪ ನೇ ತರಗತಿ ಮಕ್ಕಳು ನೃತ್ಯ ಪ್ರದರ್ಶನ ಮಾಡಿದರು.
ತಿಪ್ಪಣ್ಣ ನಾಯಕ ಸಿ.ಆರ್.ಪಿ ಸುದೀರ್ಘವಾಗಿ ಕರ್ನಾಟಕ ಇತಿಹಾಸ ಹಾಗೂ ಕನ್ನಡ ನಾಡಿನ ಪರಂಪರೆ ಹಾಗೂ ಕರ್ನಾಟಕ ನಡೆದು ಬಂದ ದಾರಿಯ ಬಗ್ಗೆ ಸಂಪೂರ್ಣವಾಗಿ ಮಾಹಿತಿ ನೀಡಿದರು ನಮ್ಮ ಭಾಷೆಯ ಅಭಿಮಾನದ ಬಗ್ಗೆ ಶಾಲಾ ವಿದ್ಯಾರ್ಥಿಗಳಿಗೆ ಸವಿಸ್ತಾರವಾಗಿ ಮಾಹಿತಿ ನೀಡಿದರು ಮಲ್ಲಿಕಾರ್ಜುನ ಶಿಕ್ಷಕರಿಂದ ಕಾರ್ಯಕ್ರಮದ ನಿರೂಪಣೆ,ಬಸವರಾಜ ಶಿಕ್ಷಕರಿಂದ ವಂದನಾರ್ಪಣೆ ನಡಿಸಿ ಕೊಟ್ಟರು.ಈ ಸಂದರ್ಭದಲ್ಲಿ ನಗನೂರ ಗ್ರಾಮಸ್ಥರು ಹಾಗೂ ಅತಿಥಿ ಶಿಕ್ಷಕರು ಮತ್ತು ಮುದ್ದು ಮಕ್ಕಳು ಶಾಲೆಯ ಎಸ್.ಡಿ.ಎಂ.ಸಿ ಸದಸ್ಯರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ವರದಿ ರಾಜಶೇಖರ ಮಾಲಿ ಪಾಟೀಲ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ