ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಕಾಲುವೆಗೆ ನೀರು ಬಿಡುವಂತೆ ಮನವಿ

ಕಲಬುರಗಿ: ಚಿತ್ತಾಪೂರ ತಾಲೂಕಿನ ರೈತರ ಹೊಲಗಳಿಗೆ ನೀರು ಇಲ್ಲದೇ ಬೆಳೆಗಳು ಹಾಳಾಗುತ್ತಿದ್ದು ಕೂಡಲೇ‌‌ ಕಾಲುವೆ ಕೆಳಭಾಗದ ಹೊಲಗಳಿಗೆ ಅನುವಾಗುವಂತೆ ಕಾಲುವೆ ನೀರು ಹರಿಸಬೇಕು ಎಂದು ಬಿಜೆಪಿ ಮುಖಂಡ ಗುಂಡಪ್ಪ ಟಿ ಮತ್ತಿಮಡು ಗುರುವಾರ ಹೆಬ್ಬಾಳ ಬೆಣ್ಣೆತುರಾ ನೀರಾವರಿ ಇಲಾಖೆ ಅಧಿಕಾರಿಗಳಿಗೆ ಭೇಟಿ ನೀಡಿ ಮನವಿ ಮಾಡಿಕೊಂಡರು.ಹೆಬ್ಬಾಳ ಬೆಣ್ಣೆತೂರಾ ವ್ಯಾಪ್ತಿಯ ಮತ್ತಿಮೂಡ, ಕೋರವಾರ, ಇಂಗನಕಲ್,ಕಲಗುರ್ತಿ,ಮಲಘಾಣ,ಗುಂಡಗುರ್ತಿ,ವಚ್ಚಾ,ಮುಗುಟಾ, ಪೇಟಶಿರೂರ, ಬೆಣ್ಣೂರ,ಸಂಗಾವಿ ಮತ್ತು ಹೆಬ್ಬಾಳ ವ್ಯಾಪ್ತಿಯ ಎಲ್ಲಾ ಗ್ರಾಮದ ಹೊಲಗಳಿಗೆ ಸಮರ್ಪಕವಾಗಿ ನೀರು ಬಿಡಬೇಕು ಎಂದು ಅವರು ಆಗ್ರಹಿಸಿದರು.ಈ ಕುರಿತು ಇಲಾಖೆ ಅಧಿಕಾರಿಗಳಿಗೆ ಪತ್ರ ಬರೆದಿರುವ ಅವರು ಜಿಲ್ಲೆಯಲ್ಲಿ ಮಳೆಯೂ ಇಲ್ಲ, ಕಾಲುವೆಗೂ ನೀರು ಬರುತ್ತಿಲ್ಲ ಬೆಳೆಗಳು ಒಣಗಿ ಹೋಗಿದ್ದು, ಇನ್ನೂ ನಾಲ್ಕು ದಿನಗಳಲ್ಲಿ ಮಳೆ ಅಥವಾ ಕಾಲುವೆಗೆ ನೀರು ಬರದಿದ್ದರೆ ಪರಿಸ್ಥಿತಿ ಇನ್ನಷ್ಟು ಬಿಗಡಾಯಿಸಲಿದೆ ಎಂದು ಅವರು ಅಧಿಕಾರಿಗಳಿಗೆ ಮನವರಿಕೆ ಮಾಡಿಕೊಂಡರು. ಕಾಲುವೆ ಕೆಳಭಾಗದ ರೈತರ ಜಮೀನುಗಳಿಗೆ ಸಮರ್ಪಕ ನೀರು ಬರದೆ ಬೆಳೆಗಳು ಒಣಗುತ್ತಿವೆ ಎಂದು ಅಧಿಕಾರಿಗಳ ಎದುರು ಅವರು ಗೋಳು ತೋಡಿಕೊಂಡರು. ರೈತರನ್ನು ಮುರ್ಖರನ್ನಾಗಿಸುವ ಕುತಂತ್ರ ನಮಗೆ ಟಪ್ ಅ್ಯಂಡ ಆನ್ ಪದ್ದತಿ ಬೇಡ ರಾಜ್ಯ ಸರಕಾರ ತಾನು ನೀಡಿದ ಆದೇಶದಂತೆ ನೀರು ಹರಿಸಬೇಕು ಎಂದರು.ಸಚಿವ ಪ್ರಿಯಾಂಕ ಖರ್ಗೆ ಕಿಂಚಿತ್ತೂ ಮನ್ನಣೆ ನೀಡುತ್ತಿಲ್ಲ.ಇದು ಅವರ ರೈತ ವಿರೋಧಿ ಧೋರಣೆಯಾಗಿದೆ‌ ಎಂದು ಅವರು ಆರೋಪಿಸಿದ್ದಾರೆ. ತಕ್ಷಣ ವಾರದಲ್ಲಿ ಕಾಲುವೆಗೆ ನೀರು ಹರಿಸಲು ಕ್ರಮ ಕೈಗೊಳ್ಳಬೇಕು ಇಲವಾದಲ್ಲಿ ಉಗ್ರವಾದ ಹೋರಾಟ ಮಾಡಬೇಕಾಗುತ್ತದೆ ಎಂದು ಅವರು ಎಚ್ಚರಿಕೆ‌ ನೀಡಿದರು.ಈ ಸಂದರ್ಭದಲ್ಲಿ ಯುವ ಮೋರ್ಚಾ ಅಧ್ಯಕ್ಷ ದೇವರಾಜ ತಳವಾರ,ಶರಣು ಸಂಗಾವಿ ಸಾಹುಕಾರ,ನಿಂಗಪ್ಪ ಪೂಜಾರಿ ಸೇರಿದಂತೆ ಹಲವು ರೈತರೊಂದಿಗೆ ಬೆಣ್ಣೆತೂರಾ ಅಧಿಕಾರಿಗಳಿಗೆ ಮನವಿ ಸಲ್ಲಿಸಿದರು.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ