ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ದಲಿತ ಮುಖಂಡನ ಹತ್ಯೆಗೈದ ಆರೋಪಿಗಳನ್ನು ಬಂಧಿಸಿ:ಹಣಮಂತ.ಎಮ್.ಬಿಲ್ಲವ್

ಯಾದಗಿರಿ:ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನ ಮದ್ಲಾಪುರ್ ಗ್ರಾಮದ ಸಾಮಾಜಿಕ ಹೋರಾಟಗಾರ ದಲಿತ ಮುಖಂಡ ಪ್ರಸಾದ್ ಮದ್ಲಾಪುರ್ ತೋಟಕ್ಕೆ ಹೋಗುವ ರಸ್ತೆಯ ಮಾರ್ಗ ಮಧ್ಯದಲ್ಲಿ ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆಗೈದ ಆರೋಪಿಗಳನ್ನು ಕೂಡಲೇ ಬಂಧಿಸುವಂತೆ ಜಾಂಭವ ಯುವ ಸೇನೆ ಯಾದಗಿರಿ ಜಿಲ್ಲಾಧ್ಯಕ್ಷ ಹಣಮಂತ.ಎಮ್.ಬಿಲ್ಲವ್ ಅವರ ನೇತೃತ್ವದಲ್ಲಿ ಇಂದು ಯಾದಗಿರಿ ಜಿಲ್ಲಾಧಿಕಾರಿಗಳಿಗೆ ಮನವಿ ಪತ್ರವನ್ನು ಸಲ್ಲಿಸಿದರು.
ಹಣಮಂತ.ಎಮ್.ಬಿಲ್ಲವ್ ಮಾತನಾಡುತ್ತಾ ಸಾಮಾಜಿಕ ಹೋರಾಟಗಾರ ದಲಿತ ಮುಖಂಡ ಪ್ರಸಾದ ಮದ್ಲಾಪುರ ಅವರನ್ನು ಹಾಡುಹಗಲಲ್ಲೇ ಮಾರಕಾಸ್ತ್ರಗಳಿಂದ ಬರ್ಬರವಾಗಿ ಕೊಚ್ಚಿ ಕೊಲೆ ಮಾಡಿದಂತ ಆರೋಪಿಗಳನ್ನು ಬಂಧಿಸಿ ಗಲ್ಲು ಶಿಕ್ಷೆವಿಧಿಸಬೇಕು ಮೃತ ದುರ್ದೈವಿ ಪ್ರಸಾದ ಕುಟುಂಬಕ್ಕೆ ಸರ್ಕಾರಿ ನೌಕರಿ ಕೊಡಬೇಕು 25 ಲಕ್ಷ ಪರಿಹಾರ ನೀಡಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.
ದಲಿತರ ಪರ ಇರುವಂತ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಹಾಡುಹಗಲಲ್ಲೇ ದಲಿತರ ಮೇಲೆ ಮಾರಣಾಂತಿಕ ಹಲ್ಲೆ,ಅತ್ಯಾಚಾರ,ಕೊಲೆ,ಸುಲಿಗೆ ನಡಿತಾ ಇದ್ರೂನು ಕೂಡಾ ಗೃಹ ಇಲಾಖೆ ಏನು ಮಾಡ್ತಾ ಇದೆ ಎಂಬುವುದು ತಿಳಿಯುತ್ತಿಲ್ಲ ದಲಿತ ಸಮಾಜದ ಮುಖಂಡನ ಕೊಲೆಗೆ ರಾಯಚೂರು ಪೋಲಿಸ್ ಇಲಾಖೆಯ ಕಾರ್ಯ ವೈಫಲ್ಯತೆಯಿಂದಾನೆ ಇವತ್ತು ಸಾಮಾಜಿಕ ಹೋರಾಟಗಾರ ದಲಿತ ಮುಖಂಡನ ಹತ್ಯೆ ಆಗಿದೆ.
ಮುಂದಿನ ದಿನಗಳಲ್ಲಿ ಇಂತಹ ಯಾವುದೇ ಘಟನೆಗಳು ಮರುಕಳಿಸದಂತೆ ಗೃಹ ಇಲಾಖೆ ಎಚ್ಚರಿಕೆ ವಹಿಸಬೇಕು ಎಂದು ಹೇಳಿದರು.
ಈ ಸಂದರ್ಭದಲ್ಲಿ ಜಾಂಭವ ಯುವ ಸೇನೆಯ ಯಾದಗಿರಿ ಜಿಲ್ಲಾ ಉಪಾಧ್ಯಕ್ಷ ಅಯ್ಯಪ್ಪ.ಟಿ. ಬಿಲ್ಲವ್ ಮುಖಂಡರಾದ ಸಂತೋಷ ಮ್ಯಾತ್ರಿ, ದೇವೆಂದ್ರಪ್ಪ ಶಾಂತಗಿರಿ,ಯಲಪ್ಪ ಅರಗ,ಸುರಪುರ ತಾಲೂಕು ಅಧ್ಯಕ್ಷ ಮರೆಪ್ಪ.ಎಮ್.ಗೋಗಿಕೇರಿ, ಭೀಮಣ್ಣ ಖಂಡ್ರೆ,ಕೃಷ್ಣಾ ಕಡಿಮನೆ,ಪರಮಣ್ಣ ದೊಡ್ಡಮನಿ,ಕಿರಣ್ ಇತರರು ಉಪಸ್ಥಿತರಿದ್ದರು.
ವರದಿ ರಾಜಶೇಖರ ಮಾಲಿ ಪಾಟೀಲ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ