ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

19ನೇ ವರ್ಷದ ಪಾದಯಾತ್ರೆಗೆ ಅಧ್ಯಕ್ಷ ಗಂಗಣ್ಣರಿಂದ ಚಾಲನೆ:

ಹನೂರು ಸದ್ಭಾವ ಸೇವಾ ಸಮಿತಿ(ರಿ.) ಟ್ರಸ್ಟ್ ವತಿಯಿಂದ ಶ್ರೀ ಮಲೆ ಮಹದೇಶ್ವರ ಬೆಟ್ಟಕ್ಕೆ 19ನೇ ವರ್ಷದ ಪಾದಯಾತ್ರೆಗೆ ಅಧ್ಯಕ್ಷ ಗಂಗಣ್ಣ ಚಾಲನೆ ನೀಡಿದರು.

ಹನೂರು:ಪಟ್ಟಣದ ಬನ್ನಿಮರ ಬೀದಿಯಿಂದ ಪ್ರಾರಂಭವಾಗಿ ವಿವಿಧ ಬಡಾವಣೆಯ ಭಕ್ತರೆಲ್ಲರೂ ಅನ್ನಪೂರ್ಣೇಶ್ವರಿ ಹೋಟೆಲ್ ಹತ್ತಿರ ಒಟ್ಟುಗೂಡಿ ಅಲ್ಲಿಂದ ಪಾದಯಾತ್ರೆಯನ್ನು ಪ್ರಾರಂಭಿಸಿ ಶ್ರೀ ಮಲೆ ಮಹದೇಶ್ವರ ಬೆಟ್ಟಕ್ಕೆ ಸಾವಿರಾರು ತೆರಳಿದರು ಎಲ್ಲಾರಲ್ಲೂ ನಾವು ಒಬ್ಬರಾಗಿ ದೇವರ ಕೃಪೆಗೆ ಪಾತ್ರರಾಗೊಣವೆಂದು ಸದ್ಭಾವ ಸೇವಾ ಸಮಿತಿಯ ಅಧ್ಯಕ್ಷ ಗಂಗಾಧರ್ ತಿಳಿಸಿದರು.
ಹನೂರು ಪಟ್ಟಣದಲ್ಲಿ ಭಕ್ತರ ಸೇವೆ ಮಾಡಲೆಂದೆ ಭಕ್ತರಿಂದ ಭಕ್ತರಿಗಾಗಿ ರಚಿಸಿರುವ ನಮ್ಮ
ಸದ್ಭಾವ ಸೇವಾ ಸಮಿತಿ ವತಿಯಿಂದ ಶ್ರೀ ಮಲೆ ಮಹದೇಶ್ವರ ಬೆಟ್ಟಕ್ಕೆ 19ನೇ ವರ್ಷದ ಪಾದಯಾತ್ರೆಯನ್ನು ಬೆಳೆಸಿದ್ದೇವೆ ಎಲ್ಲರಿಗೂ ದೇವರು ಒಳ್ಳೆಯದನ್ನು ಮಾಡಲಿ ಎಂಬುದೆ ನಮ್ಮ ಆಸೆ ಎಂದು ಸಮಿತಿಯ ಕಾರ್ಯದರ್ಶಿ ಶಶಿಕುಮಾರ್ ತಿಳಿಸಿದರು ನಂತರ ಮಾತನಾಡಿದ ಅವರು ಕಳೆದ 19 ವರ್ಷಗಳಿಂದ ಬೆರಳೆಣಿಕೆಯಷ್ಟು ಜನರಿಂದ ಮಾತ್ರ ಪಾದಯಾತ್ರೆ ಕಾರ್ಯಕ್ರಮ ನಡೆಯುತ್ತಿದ್ದು ಕಳೆದ ಎರಡು ಮೂರು ನಾಲ್ಕು ವರ್ಷಗಳಿಂದ 2000ಕ್ಕೂ ಅಧಿಕ ಭಕ್ತರು ಪಾದಯಾತ್ರೆಗೆ ಆಗಮಿಸುತ್ತಿದ್ದು ಹೆಚ್ಚಿನ ಸಂಖ್ಯೆಯಲ್ಲಿ ಯುವಕರು ಸೇರಿದಂತೆ ಹಿರಿಯರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವುದು ಸಂತಸ ತಂದಿದೆ ಎಂದರು .
ಖರ್ಚುವೆಚ್ಚವನ್ನು ಹನೂರಿನ ಹಲವು ಮುಖಂಡರುಗಳು ಸೇರಿದಂತೆ ಹಲವು ಭಕ್ತರುಗಳು ಸ್ವಯಂ ಪ್ರೇರಿತರಾಗಿ ಮುಂದೆ ಬರುತ್ತಿದ್ದು ಪಾದಯಾತ್ರೆಗೆ ತೆರಳುವ ಪ್ರತಿಯೊಬ್ಬರೂ ಹಸಿವಿನಿಂದ ಬಳಲಬಾರದು ಎಂದು ಸಹಾಯ ಮಾಡುವ ಎಲ್ಲಾರಿಗೂ ಮಾದಪ್ಪ ಒಳಿತುಮಾಡಲಿ ಎಂದು ಸಮಿತಿಯವರು ತಿಳಿಸಿದರು ಹಾಗೂ ಕಾರ್ಯಕ್ರಮ ಮುಗಿದ ನಂತರ ಉಳಿದ ಹಣವನ್ನು ಯಾವುದೇ ರೀತಿಯ ದುರ್ಬಳಕೆ ಮಾಡಿಕೊಳ್ಳದೆ ಸದ್ಭಾವ ಸೇವಾ ಸಮಿತಿ ಟ್ರಸ್ಟ್ ನ ಖಾತೆಯಲ್ಲಿ ಇರಿಸಲಾಗುತ್ತದೆ.ಇದೇ ಸಂದರ್ಭದಲ್ಲಿ ಉಪಾಧ್ಯಕ್ಷ ಶಂಕರ್,ಕಾರ್ಯದರ್ಶಿ,ಖಜಾಂಜಿ ನಾರಾಯಣ್, ಸಮಿತಿಯ ಪದಾಧಿಕಾರಿಗಳು ಗುತ್ತಿಗೆದಾರಾದ ನಿಂಗಣ್ಣ ಹಾಗೂ ಸಾವಿರಾರು ಭಕ್ತಾದಿಗಳು ಭಾಗವಹಿಸಿದ್ದಾರೆ.
ವರದಿ ಉಸ್ಮಾನ್ ಖಾನ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ