ಶಹಾಪೂರ:ಭಾರತೀಯ ಜನತಾ ಪಕ್ಷದ ರಾಜ್ಯಾಧ್ಯಕ್ಷರನ್ನಾಗಿ ಬಿ.ವೈ.ವಿಜಯೇಂದ್ರ ಅವರನ್ನು ಪಕ್ಷದ ವರಿಷ್ಟರು ನೇಮಕ ಮಾಡಿರುವುದು ಕಲ್ಯಾಣ ಕರ್ನಾಟಕ ಭಾಗದ ಬಿಜೆಪಿ ಮುಖಂಡರಲ್ಲಿ ಸಂತಸ ಮತ್ತು ಹರ್ಷ ತಂದಿದೆ ಎಂದು ಬಿಜೆಪಿ ಮುಖಂಡ ಕರಣ ಸುಬೇದಾರ ಹೇಳಿದರು.
ಶಹಾಪುರ ಪಟ್ಟಣದಲ್ಲಿ ಪಟಾಕಿ ಸಿಡಿಸಿ ಸಿಹಿ ಹಂಚಿ ಮಾತನಾಡಿ ರಾಜ್ಯದಲ್ಲಿ ಪಕ್ಷದ ಬಲವರ್ಧನೆಗೆ ಹಿರಿಯ ಮುತ್ಸದಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಮಾರ್ಗ ದರ್ಶನದಲ್ಲಿ ವಿಜಯೇಂದ್ರ ಅವರು ಪಕ್ಷಕ್ಕೆ ಶಕ್ತಿ ತುಂಬಲಿದ್ದಾರೆ ಅವರ ನೇಮಕದಿಂದ ಕಲ್ಯಾಣ ಕರ್ನಾಟಕ ಪ್ರದೇಶದಲ್ಲಿ ಬಿಜೆಪಿ ಪಕ್ಷಕ್ಕೆ ಆನೆ ಬಲ ಬರಲಿದೆ ಪಕ್ಷಕ್ಕೆ ನೀಡಿರುವ ದೀಪಾವಳಿ ಹಬ್ಬದ ಈ ಕೊಡುಗೆ ಬರಲಿರುವ ಲೋಕಸಭಾ-2024 ರ ಚುನಾವಣೆಯಲ್ಲಿ ಪಕ್ಷದ ಕಾರ್ಯಕರ್ತರಲ್ಲಿ ಹೊಸ ಉತ್ಸಹ ತುಂಬಲಿದೆ.
ವಿಜಯೇಂದ್ರ ನಾಯಕತ್ವದಲ್ಲಿ ಕಾರ್ಯಕರ್ತರು ಐಕ್ಯತೆಯಿಂದ ಪಕ್ಷದ ಅಭ್ಯರ್ಥಿಗಳ ಗೆಲುವಿಗೆ ಕಾರ್ಯಾ ಪ್ರವೃತ್ತರಾಗಲಿದ್ದಾರೆ.ಕಲ್ಯಾಣ ಕರ್ನಾಟಕ ಭಾಗದ ಕಾರ್ಯಕರ್ತರಲ್ಲಿ ಹೊಸ ಅಲೆ ಮತ್ತು ಶಕ್ತಿಯನ್ನು ಬಿಜೆಪಿಯ ನೂತನ ರಾಜ್ಯಾಧ್ಯಕ್ಷರು ತುಂಬಲಿದ್ದಾರೆ ಎಂದು ಅವರ ನೇಮಕ್ಕೆ ಹರ್ಷವನ್ನು ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಅಬ್ದುಲ್ ಹಾದಿಮನಿ,ಕರಬಸು ಬೀರಾಳ್,ಮಲ್ಲಿಕಾರ್ಜುನ್ ಜಾಕಾ,ಉಮೇಶ ಮಹಾಮನಿ,ಶರಣಗೌಡ ಕರಣ್ ಶಿರವಾಳ, ಶಿವಕುಮಾರ್ ಶಿರವಾಳ,ಮಹೇಶ ದೊರೆ, ಸಾಯಿಬಣ್ಣ ಶಹಾಪುರ,ಸೇರಿದಂತೆ ಅನೇಕ ಬಿಜೆಪಿ ಕಾರ್ಯಕರ್ತರು ಅಭಿಮಾನಿಗಳು ಉಪಸ್ಥಿತರಿದ್ದರು.
ವರದಿ ರಾಜಶೇಖರ ಮಾಲಿ ಪಾಟೀಲ್




















