ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ರೈತರಿಗೆ ಬೆಳೆ ಪರಿಹಾರ ನೀಡಿ:ಮಲ್ಲಣ್ಣ ಗೌಡ ಹಗರಟಗಿ ಆಗ್ರಹ

ಯಾದಗಿರಿ:ರಾಜ್ಯದಾದ್ಯಂತ ಸಕಾಲಕ್ಕೆ ಮಳೆಯಾಗದ ಕಾರಣ ರಾಜ್ಯಾದ್ಯಂತ ಅನೇಕ ಜಿಲ್ಲೆಗಳ ತಾಲೂಕುಗಳನ್ನು ಬರ ಪೀಡಿತ ಎಂದು ರಾಜ್ಯ ಸರಕಾರ ಘೋಷಣೆ ಮಾಡಿದ್ದರೂ ಜಿಲ್ಲಾ ಆಡಳಿತ ಅಧಿಕಾರಿಗಳು ಸಂಪೂರ್ಣ ವಿಫಲರಾಗಿದ್ದಾರೆ ಎಂದು ಮಲ್ಲಣ್ಣ ಗೌಡ ಹಗರಟಗಿ ಹೇಳಿದರು.ಅದರಲ್ಲಿ ನಮ್ಮ ಯಾದಗಿರಿ ಜಿಲ್ಲೆ ಕೂಡ ಒಂದಾಗಿದೆ ಬರಗಾಲ ಘೋಷಣೆಯಾಗಿ ಸುಮಾರು ಒಂದು ತಿಂಗಳು ಕಳೆದರೂ ಕೂಡಾ ನಮ್ಮ ಯಾದಗಿರಿ ಜಿಲ್ಲೆಗೆ ಸುಮಾರು 9 ಕೋಟಿ ಅನುದಾನ ಬಿಡುಗಡೆಯಾದರೂ ಕೂಡಾ ಇನ್ನೂ ರೈತರಿಗೆ ಬೆಳೆ ಪರಿಹಾರ ನೀಡದೇ ಇರುವುದು ಬೇಸರದ ಸಂಗತಿಯಾಗಿದೆ ಮಳೆ ಇಲ್ಲದೆ ಬೆಳೆ ನಷ್ಟಕ್ಕೆ ಸಿಲುಕಿ ರೈತರು ಬಹಳಷ್ಟು ಸಂಕಷ್ಟಕ್ಕೀಡಾಗಿದ್ದಾರೆ.
ರಾಜ್ಯ ಸರ್ಕಾರ ಹಾಗೂ ಜಿಲ್ಲಾ ಆಡಳಿತ ಆದಷ್ಟು ಬೇಗನೆ ರೈತರಿಗೆ ತೊಂದರೆಯಾಗದಂತೆ ಹಂತ ಹಂತವಾಗಿ ರೈತರ ಖಾತೆಗೆ ಬೆಳೆ ಪರಿಹಾರದ ಕೊಡಿಸಲು ಮುಂದಾಗಬೇಕು ಎಂದು ರೈತರು ನೋವು ಹಂಚಿಕೊಂಡರು.ಇದೇ ಸಂದರ್ಭದಲ್ಲಿ ಮಾತನಾಡಿದ ಯಾದಗಿರಿ ಜಿಲ್ಲೆಯ ರೈತ ಸಂಘದ ಹಾಗೂ ಹಸಿರು ಸೇನೆಯ ಜಿಲ್ಲಾಧ್ಯಕ್ಷರಾದ ಮಲ್ಲಣ್ಣ ಗೌಡ ಹಗರಟಗಿ ಅವರು ಮುಂದಿನ ದಿನಗಳಲ್ಲಿ ರೈತರಿಗೆ ಬೆಳೆ ಪರಿಹಾರ ನೀಡಿದೆ ಇದ್ದರೆ ಜಿಲ್ಲಾಧಿಕಾರಿ ಕಚೇರಿ ಮುಂದೆ ಉಗ್ರವಾದ ಹೋರಾಟ ಮಾಡಲಾಗುವುದು ಎಂದು ರಾಜ್ಯ ಸರ್ಕಾರಕ್ಕೆ ಹಾಗೂ ಜಿಲ್ಲಾ ಆಡಳಿತ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು.
ವರದಿ ರಾಜಶೇಖರ ಮಾಲಿ ಪಾಟೀಲ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ