ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ವೃಕ್ಷ ಬದುಕಿನ ಅಕ್ಷರವಾಗಲಿ:ಚನ್ನಪ್ಪ ವಿಶ್ವಕರ್ಮ

ಸಿಂಧನೂರು:ಇತ್ತೀಚಿನ ದಿನಗಳಲ್ಲಿ ಪರಿಸರದ ಬಗ್ಗೆ ಸಾಮಾಜಿಕ ಕಳಕಳಿ ಇರುವ ಮಾನವ ಸಂಪನ್ಮೂಲ ವ್ಯಕ್ತಿಗಳು ದೊರಕುವುದೇ ವಿರಳವಾಗಿದೆ.ಆದರೆ ಸಿಂಧನೂರು ತಾಲೂಕಿನ ಕೆ.ಹೊಸಹಳ್ಳಿ ಗ್ರಾಮದ ವನಸಿರಿ ಫೌಂಡೇಶನ್ ಜಿಲ್ಲಾಮಟ್ಟದ ಸಾಮಾಜಿಕ ಜಾಲತಾಣದ ಅಧ್ಯಕ್ಷರಾಗಿರುವ ಚನ್ನಪ್ಪ ವಿಶ್ವಕರ್ಮರವರು ತಮ್ಮ ಮಗುವಿನ ನಾಮಕರಣವನ್ನು 101 ಸಸಿಗಳನ್ನು ನೀಡುವ ಮೂಲಕ ವಿಶೇಷವಾಗಿ ಆಚರಿಸಿದರು.
ಪರಿಸರದ ಕಾಳಜಿ ಪ್ರತಿಯೊಬ್ಬರಲ್ಲಿ ಬರಬೇಕು ಹುಟ್ಟುಹಬ್ಬ ಮಗುವಿನ ನಾಮಕರಣ,ಮದುವೆಯಂತಹ ಸಮಾರಂಭಗಳಲ್ಲಿ ಬಂದಿರುವ ಅತಿಥಿಗಳಿಗೆಲ್ಲ ಸಸಿಗಳನ್ನು ನೀಡುವುದರ ಮೂಲಕ ಪರಿಸರದಲ್ಲಿ ಸಮತೋಲನ ಕಾಯ್ದುಕೊಳ್ಳುವುದರ ಜೊತೆಗೆ ಆಮ್ಲಜನಕದ ಲಭ್ಯತೆ ಹೆಚ್ಚಿಸಬಹುದಾಗಿದೆ.ಹಾಗಾಗಿ ನನ್ನ ಮಗುವಿನ ನಾಮಕರಣಕ್ಕೆ ಸಸಿಗಳನ್ನು ನೀಡಿದೆ ಎನ್ನುತ್ತಾರೆ ಚನ್ನಪ್ಪ ವಿಶ್ವಕರ್ಮರವರು.
ಹುಟ್ಟು ಹಬ್ಬದಲ್ಲಿ ಭಾಗವಹಿಸಿ ಪ್ರಾಸ್ತಾವಿಕವಾಗಿ ಮಾತನಾಡಿದ ವನಸಿರಿ ಫೌಂಡೇಶನ್ ಸಂಸ್ಥಾಪಕ ಅಮರೇಗೌಡ ನಮ್ಮ ತಂಡದ ವತಿಯಿಂದ ತಾಲೂಕು ಜಿಲ್ಲೆಯ ರಾಜ್ಯಮಟ್ಟದಲ್ಲಿ ಸಸಿಗಳನ್ನು ವಿತರಿಸುವ ಮತ್ತು ಅವುಗಳನ್ನು ಕಾಳಜಿ ವಹಿಸುವ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದೇವೆ ನಮ್ಮ ತಂಡದ ಉದ್ದೇಶವೇ ಹಸಿರು ಸಂರಕ್ಷಿಸುವುದು ಮತ್ತು ಸಸಿಗಳನ್ನು ಬೆಳೆಸುವುದು ಎಂದರು.
ಈ ಸಂದರ್ಭದಲ್ಲಿ ವನಸಿರಿ ಫೌಂಡೇಶನ್ ಸಂಸ್ಥಾಪಕ ಅದ್ಯಕ್ಷ ಅಮರೇಗೌಡ ಮಲ್ಲಾಪುರ ಹಾಗೂ ತಂಡದ ಸದಸ್ಯರು,ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳಾದ ಪಂಪನಗೌಡ ಹಾಗೂ ಸಿಬ್ಬಂದಿಗಳು,ಹಳೆಯ ವಿದ್ಯಾರ್ಥಿಗಳ ಸಂಘದ ಸದಸ್ಯರು,ಶಾಲೆಯ ಮುಖ್ಯ ಗುರುಗಳಾದ ಹುಸೇನ್ ಸಾಬ್ ಹಾಗೂ ಶಿಕ್ಷಕ ವರ್ಗದವರು ಹಾಗೂ ಅಂಗನವಾಡಿ ಶಿಕ್ಷಕರು ಹಾಗೂ ಸಿಬ್ಬಂದಿಗಳು, ತುರವಿಹಾಳ ಪ್ರಾಥಮಿಕ ಆರೋಗ್ಯ ಕೇಂದ್ರದ ಮೋದೀನ್ ಬೀ ಹಾಗೂ ಸಿಬ್ಬಂದಿಗಳು,ವಿಶ್ವಕರ್ಮ ಸಮಾಜದ ರಾಜ್ಯ ಕಾರ್ಯದರ್ಶಿ ಸೋಮಣ್ಣ ಸುಕಲಪೇಟೆ,ತಾಲೂಕ ಅಧ್ಯಕ್ಷರಾದ ಮೌನೇಶ ತಿಡಿಗೋಳ ಹಾಗೂ ಪದಾಧಿಕಾರಿಗಳು ಹಾಗೂ ಸಮಾಜದ ಬಂಧುಗಳು,ಕುಟುಂಬ ವರ್ಗದವರು ಹಾಗೂ ತುರವಿಹಾಳ ಸ್ನೇಹಿತರ ಬಳಗದ ಸದಸ್ಯರು ಭಾಗವಹಿಸಿ ಯಶಸ್ವಿಗೊಳಿಸಿದರು.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ