ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ರಾಜ್ಯಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಕಂಚಿನಪದಕ ಪಡೆದ ಗ್ರಾಮೀಣ ಪ್ರತಿಭೆ

ಸತತ ಮತ್ತು ಕಠಿಣ ಪರಿಶ್ರಮ ಮಾಡಬೇಕು
:ಬಾಬುಸಾಬ್: ಪಟುವಿಗೆ ಕಿವಿ ಮಾತು

ಗಂಗಾವತಿ:- ಇಂದು ಶಿವಮೊಗ್ಗ ಜಿಲ್ಲೆಯಲ್ಲಿ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ಜಿಲ್ಲೆಯ ವಿಶ್ವವಿದ್ಯಾಲಯ ಕ್ರೀಡಾಂಗಣದಲ್ಲಿ ಶಾಲೆ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ರಾಜ್ಯಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಗಂಗಾವತಿ ತಾಲೂಕಿನ ಬಸಾಪಟ್ಟಣದ ಗ್ರಾಮೀಣ ಕ್ರೀಡಾಪಟು ಅನುಷಾ 17 ರ ವಯೋಮಿತಿಯ -40 ಕೆ ಜಿ ಕುಮಿಟೆ (ಫೈಟ್) ವಿಭಾಗದಲ್ಲಿ ಉತ್ತಮ ಪ್ರದರ್ಶನ ತೋರಿ ತೃತೀಯ ಸ್ಥಾನದೊಂದಿಗೆ ಪ್ರಮಾಣ ಪತ್ರ ಮತ್ತು ಕಂಚಿನ ಪದಕಕ್ಕೆ ಕೊರಳೋಡ್ಡಿದ್ದಾರೆ ಎಂದು ಮುಖ್ಯ ತರಬೇತಿದಾರರಾದ ಬಾಬುಸಾಬ್ ತಿಳಿಸಿರುತ್ತಾರೆ.

ರಾಜ್ಯ ಮಟ್ಟದ ಕ್ರೀಡಾಕೂಟದಲ್ಲಿ ವಿಜೇತರಾದ ವಿದ್ಯಾರ್ಥಿಗೆ ಅಭಿನಂದಿಸಿ ಮತ್ತು ಕ್ರೀಡಾಪಟುವಿಗೆ ತೃತೀಯ ಸ್ಥಾನವೇ ತೃಪ್ತಿ ಅಲ್ಲ ಈ ಸ್ಥಾನ ಇನ್ನು ಹೆಚ್ಚಿನ ಕಠಿಣ ಪರಿಶ್ರಮವನ್ನು ಮಾಡಬೇಕು ಎಂಬುದರ ಸೂಚನೆ ಹಾಗಾಗಿ ಮುಂದಿನ ಪ್ರಥಮ ಸ್ಥಾನಕ್ಕೆ ಹೆಚ್ಚಿನ ಮಟ್ಟದಲ್ಲಿ ಅಭ್ಯಾಸವನ್ನು ಮಾಡುವುದರೊಂದಿಗೆ ಕ್ರೀಡಾ ಕ್ಷೇತ್ರದಲ್ಲಿ ರಾಜ್ಯ ಮತ್ತು ರಾಷ್ಟ್ರಮಟ್ಟದಲ್ಲಿ ಸಾಧನೆ ಮಾಡಲು ಮುಂದಾಗಬೇಕು ಎಂದು ಬಾಬುಸಾಬ್ ರವರು ಕ್ರೀಡಾಪಟುವಿಗೆ ಕಿವಿಮಾತು ಹೇಳಿದರು.

ಈ ಸಂದರ್ಭದಲ್ಲಿ ಸಹಾಯಕ ತರಬೇತುದಾರರಾದ ಅಂಬಿ ನಾಯಕ ಪಾಲಕರಾದ ಮಂಜುನಾಥ್ ಕಾತರಕಿ ಮತ್ತು ಇನ್ನಿತರರಿದ್ದರು.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ