ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಪ್ರಾದೇಶಿಕ ಸಾರಿಗೆ ಇಲಾಖೆಯಿಂದ ವಾಯು ಮಾಲಿನ್ಯ ನಿಯಂತ್ರಣ ಜಾಗೃತಿ ಕಾರ್ಯಕ್ರಮ

ಯಾದಗಿರಿ:ಶಹಾಪುರ ತಾಲೂಕಿನ ಮಾಂಗಿಲಾಲ ಜೈನ ಶಾಲೆಯಲ್ಲಿ ಇಂದು ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಕಚೇರಿ ಯಾದಗಿರಿ ಇವರಿಂದ ವಾಯುಮಾಲಿನ್ಯ ನಿಯಂತ್ರಣ ಜಾಗ್ರತಿ ಮಾಸಾಚರಣೆ ನವೆಂಬರ್ 2023 ಅಂಗವಾಗಿ ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ಈ ಕಾರ್ಯಕ್ರಮವನ್ನು ಪ್ರಾದೇಶಿಕ ಸಾರಿಗೆ ಅಧಿಕಾರಿಗಳಾದ ಮಿಲಿಂದ್ ಕುಮಾರ್ ರವರು ಉದ್ಘಾಟಿಸಿದರು ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಸ್ಥೆಯ ಅಧ್ಯಕ್ಷರಾದ ಶ್ರೀ ಮಾಂಗಿಲಾಲ ಜೈನ್ ವಹಿಸಿದ್ದರು.ಅದೇ ರೀತಿಯಾಗಿ ಈ ಕಾರ್ಯಕ್ರಮದಲ್ಲಿ ಸಂಸ್ಥೆಯ ಕಾರ್ಯದರ್ಶಿಗಳಾದ ದಿನೇಶ್ ಜೈನ್ ಪ್ರಾಂಶುಪಾಲರಾದ ಶ್ರೀ ವಂಶಕೃಷ್ಣ ಮತ್ತು ಉಪ ಪ್ರಾಂಶುಪಾಲರಾದ ಶ್ರೀಮತಿ ರಾಜೇಶ್ವರಿ.ಜಿ ಹಾಗೂ ಸಂಸ್ಥೆ ಎಲ್ಲಾ ಸಿಬ್ಬಂದಿಗಳು ಮತ್ತು ಯಾದಗಿರಿ ಜಿಲ್ಲಾ ಡ್ರೈವಿಂಗ್ ಸ್ಕೂಲ್ ಮಾಲಿಕರ ಅಸೋಸಿಯೇಷನ್ ಅಧ್ಯಕ್ಷರಾದ ಯಲ್ಲಪ್ಪ ದೊಡ್ಡಮನಿ ಭಾಗವಹಿಸಿದ್ದರು.
ಈ ಕಾರ್ಯಕ್ರಮದಲ್ಲಿ ಪ್ರಾದೇಶಿಕ ಸಾರಿಗೆ ಅಧಿಕಾರಿಗಳು ತಮ್ಮ ಅಭಿಪ್ರಾಯ ವ್ಯಕ್ತಪಡಿಸುತ್ತಾ ಇಂದಿನ ದಿನಮಾನದಲ್ಲಿ ವಾಹನಗಳಿಂದ ವಿಷಕಾರಿ ಅನಿಲ ಸೂಸುವದರಿಂದ ಮನುಷ್ಯನ ಜೀವಕ್ಕೆ ಕಂಟಕ ಇದರಿಂದ ಅನೇಕ ರೋಗಗಳನ್ನು ಬರುತ್ತಿವೆ ಆದ್ದರಿಂದ ಸಾರ್ವಜನಿಕರು ವಾಯುಮಾಲಿನ್ಯ ನಿಯಂತ್ರಣಕ್ಕೆ ಅನುಸರಿಸಬೇಕಾದ ಕ್ರಮ ಹಾಗೂ ವಾಯುಮಾಲಿನ್ಯದಿಂದ ಆಗುವ ದುಷ್ಪರಿಣಾಮದ ಬಗ್ಗೆ ವಿವರಿಸಿದರು ಅದೇ ರೀತಿಯಾಗಿ ಪ್ರಾರ್ಥನಾ ಗೀತೆಯನ್ನು ಕುಮಾರಿ ಸಂಜನಾ ಅವರು ಹಾಡಿದರು,ಸ್ವಾಗತ ಭಾಷಣ ಶ್ರೀಮತಿ ಅಶ್ವಿನಿ ಅವರು ಮಾಡಿದರು.
ಜೈನ ಶಾಲೆಯಲ್ಲಿ ವಾಯು ಮಾಲಿನ್ಯ ಜಾಗೃತ ವಿಷಯಕ್ಕೆ ಸಂಬಂಧಿಸಿದಂತೆ ಪ್ರಬಂಧ ಮತ್ತು ಚಿತ್ರಕಲಾ ಸ್ಪರ್ಧೆಯಲ್ಲಿ ವಿಜೇತರಾದ ಮಕ್ಕಳಿಗೆ ಪ್ರಶಸ್ತಿ ಪತ್ರ ವಿತರಣಾ ಕಾರ್ಯಕ್ರಮವನ್ನು ಶ್ರೀಮತಿ ಅಂಬಿಕಾ ಅವರು ಹಾಗೂ ಕೊನೆಯಲ್ಲಿ ವಂದನಾರ್ಪಣೆಯನ್ನು ಶ್ರೀಮತಿ ನಂದಿನಿ ಪಾಟೀಲ್ ನೆರವೇರಿಸಿದರು.ಇದೇ ಸಂದರ್ಭದಲ್ಲಿ ಪ್ರಾದೇಶಿಕ ಸಾರಿಗೆ ಇಲಾಖೆಯ ಅಧಿಕಾರಿಗಳು ಹಾಗೂ ಮಾಂಗಿಲಾಲ ಜೈನ ಶಾಲೆಯ ಶಿಕ್ಷಕ, ಶಿಕ್ಷಕಿಯರು,ವಿದ್ಯಾರ್ಥಿಗಳು ಈ ಸಮಾರಂಭದಲ್ಲಿ ಭಾಗವಹಿಸಿದ್ದರು.
ವರದಿ ರಾಜಶೇಖರ ಮಾಲಿ ಪಾಟೀಲ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ