ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಜನರ ಸಮಸ್ಯೆಗಳ ಶೀಘ್ರ ಇತ್ಯರ್ಥಕ್ಕೆ ಜನತಾ ದರ್ಶನ ಕಾರ್ಯಕ್ರಮ ಹೆಚ್ಚಿನ ಸಹಕಾರಿ

ಸಣ್ಣ ಕೈಗಾರಿಕೆ ಹಾಗೂ ಸಾರ್ವಜನಿಕ ಉದ್ದಿಮೆಗಳ ಖಾತೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ -ಶರಣಬಸಪ್ಪ ದರ್ಶನಾಪುರ

ಯಾದಗಿರಿ:ಸರ್ಕಾರಿ ಕಚೇರಿಗಳಿಗೆ ಸಾರ್ವಜನಿಕರ ಅಲೆದಾಟ ತಪ್ಪಿಸಲು ಹಾಗೂ ಸಕಾಲಕ್ಕೆ ಅವರಿಗೆ ನ್ಯಾಯ ಒದಗಿಸಲು “ಜನತಾ ದರ್ಶನ”ದಂತಹ ಮಹತ್ವಾಕಾಂಕ್ಷೆಯ ಕಾರ್ಯಕ್ರಮವನ್ನು ಸರ್ಕಾರ ಹಮ್ಮಿಕೊಂಡಿದೆ ಎಂದು ಸಣ್ಣ ಕೈಗಾರಿಕೆ ಮತ್ತು ಸಾರ್ವಜನಿಕ ಉದ್ದಿಮೆಗಳ ಖಾತೆ ಸಚಿವರು ಹಾಗೂ ಯಾದಗಿರಿ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ಶರಣಬಸಪ್ಪ ದರ್ಶನಾಪುರ ಅವರು ಹೇಳಿದರು.
ಶಹಾಪುರ ಸಮೀಪದ ಆರಬೋಳ ಕಲ್ಯಾಣ ಮಂಟಪದಲ್ಲಿ ಇಂದು ಜಿಲ್ಲಾಡಳಿತ,ಜಿಲ್ಲಾ ಪಂಚಾಯತ್ ಇವರ ಸಹಯೋಗದೊಂದಿಗೆ ಹಮ್ಮಿಕೊಂಡಿದ್ದ ಜನತಾ ದರ್ಶನ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಸಾರ್ವಜನಿಕರ ಕುಂದುಕೊರತೆಗಳಿಗೆ ತಕ್ಷಣ ಸ್ಪಂದಿಸುವ ಸದುದ್ದೇಶದೊಂದಿಗೆ ರಾಜ್ಯಾದ್ಯಂತ ಎಲ್ಲಾ ಜಿಲ್ಲಾ ಮತ್ತು ತಾಲ್ಲೂಕು ಕೇಂದ್ರಗಳಲ್ಲಿ ಜನತಾ ದರ್ಶನ ಹಮ್ಮಿಕೊಂಡಿದೆ ಸಾರ್ವಜನಿಕರ ಸಮಸ್ಯೆಗಳ ನಿವಾರಣೆಗೆ ಇದು ಅತ್ಯುತ್ತಮ ವೇದಿಕೆಯಾಗಿದ್ದು,ಇದರ ಸದುಪಯೋಗ ಪಡೆಯಬೇಕು ಅದರಂತೆ ಅಧಿಕಾರಿಗಳು ಕೂಡಾ ಸಕಾಲಕ್ಕೆ ಮತ್ತು ಆದ್ಯತೆಯ ಮೇಲೆ ಇಂತಹ ಕುಂದುಕೊರತೆ ಅರ್ಜಿಗಳಿಗೆ ಸಕಾಲಕ್ಕೆ ಸ್ಪಂದಿಸಿ ಕಾಲಮಿತಿಯೊಳಗೆ ಇತ್ಯರ್ಥಸುಡಿಸುವಂತೆ ಅವರು ತಿಳಿಸಿದರು.
ಸರ್ಕಾರ ಜನರ ಸಮಸ್ಯೆಗಳನ್ನು ಅರಿತಿದೆ ಈ ದಿಸೆಯಲ್ಲಿ ಮಹತ್ವಾಕಾಂಕ್ಷೆಯ ಗ್ಯಾರಂಟಿ ಯೋಜನೆ ಗಳನ್ನು ಜಾರಿಗೊಳಿಸಿದೆ ಶೇ 95 ರಷ್ಟು ಜನ ನೊಂದಣಿ ಮಾಡಿಕೊಂಡಿದ್ದು,ಗೃಹಲಕ್ಷ್ಮೀ, ಗೃಹಜ್ಯೋತಿ,ಶಕ್ತಿ ಯೋಜನೆ,ಅನ್ನಭಾಗ್ಯ ಯೋಜನೆಗಳ ಮೂಲಕ ಜನರ ಮನೆ ಬಾಗಿಲಿಗೆ ಇವುಗಳ ಲಾಭ ತಲುಪಿಸಿದೆ ಶೀಘ್ರದಲ್ಲಿಯೇ ಯುವನಿಧಿ ಯೋಜನೆ ಜಾರಿಗೆಗೂ ಸರ್ಕಾರ ಕ್ರಮ ಕೈಗೊಳ್ಳಲಿದೆ ಎಂದು ಅವರು ಹೇಳಿದರು.
ಹಲವು ವರ್ಷಗಳಿಂದ ವಿವಿಧ ಸರ್ಕಾರಿ ಇಲಾಖೆಗಳಲ್ಲಿ ಇತ್ಯರ್ಥವಾಗದೆ ಇರುವಂತಹ ಅರ್ಜಿಗಳಿಗೆ ಜನತಾ ದರ್ಶನ ಮೂಲಕ ಪರಿಹಾರ ದೊರೆಯುತ್ತಿದೆ ಕಾಲಮಿತಿಯೊಳಗೆ ಅರ್ಜಿಗಳ ಇತ್ಯರ್ಥಕ್ಕೂ ಕ್ರಮ ಕೈಗೊಂಡಿದ್ದು,ತಹಶೀಲ್,ಪುರಸಭೆ ಮತ್ತು ನಗರಸಭೆಗಳಲ್ಲಿ ಇ-ಆಫೀಸ್ ಮೂಲಕ ಅರ್ಜಿ ನೋಂದಣಿಗೆ ಅವಕಾಶ ಕಲ್ಪಿಸಲಾಗಿದೆ ಎಂದು ಅವರು ಹೇಳಿದರು.
ಸರ್ಕಾರ ನುಡಿದಂತೆ ನಡೆದಿದೆ ನೀಡಿದ ಮಾತನ್ನು ಉಳಿಸಿಕೊಂಡಿದೆ.ಬೇಳೆಕಾಳು,ಎಣ್ಣೆ,ಸೇರಿದಂತೆ ವಿವಿಧ ವಸ್ತುಗಳ ಬೆಲೆ ಏರಿಕೆಯಿಂದ ಹಾಗೂ ಹಸಿವಿನಿಂದ ಬಳಲುತ್ತಿದ್ದ ಬಡ ಜನರಿಗೆ ನೆರವಾಗಲು ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಿದೆ ಸರ್ಕಾರದ ಸವಲತ್ತುಗಳು ಸಕಾಲಕ್ಕೆ ಅಧಿಕಾರಿಗಳು ತಲುಪಿಸಿದಾಗ ಮಾತ್ರ ಸರ್ಕಾರದ ಧ್ಯೇಯೋದ್ದೇಶಗಳು ಈಡೇರಲಿವೆ. ಸಂಕಷ್ಟದಿಂದ ಬರುವ ಜನರ ಅರ್ಜಿಗಳ ವಿಲೇವಾರಿಗೆ ಅಧಿಕಾರಿಗಳು ವಿಶೇಷ ಗಮನ ನೀಡಿ ಇತ್ಯರ್ಥ ಪಡಿಸುವಂತೆ ಅವರು ತಿಳಿಸಿದರು.
ಜಿಲ್ಲೆಯ ಯಾದಗಿರಿ,ಸುರಪುರ ತಾಲ್ಲೂಕು ಕೇಂದ್ರ ಗಳಲ್ಲಿ ಜನತಾ ದರ್ಶನ ಕಾರ್ಯಕ್ರಮವನ್ನು ಯಶಸ್ವಿಯಾಗಿ ಹಮ್ಮಿಕೊಂಡಿದೆ. 583 ಅರ್ಜಿಗಳನ್ನು ಸ್ವೀಕರಿಸಲಾಗಿದ್ದು,ಈ ಪೈಕಿ 477 ಅರ್ಜಿಗಳನ್ನು ಇತ್ಯರ್ಥಪಡಿಸಿ ಜನರಿಗೆ ನೆರವಾಗಿದ್ದೇವೆ ಬಾಕಿ ಉಳಿದ ಅರ್ಜಿಗಳ ವಿಲೇವಾರಿಗೆ,ನಿಗದಿತ ಸಮಯದಲ್ಲಿ ಇತ್ಯರ್ಥಕ್ಕೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ ಎಂದು ತಿಳಿಸಿದ ಅವರು,ಜನಪ್ರಿಯ ಮುಖ್ಯಮಂತ್ರಿ ಶ್ರೀ ಸಿದ್ದರಾಮಯ್ಯ ಅವರ ವಿಶೇಷ ಕಾಳಜಿಯಿಂದ ರಾಜ್ಯ ಮಟ್ಟದ ಹಿರಿಯ ಅಧಿಕಾರಿಗಳೊಂದಿಗೆ ಸಮಾಲೋಚಿಸಿ ಇಂತಹ ಮಹಾತ್ವಾಕಾಂಕ್ಷೆಯ ಕಾರ್ಯಕ್ರಮವನ್ನು ಎಲ್ಲ ಜಿಲ್ಲೆಗಳಲ್ಲಿ ಹಮ್ಮಿಕೊಳ್ಳಲಾಗುತ್ತಿದೆ ಎಂದು ಅವರು ಹೇಳಿದರು.
ಕಾರ್ಯಕ್ರಮದಲ್ಲಿ ಸಚಿವರು ಸುಮಾರು 50 ಕ್ಕೂ ಹೆಚ್ಚು ಅರ್ಜಿಗಳಿಗೆ ಸ್ಪಂದಿಸಿ ವಿಲೇವಾರಿಗೆ ಅಧಿಕಾರಿಗಳಿಗೆ ಸೂಚಿಸಿದರು ರೈತರಿಗೆ ಬೇಳೆಕಾಳು ಕಿಟ್ ವಿತರಣೆ ಮಾಡಿದರು.
ಯಾದಗಿರಿ ಶಾಸಕ ಚೆನ್ನಾರೆಡ್ಡಿ ಪಾಟೀಲ್ ತುನ್ನೂರ್, ಜಿಲ್ಲಾಧಿಕಾರಿ ಶ್ರೀಮತಿ ಸುಶೀಲಾ.ಬಿ,ಜಿಲ್ಲಾ ಪಂಚಾಯತ್ ಮುಖ್ಯಕಾರ್ಯನಿರ್ವಹಣಾಧಿಕಾರಿ ಶ್ರೀಮತಿ ಗರಿಮಾ ಪನ್ವಾರ್,ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶ್ರೀಮತಿ.ಜಿ.ಸಂಗೀತಾ,ಜಿಲ್ಲಾ ಅರಣ್ಯ ಸಂರಕ್ಷಣಾಧಿಕಾರಿ ಶ್ರೀಮತಿ ಕಾಜೋಲ್ ಪಾಟೀಲ್,ಸುರಪುರ ಡಿ.ಎಸ್.ಪಿ ಜಾವಿದ್ ಇನಾಮದಾರ್ ಉಪಸ್ಥಿತರಿದ್ದರು ಸಹಾಯಕ ಆಯುಕ್ತರಾದ ಹಂಪಣ್ಣ ಸಜ್ಜನ್ ಅವರು ಸಾರ್ವಜನಿಕರ ಅರ್ಜಿಗಳ ವಿಲೇವಾರಿ ಕಾರ್ಯಕ್ರಮ ನಡೆಸಿಕೊಟ್ಟರು ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
ವರದಿ:ಶಿವರಾಜ ಸಾಹುಕಾರ ವಡಗೇರಾ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ