ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಗೋನಾಲ ಗ್ರಾಮದಲ್ಲಿ ಕನಕದಾಸ ಜಯಂತಿ ಆಚರಣೆ

ಯಾದಗಿರಿ:ದೇವರಗೋನಾಲ್ ಗ್ರಾಮ ಪಂಚಾಯತಿ,ಪ್ರಾಥಮಿಕ ಪತ್ತಿನ ಸಹಕಾರ ಬ್ಯಾಂಕ್ ಮತ್ತು ಕನಕದಾಸರ ವೃತ್ತದಲ್ಲಿ ಕನಕದಾಸರ ಜಯಂತಿ ಅದ್ದೂರಿಯಾಗಿ ಆಚರಿಸಲಾಯಿತು.
ಕನಕ ಜಯಂತಿ ಸಮಾರಂಭದಲ್ಲಿ ಮಾತನಾಡಿದ ವೆಂಕಟೇಶ್ ಬೇಟೆಗಾರ ಕನಕದಾಸರು ನಾಡಿನ ಜನತೆಗೆ ಕೀರ್ತನೆಗಳನ್ನು ಸಾರುತ್ತ ಅನೇಕ ಪವಾಡಗಳನ್ನು ಮಾಡುತ್ತಾ ಜನರನ್ನ ಸನ್ಮಾರ್ಗದತ್ತ ಸಾಗಿಸುತ್ತಿದ್ದರು ಅವರ ಸಾರಿದ ಇತಿಹಾಸ ಇನ್ನೂ ಮರೆಮಾಚದ ಹಾಗೆ ಕಣ್ಮುಂದೆ ಕಾಣಬಹುದು ಬೆಳಗಾವಿ ಜಿಲ್ಲೆಯ ಕಿತ್ತೂರಿನಲ್ಲಿ ಸಂಗೊಳ್ಳಿ ರಾಯಣ್ಣ ವೀರ ಮರಣವನ್ನುಪ್ಪಿದ ನಾಡಿನಲ್ಲಿ ಸಾವಿರಾರು ಕೋಟಿ ಅನುದಾನವನ್ನು ಕೊಟ್ಟು ನೂರಾರು ಎಕರೆಯಲ್ಲಿ ಇತಿಹಾಸ ಸಾರುವ ಸುಪ್ರಸಿದ್ಧ ಪ್ರವಾಸಿ ತಾಣವನ್ನಾಗಿ ಮಾಡಿದ ಸಿದ್ದರಾಮಯ್ಯನ ಕಾಂಗ್ರೆಸ್ ಪಕ್ಷದ ಸರ್ಕಾರಕ್ಕೆ ಧನ್ಯವಾದಗಳನ್ನು ತಿಳಿಸಿದರು.
ಈ ಸಂದರ್ಭದಲ್ಲಿ ಗ್ರಾಮ ಪಂಚಾಯತಿ ಅಧ್ಯಕ್ಷರು ಸರ್ವ ಸದಸ್ಯರು ಮಾಜಿ ಅಧ್ಯಕ್ಷರು ಮತ್ತು ಪ್ರಾಥಮಿಕ ಪತ್ತಿನ ಸಹಕಾರ ಸಂಘದ ಸದಸ್ಯರು ಅಧ್ಯಕ್ಷರು ಕಾರ್ಯದರ್ಶಿಗಳು ಮತ್ತು ಊರಿನ ಹಿರಿಯರು ಯುವಕರು ಮುಖಂಡರು ಭಾಗಿಯಾಗಿ ಅದ್ದೂರಿಯಾಗಿ ಆಚರಣೆ ಮಾಡಿದರು.
ವರದ:ರಾಜಶೇಖರ ಮಾಲಿ ಪಾಟೀಲ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ