ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಶ್ರೀ ಭಕ್ತ ಕನಕದಾಸರ ಜಯಂತಿಯ ಪ್ರಯುಕ್ತ ಕನಕ ಕಾರ್ಮಿಕ ಕಲ್ಯಾಣ ಸಂಘ ಅದ್ದೂರಿಯಾಗಿ ಉದ್ಘಾಟನೆ

ಬೆಂಗಳೂರು ನಗರದಲ್ಲಿ ಶ್ರೀ ಭಕ್ತ ಕನಕದಾಸರ ಜಯಂತಿಯ ಪ್ರಯುಕ್ತ ಕನಕ ಕಾರ್ಮಿಕ ಕಲ್ಯಾಣ ಸಂಘ ಅದ್ದೂರಿಯಾಗಿ ಉದ್ಘಾಟನೆ
ಬೆಂಗಳೂರು ನಗರದ ಕಾಮತ್ ಲೇಔಟ್ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಭಕ್ತ ಶ್ರೀ ಭಕ್ತ ಕನಕದಾಸರ ಜಯಂತಿಯು ಅದ್ದೂರಿಯಾಗಿ ಹಮ್ಮಿಕೊಳ್ಳಲಾಯಿತ್ತು ಹಾಗೂ ಇದೇ ಸಂದರ್ಭದಲ್ಲಿ ಶ್ರೀ ಭಕ್ತ ಕನಕದಾಸರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವುದರ ಮುಖಾಂತರ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು ಹಾಗೂ ಕನಕ ಕಾರ್ಮಿಕ ಕಲ್ಯಾಣ ಸಂಘದ ಉದ್ಘಾಟನಾ ಕಾರ್ಯಕ್ರಮವನ್ನು ಕೂಡಾ ಹಮ್ಮಿಕೊಳ್ಳಲಾಗಿತ್ತು ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶ್ರೀ ನಾಗೇಂದ್ರ ಕಾಮತ್ ಅವರು ವಹಿಸಿಕೊಂಡಿದ್ದರು ಈ ಸಂದರ್ಭದಲ್ಲಿ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಧರ್ಮದರ್ಶಿಗಳು ಕನಕ ಕಾರ್ಮಿಕ ಸಂಘಟನೆಯ ಎಲ್ಲಾ ಕಾರ್ಯಕರ್ತರಿಗೆ ಆಶೀರ್ವಚನ ನೀಡಿದರು ಹಾಗೂ ಕನಕ ಕಾರ್ಮಿಕ ಕಲ್ಯಾಣ ಸಂಘದ ವತಿಯಿಂದ ನೂರಾರು ಕಾರ್ಯಕರ್ತರಿಂದ ಮಾಚೋಹಳ್ಳಿ ಮಾರ್ಗದಿಂದ ಗೋವಿಂದರಾಜ ನಗರದ ಕನಕದಾಸರ ಪುತ್ತಳಿಗೆ ಮಾಲಾರ್ಪಣೆ ಮಾಡಲಾಯಿತು ಹಾಗೂ ಕುರುಬರ ಸಂಘದ ಕಚೇರಿಯವರಿಗೆ ನೂರಾರು ಕಾರ್ಯಕರ್ತರಿಂದ ಬೈಕ್ ರಾಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು ಹಾಗೂ ಕಾರ್ಯಕ್ರಮದ ಜವಾಬ್ದಾರಿಯನ್ನು ಕನಕ ಕಾರ್ಮಿಕ ಕಲ್ಯಾಣ ಸಂಘ ಯುವ ಘಟಕದ ರಾಜ್ಯಾಧ್ಯಕ್ಷರು ಮಲ್ಲಣ್ಣ ಎಂ.ಪೂಜಾರಿ ಹಾಗೂ ಉಪಾಧ್ಯಕ್ಷರು ಬೀರೇಶ್ ಎಂ ಪೂಜಾರಿ ವಹಿಸಿಕೊಂಡಿದ್ದರು.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ