ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ರಾಜ್ಯ ಮಟ್ಟದ ಆದರ್ಶ ಗುರುವರ್ಯ ಹಾಗೂ ಕನ್ನಡ ಸಾರಥಿ ಪ್ರಶಸ್ತಿ ಪ್ರದಾನ ಸಮಾರಂಭ

ರಾಜ್ಯಮಟ್ಟದ ಆದರ್ಶ ಗುರುವರ್ಯ ಪ್ರಶಸ್ತಿ ಪುರಸ್ಕೃತರು:ಶ್ರೀ ಸೂಗೂರೇಶ್ವರ ಶಾಲೆಯ ಮುಖ್ಯ ಶಿಕ್ಷಕಿ ಕು.ರೂಪಾ ಶಂಕರರಾವ್ ಪಾಟೀಲ್

ಕಲಬುರಗಿ ಜಿಲ್ಲೆಯ ಜೇವರ್ಗಿ ಪಟ್ಟಣದ ಸಜ್ಜನ ಕಲ್ಯಾಣ ಮಂಟಪದಲ್ಲಿ ನಡೆದ ನವ ಕಲ್ಯಾಣ ಕರ್ನಾಟಕ ಖಾಸಗಿ ಶಾಲಾ ಕಾಲೇಜುಗಳ ಶಿಕ್ಷಕರ ಸಂಘದ ವತಿಯಿಂದ ನಿನ್ನೆ ನಡೆದ ರಾಜ್ಯ ಮಟ್ಟದ ಆದರ್ಶ ಗುರುವರ್ಯ ಹಾಗೂ ಕನ್ನಡ ಸಾರಥಿ ಪ್ರಶಸ್ತಿ ಪ್ರದಾನ ಸಮಾರಂಭಕ್ಕೆ ಆಗಮಿಸಿದ ಪರಮ ಪೂಜ್ಯರಾದ ಶ್ರೀ ಶ್ರೀ ಶ್ರೀ ಹವಾ ಮಲ್ಲಿನಾಥ ಶ್ರೀಗಳ ಆರ್ಶಿವಾದದಿಂದ ಇದೊಂದು ನಮ್ಮ ಭವ್ಯ ಭಾರತದ ಹಿಂದೂ,ಮುಸ್ಲಿಂ,ಕ್ರೈಸ್ತ ಸಂತರ ಸೇರಿದಂತೆ ಇದು ಐತಿಹಾಸಿಕ ಸಂದೇಶ ಸಾರುವ ಕಾರ್ಯಕ್ರಮವಾಗಿದೆ ಎಂದು ಹೇಳಿದರು.
ಜೇವರ್ಗಿ ತಾಲೂಕಿನ ಜನಪ್ರಿಯ ಶಾಸಕ ಹಾಗೂ ಕೆ.ಕೆ.ಅರ್.ಡಿ.ಬಿ ಅಧ್ಯಕ್ಷ ಡಾ||ಅಜೇಯ ಸಿಂಗ್ ಅವರು ಮಾತನಾಡಿ ಈ ಭಾಗದ ಶೈಕ್ಷಣಿಕ ಶಿಕ್ಷಣಕ್ಕೆ ಹೆಚ್ಚಿನ ಮಹತ್ವ ನೀಡಬೇಕಾಗಿದೆ ಎಂದು ಹೇಳಿದರು. ಖಾಸಗಿ ಶಾಲಾ ಕಾಲೇಜುಗಳ ಶಿಕ್ಷಕರ ಸಂಘ ಸಮಾಜ ಮುಖಿ ಸಮಾರಂಭ ಹಮ್ಮಿಕೊಂಡಿರುವುದು ಶ್ಲಾಘನೀಯ ಎಂದರು.
ಕುಮಾರಿ ರೂಪಾ ಪಾಟೀಲ್ ಇವರಿಗೆ ರಾಜ್ಯ ಮಟ್ಟದ ಆದರ್ಶ ಗುರುವರ್ಯ ಪ್ರಶಸ್ತಿ ಒದಗಿ ಬಂದಿರುವುದು ಕುಟುಂಬಸ್ಥರು ಸಂತೋಷ ವ್ಯಕ್ತಪಡಿಸಿದ್ದಾರೆ.
ಇದೇ ಸಂದರ್ಭದಲ್ಲಿ ಮಾಜಿ ಶಾಸಕರಾದ ದೊಡ್ಡಗೌಡ ನರಬೊಳ,ಶಿವರಾಜ್ ಪಾಟೀಲ್ ರದ್ದೆವಾಡಿಗಿ,ರಾಮಚಂದ್ರಪ್ಪ ಜಾಧವ್,ವಿಠ್ಠಲ ಜಾದವ್,ರಾಜಶೇಖರ ಸಿರಿ,ಶಾಂತಪ್ಪ ಕೂಡಲಗಿ, ವಿಜಯಕುಮಾರ ಹೀರೆಮಠ,ಬಹದ್ದೂರ್ ರಾಠೋಡ,ಪ್ರಭು ಜಾಧವ್,ವೈಜನಾಥ ಜಳಕಿ, ಸಂಘದ ಸಂಸ್ಥಾಪಕ ಅಧ್ಯಕ್ಷರಾದ ಧನ್ನರಾಜ್ ರಾಠೋಡ ಮುತ್ತಕೋಡ,ಅಲ್ಲಾವುದ್ದೀನ್ ಸಾಗರ, ಜಗದೀಶ್ ಉಕ್ಕಿನಾಳಕರ್,ಜ್ಯೋತಿ ಸಾಲಿಮಠ, ಗುರುಶಾಂತಪ್ಪ ಚಿಂಚೋಳಿ,ಭೀಮರಾವ್ ಗಂವ್ಹಾರ್ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.
ವರದಿ-ರಾಜಶೇಖರ ಮಾಲಿ ಪಾಟೀಲ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ