ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಇಂಗ್ಲಿಷ್ ಕಲಿಕೆಗೆ ಭಯಪಡುವ ಅಗತ್ಯವಿಲ್ಲ ಎಂದರು: ಹೊನ್ನಾರಡ್ಡಿ ಬೈರಡ್ಡಿ ಗೋಗಿ

ಯಾದಗಿರಿ:ಎಲ್ಲಾ ಭಾಷೆಗಳಂತೆ ಇಂಗ್ಲಿಷ್ ಕೂಡಾ ಒಂದು ಭಾಷೆ ಸ್ವಲ್ಪ ಆಸಕ್ತಿ ಹಾಗೂ ಕೆಲವು ಉಪಾಯಗಳು ತಿಳಿದುಕೊಂಡರೆ ಇಂಗ್ಲಿಷ್ ಭಾಷೆ ಕೂಡ ಕನ್ನಡದಂತೆ ಸುಲಭವಾಗಿ ಮಾತನಾಡಬಹುದು ಹಾಗೇಯೇ ಪರೀಕ್ಷೆಗಳಲ್ಲಿ ಹೆಚ್ಚಿನ ಅಂಕಗಳನ್ನು ಕೂಡಾ ಪಡೆಯಬಹುದು. ನಮ್ಮ ಮಾತೃಭಾಷೆ ಕನ್ನಡವನ್ನು ಹೇಗೆ ಹೃದಯದಿಂದ ಪ್ರೀತಿಸುತ್ತೇವೆ ಅದೇ ತರಹ ಇಂಗ್ಲಿಷ್ ಭಾಷೆಯನ್ನು ಕೂಡ ವ್ಯವಹಾರಕ್ಕೆ ಮತ್ತು ಉದ್ಯೋಗಕ್ಕಾಗಿ ಇಂಗ್ಲಿಷ್ ಭಾಷೆಯನ್ನು ಒಪ್ಪಿಕೊಳ್ಳಬಹುದು ಎಂದು ಇಂಗ್ಲಿಷ್ ಉಪನ್ಯಾಸಕರಾದ ಹೊನ್ನಾರಡ್ಡಿ ಬೈರಡ್ಡಿ ಗೋಗಿ ಅವರು ಸಂಪೂರ್ಣವಾಗಿ ಮಾಹಿತಿ ನೀಡಿದರು.
ತಾಲೂಕಿನ ಗಂವ್ಹಾರ್ ಶ್ರೀ ಮಠದ ಹಿರಿಯ ಪ್ರೌಢ ಶಾಲೆಯಲ್ಲಿ ಒಂದು ದಿನದ ಇಂಗ್ಲಿಷ್ ಕಾರ್ಯಗಾರ ನಿಮಿತ್ತ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳಿಗೆ ಇಂಗ್ಲಿಷ್ ಭಯ ಹೇಗೆ ಹೋಗಲಾಡಿಸಬೇಕು ಇಂಗ್ಲಿಷಿನಲ್ಲಿ ಹೇಗೆ ಮಾತನಾಡಬೇಕು ಹಾಗೂ ಇಂಗ್ಲೀಷ್ ವಿಷಯದಲ್ಲಿ ಹೇಗೆ ಹೆಚ್ಚಿನ ಅಂಕಗಳನ್ನು ಹೇಗೆ ಪಡೆಯಬೇಕು ಎಂಬುವುದರ ಬಗ್ಗೆ ಉಪನ್ಯಾಸ ನೀಡಿದ್ದಕ್ಕಾಗಿ ಶ್ರೀ ಮಠದ ಶ್ರೋತ್ರಿಯ ಬ್ರಹ್ಮ ನಿಷ್ಠೆ ಶ್ರೀ ಸೋಪನನಾಥ ಮಹಾ ಸ್ವಾಮಿಗಳು ಹೊನ್ನಾರಡ್ಡಿ ಬೈರಡ್ಡಿ ಅವರಿಗೆ ಗೌರವಿಸಿ ಸನ್ಮಾನಿಸಿದರು.ಈ ಕಾರ್ಯಕ್ರಮದಲ್ಲಿ ಪರಮ ಪೂಜ್ಯರಾದ ಶ್ರೀ ಸೋಪನನಾಥ ಮಹಾ ಸ್ವಾಮಿಗಳು ಹಾಗೂ ಶಾಲಾ ಆಡಳಿತ ಮಂಡಳಿ ಮತ್ತು ಅಧ್ಯಕ್ಷರು,ಕಾರ್ಯದರ್ಶಿಗಳು,ಮುಖ್ಯ ಗುರುಗಳು, ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ವರದಿ:ರಾಜಶೇಖರ ಮಾಲಿ ಪಾಟೀಲ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ