ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ನನ್ನ ಅಧಿಕಾರವಧಿಯಲ್ಲಿ ಸಾಕಷ್ಟು ಅಭಿವೃದ್ಧಿ ಕಾರ್ಯಗಳನ್ನು ಕೈಗೊಂಡಿದ್ದೇನೆ:ಸಂಸದ ರಮೆಶ ಜಿಗಜಿಣಗಿ

ವಿಜಯಪುರ:ನನ್ನ ನಿರಂತರ ಅಧಿಕಾರ ಅವಧಿಯಲ್ಲಿ ಸಾಕಷ್ಟು ಜನಪರ ಕಾರ್ಯಗಳನ್ನು ಕೈಗೊಂಡಿದ್ದೇನೆ ಆದರೆ ನಾನು ಕೈಗೊಂಡ ಕಾರ್ಯಗಳನ್ನು ಇವತ್ತಿಗೂ ಪ್ರಚಾರ ಮಾಡಿಕೊಂಡಿಲ್ಲ ನಾನು ಶಾಸಕ,ಸಂಸದನಾಗಿ ಚುನಾವಣೆಯ ಕಾರ್ಯದಲ್ಲಿ ಎಷ್ಟು ಭಾರಿ ಚುನಾವಣೆಯ ಕಣದಲ್ಲಿ ಸ್ಪರ್ಧಿಸಿದ್ದೇನೆ ಅಷ್ಟು ಭಾರಿ ಜಯಶಾಲಿ ಆಗಿದ್ದೇನೆ ವಿಜಯಪುರ ಜಿಲ್ಲೆಯ ಮಗನಾಗಿ ಪ್ರತಿಯೊಂದು ಕೋಮುಗಳ ಜನರ ಆಶೀರ್ವಾದ ಪಡೆದುಕೊಂಡಿದ್ದೇನೆ ಒಟ್ಟಾರೆ ನನ್ನ ಅಧಿಕಾರ ಅವಧಿಯಲ್ಲಿ ಸಾಕಷ್ಟು ಅಭಿವೃದ್ದಿ ಕಾರ್ಯಗಳನ್ನು ಕೈಗೊಳ್ಳುವಲ್ಲಿ ಯಶಸ್ವಿಯಾಗಿದ್ದೇನೆ ಎಂದು ವಿಜಯಪುರ ಲೋಕಸಭಾ ಸದಸ್ಯ ರಮೇಶ ಜಿಗಜಿಣಗಿ ಹೇಳಿದರು.
ಪಟ್ಟಣದ ಸಿಂದಗಿ ರಸ್ತೆಯ ಬಲ ಬದಿಯ ಶಾಂತೇಶ್ವರ ಮಂಗಲ ಕಾರ್ಯಲಯದಲ್ಲಿ ಶನಿವಾರ ಮದ್ಯಾಹ್ನ ಆಯೋಜಿಸಿದ್ದ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ವಿಶ್ವಕರ್ಮ ಯೋಜನೆಯ ಅರಿವು ಕಾರ್ಯಕ್ರಮದ ಉದ್ಘಾಟನೆ ನೆರವೇರಿಸಿ ಹಿಂದುಳಿದ ವರ್ಗಗಳ ಮೋರ್ಚಾ ಸಭೆ ನೇತೃತ್ವವಹಿಸಿ ಮಾತನಾಡಿದ ಅವರು ವಿಜಯಪುರ ಜಿಲ್ಲೆಯ ನೀರಾವರಿ,ರಸ್ತೆ ಸೇರಿದಂತೆ ಇನ್ನಿತರ ಅಭಿವದ್ಧಿ ಕಾರ್ಯಗಳನ್ನು ಜಾರಿಗೊಳಿಸಿ ಯಶಸ್ವಿಯಾಗಿದ್ದೇನೆ ಎಂದರು.
ಈಗ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಜನಪರ ಯೋಜನೆ ಒಂದರ ಜೊತೆಗೆ ಹಿಂದುಳಿದ ವರ್ಗಗಳ ಜನತೆಯ ಅಭಿವೃದ್ಧಿ ಕಾರ್ಯಗಳಿಗೆ ಹೆಚ್ಚಿನ ಆಸಕ್ತಿ ನೀಡುವಗೋಸ್ಕರವಾಗಿ ಅದರಲ್ಲಿಯೂ ವಿಶ್ವಕರ್ಮ ಯೋಜನೆಯ ಅರಿವು ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗಿದೆ ಅದರಲ್ಲಿ ಮುಖ್ಯವಾಗಿ ೧೮ ಉದ್ಯೋಗಗಳಿಗೆ ಚಾಲನೆ ನೀಡಿ ಆಯಾ ಭಾಗದ ಉದ್ಯೋಗಳಿಗೆ ಕೌಶಲ್ಯ ತರಬೇತಿ ನೀಡಲು ಪ್ರಧಾನ ಮಂತ್ರಿ ಯೋಜನೆಯಲ್ಲಿ ಕೈಗೆತ್ತಿಕೊಳ್ಳಲಾಗಿದೆ ಎಂದು ಸಂಸದ ರಮೇಶ ಜಿಗಜಿಣಗಿ ಹೇಳಿದರು.
ವಿಶ್ವಕರ್ಮ ಯೋಜನೆಯ ಕಾರ್ಯಕ್ರಮದ ಪೂರ್ವದಲ್ಲಿ ರಾಜ್ಯ ಪ್ರಧಾನ ಕಾರ್ಯದರ್ಶಿ ವಿವೇಕ ಡಬ್ಬಿ ಮಾತನಾಡಿ ಸಂಸದ ರಮೇಶ ಜಿಗಜಿಣಗಿ ಅವರು ಹೇಳಿದಂತೆ ವಿಶ್ವಕರ್ಮ ಯೋಜನೆಯ ಸದುಪಯೋಗವನ್ನು ಪ್ರತಿಯೊಬ್ಬರು ಪಡೆದುಕೊಳ್ಳಲು ಮುಂದಾಗಬೇಕು ಎಂದು ಕರೆ ನೀಡಿದರು.
ವೇದಿಕೆಯಲ್ಲಿ ಮಂಡಲ ಅಧ್ಯಕ್ಷ ಮಲ್ಲಿಕಾರ್ಜುನ ಕಿವುಡೆ,ಜಿಲ್ಲಾ ರೈತ ಮೋರ್ಚಾ ಅಧ್ಯಕ್ಷ ಕಾಸುಗೌಡ ಬಿರಾದಾರ,ಜಿಲ್ಲಾ ರೈತ ಮೋರ್ಚಾ ಮಾಜಿ ಅಧ್ಯಕ್ಷ ಅನೀಲ ಜಮಾದಾರ, ಜಿಲ್ಲಾ ಬೆಜೆಪಿ ಮುಖಂಡ ಪ್ರೋ ನಿವೃತ್ತ ಉಪನ್ಯಾಸಕ ಸಿದ್ದಲಿಂಗ ಹಂಜಗಿ, ರಾಜ್ಯ ಕಾರ್ಯಕಾರಣ ಸದಸ್ಯ ಶಿಲವಂತ ಉಮರಾಣಿ ಜಿಲ್ಲಾ ಬಿಜೆಪಿ ಮುಖಂಡ ಹಣಮಂತರಾಯಗೌಡ ಪಾಟೀಲ ನಾಗಠಾಣ ಮತಕ್ಷೇತ್ರದ ಪರಾಜೀತ ಅಭ್ಯರ್ಥಿ ಸಂಜೀವು ಐಹೊಳೆ,ರಾಜಕುಮಾರ ಸಗಾಯಿ,ಯಲ್ಲಪ್ಪ ಹದರಿ, ಶ್ರೀಶೈಲ ಮದರಿ,ವಿಜಯಲಕ್ಷ್ಮಿ ರೂಗಿಮಠ ವೇದಿಯಲ್ಲಿ ಉಪಸ್ಥಿತರಿದ್ದರು.ಅನಿಲ ಜಮಾದಾರ ಸ್ವಾಗತಿಸಿದರು.ಪ್ರೋ ಸಿದ್ದಲಿಂಗ ಹಂಜಗಿ ನಿರೂಪಿಸಿ ವಂದಿಸಿದರು.
ವರದಿ:ಅರವಿಂದ ಕಾಂಬಳೆ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ