ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಜಿಲ್ಲಾ ವಾಲ್ಮೀಕಿ ನಾಯಕ ಸಂಘದ ಅಧ್ಯಕ್ಷರಿಂದ ಪತ್ರಿಗೋಷ್ಠಿ ಮತ್ತು ಸನ್ಮಾನ‌

ಯಾದಗಿರಿ:ನೂತನ ಕಕ್ಕೇರ ಪಟ್ಟಣದಲ್ಲಿ
ವಾಲ್ಮೀಕಿ ನಾಯಕ ಸಂಘದ ಅಧ್ಯಕ್ಷರಾಗಿ ಆಯ್ಕೆಯಾದ ಗೌಡಪ್ಪ ಗೌಡ ಆಲ್ದಾಳ ಇವರಿಗೆ ಮತ್ತು ಯಾದಗಿರಿ ಜಿಲ್ಲಾ ವಾಲ್ಮೀಕಿ ನಾಯಕ ಸಂಘದ ಗೌರವ ಅಧ್ಯಕ್ಷರಾದ ಸಿದ್ದನಗೌಡ ಪಾಟೀಲ್ ಕರಿಬಾವಿ ರವರಿಗೆ ಅದ್ದೂರಿಯಾಗಿ ಸ್ವಾಗತಿಸಿ ಸನ್ಮಾನಿಸಲಾಯಿತು ಮತ್ತು ಈ ಸಂದರ್ಭದಲ್ಲಿ ದಿನಾಂಕ 10.12.2023 ರಂದು ರವಿವಾರ ಕಕ್ಕೇರಾ ಪಟ್ಟಣದಲ್ಲಿ ಶ್ರೀ ಮಹರ್ಷಿ ವಾಲ್ಮೀಕಿ ಮೂರ್ತಿ ಉದ್ಘಾಟನೆ ಮತ್ತು ವಾಲ್ಮೀಕಿ ನಾಯಕ ಜನಾಂಗದ ಬೃಹತ್ ಸಮಾವೇಶ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ಯಾದಗಿರಿ ಜಿಲ್ಲೆಯಾದ್ಯಂತ ವಾಲ್ಮೀಕಿ ಸಮಾಜದ ಬಂಧುಗಳು ಆಗಮಿಸಬೇಕಾಗಿ ಜಿಲ್ಲಾ ಅಧ್ಯಕ್ಷರು ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದರು. ಈ ಸಂದರ್ಭದಲ್ಲಿ ಶಹಾಪುರ ತಾಲೂಕ ವಾಲ್ಮೀಕಿ ನಾಯಕ್ ಸಂಘದ ಅಧ್ಯಕ್ಷರಾದ ಮರೆಪ್ಪ ನಾಯಕ್ ಪ್ಯಾಟಿ ಮತ್ತು ಕಾರ್ಯಕ್ರಮದ ರೂವಾರಿಯಾದ ಗುಂಡಪ್ಪ ನಾಯಕ್ ಸೊಲ್ಲಾಪುರ್,ವೆಂಕಟೇಶ ಬೇಟೆಗಾರ,ಗುರುನಾಥ್ ನಾಯಕ್ ಹುಲಕಲ್ ಯಾದಗಿರಿ ಜಿಲ್ಲಾ ಉಸ್ತುವಾರಿ ಸಚಿವರ ಆಪ್ತ ಸಹಾಯಕ ದೇವೇಂದ್ರಪ್ಪ ನಾಯಕ್ ಬಳಿಚಕ್ಕರ್,ದಶರಥ ಆರೆ ಶಂಕರ್,ಕಕ್ಕೇರಾ ವಲಯ ಸಂಘದ ಅಧ್ಯಕ್ಷರಾದ ಚಂದ್ರಕಾಂತ್ ವಜ್ಜಲ್ ಸುರಪುರ ತಾಲೂಕ ವಾಲ್ಮೀಕಿ ನಾಯಕ ಸಂಘದ ಎಲ್ಲಾ ಪದಾಧಿಕಾರಿಗಳು ಸುರಪುರ ತಾಲೂಕ ವಾಲ್ಮೀಕಿ ಸಮಾಜದ ಮುಖಂಡರುಗಳು ಮತ್ತು ಕಕ್ಕೇರ ಪುರಸಭೆ ಎಲ್ಲಾ ಸದಸ್ಯರು ಕಕ್ಕೇರಾ ಪಟ್ಟಣದ ವಾಲ್ಮೀಕಿ ನಾಯಕ ಸಮಾಜದ ಮುಖಂಡರುಗಳು ಯುವಕರು ಉಪಸ್ಥಿತರಿದ್ದರು.
ವರದಿ:ರಾಜಶೇಖರ ಮಾಲಿ ಪಾಟೀಲ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ