ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಮುಂಡಗೋಡದಲ್ಲಿ ಡಯಾಲಿಸಿಸ್ ರೋಗಿಗಳ ಜೀವ ಹಾಗೂ ಸಿಬ್ಬಂದಿಗಳ ಜೀವನ ಉಳಿಸಬೇಕಿದೆ ಸರ್ಕಾರ

ಮುಂಡಗೋಡ:ತಾಲೂಕ ಆಸ್ಪತ್ರೆ ಮುಂಡಗೋಡದ ಡಯಾಲಿಸಿಸ್ ವಿಭಾಗದಲ್ಲಿ ಸಾಕಷ್ಟು ದಿನಗಳಿಂದ ಚಿಕಿತ್ಸೆ ಪಡೆಯುತ್ತಿರುವ ರೋಗಿಗಳು,ಪ್ರತಿನಿತ್ಯ ಡಯಾಲಿಸಿಸ್ ಮಾಡಿಸಲೇಬೇಕಾದ ಅನಿವಾರ್ಯತೆ ಇದ್ದೆ ಇದೆ.ಆದರೆ ಪ್ರಸ್ತುತ ನಡೆಯುತ್ತಿರುವ ಡಯಾಲಿಸಿಸ್ ಕೇಂದ್ರಗಳ ಸಿಬ್ಬಂದಿಗಳು ಮಾಡುತ್ತಿರುವ ವೇತನ ಪಾವತಿ ಕುರಿತ ಮುಷ್ಕರದಿಂದ ಡಯಾಲಿಸಿಸ್ ರೋಗಿಗಳಿಗೆ ಸರ್ಕಾರಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ದೊರೆಯುತ್ತಿಲ್ಲ, ಇದರಿಂದ ರೋಗಿಗಳಿಗೆ ಪ್ರಾಣಾಪಾಯದ ತೊಂದರೆ ಕೂಡ ತಪ್ಪಿದ್ದಲ್ಲ,ಅದರಲ್ಲೂ ಮುಂಡಗೋಡ ತಾಲೂಕಿನ ಗುಂಜಾವತಿ ಮೂಲದ ವ್ಯಕ್ತಿಯೊಬ್ಬರು,ಡಯಾಲಿಸಿಸ್ ಚಿಕಿತ್ಸೆ ದೊರಕದೆ ಕೆಲ ದಿನಗಳ ಹಿಂದೆ ಸಾವನ್ನಪ್ಪಿದ್ದಾರೆ.

ಸಿಬ್ಬಂದಿಗಳ ಮುಷ್ಕರಕ್ಕೆ ಕಾರಣವೇನು?
ಒಟ್ಟು 13 ರೋಗಿಗಳು ಚಿಕಿತ್ಸೆ ಪಡೆಯುತ್ತಿರುವ ಮುಂಡಗೋಡ ತಾಲೂಕ ಆಸ್ಪತ್ರೆಯ ಡಯಾಲಿಸಿಸ್ ವಿಭಾಗದಲ್ಲಿ ಪ್ರತಿ ವಾರ 110 ಪುನರಾವರ್ತಿತ ಚಿಕಿತ್ಸೆಗಳು ರೋಗಿಗಳಿಗೆ ಮಾಡಲಾಗುತ್ತದೆ. ಹೊರಗುತ್ತಿಗೆ ಅಡಿಯಲ್ಲಿ ಇಬ್ಬರು ಸಿಬ್ಬಂದಿಗಳು ಇಲ್ಲಿ ಕಾರ್ಯ ನಿರ್ವಹಣೆ ಮಾಡುತ್ತಿದ್ದು, ಅವರುಗಳಿಗೆ ಸುಮಾರು 4 ತಿಂಗಳ ಸಂಬಳ ಹಾಗೂ 30 ತಿಂಗಳ ESI ಮತ್ತು PF ಸೌಲಭ್ಯವನ್ನು ಇನ್ನುವರೆಗು ನೀಡಲಾಗಿಲ್ಲ,ಹೀಗೆ ಆದರೆ ನಮ್ಮ ಮನೆ ಹೇಗೆ ನೋಡಿಕೊಳ್ಳುವುದು,ಮನೆಯಲ್ಲಿ ಚಿಕ್ಕ ಮಕ್ಕಳು ಹಾಗೂ ವಯಸ್ಸಾದ ತಂದೆ ತಾಯಿ ಇದ್ದಾರೆ,ಆದಷ್ಟು ಬೇಗ ಸರ್ಕಾರ ವೇತನದ ಗೊಂದಲವನ್ನು ಬಗೆಹರಿಸಬೇಕೆಂದು ಹೇಳುತ್ತಾರೆ ಮುಂಡಗೋಡ ಡಯಾಲಿಸಿಸ್ ಕೇಂದ್ರದ ಸಿಬ್ಬಂದಿಗಳಾದ ಸಂತೋಷ್ ಹಾಗೂ ನೇತ್ರಾವತಿ.
ಒಟ್ಟಿನಲ್ಲಿ ಸರ್ಕಾರ ಆದಷ್ಟು ಸಮಸ್ಯೆ ಬಗೆಹರಿಸುವ ಕೆಲಸ ಮಾಡಬೇಕಿದೆ.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ