ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಅರ್ಜುನ ಆನೆ ಸಾವಿಗೆ ಅರಣ್ಯ ಇಲಾಖೆಯ ವೈಫಲ್ಯವೇ ಕಾರಣ:ತೇಜಸ್ವಿ ನಾಗಲಿಂಗ ಸ್ವಾಮಿ ಆರೋಪ

ಮೈಸೂರು:ಸಾಂಸ್ಕೃತಿಕ ನಗರಿ ಮೈಸೂರಿನ ಅರಮನೆಯ ಅಂಬಾರಿಯನ್ನು ಸುಮಾರು ಎಂಟು ಬಾರಿ ಹೊತ್ತು ಎಲ್ಲರ ಮನದಲ್ಲಿ ಉಳಿದಿರುವ ಕ್ಯಾಪ್ಟನ್ ಅರ್ಜುನ ಆನೆಯನ್ನು ಕಳೆದುಕೊಂಡಿರುವುದು ನಾಡಿನ ದುರದೃಷ್ಟ ಎಂದು ಕನ್ನಡ ಚಳವಳಿಗಾರ ತೇಜಸ್ವಿ ನಾಗಲಿಂಗ ಸ್ವಾಮಿ ಹೇಳಿದ್ದಾರೆ.
ಅರ್ಜುನ ಆನೆ ಸಾವಿಗೆ ಅರಣ್ಯ ಇಲಾಖೆಯ ವೈಫಲ್ಯವೇ ಕಾರಣ ಎಂದುತೇಜಸ್ವಿ ನಾಗಲಿಂಗ ಸ್ವಾಮಿ ಆರೋಪಿಸಿದ್ದಾರೆ.
ಕಾಡಾನೆಯನ್ನು ಪಳಗಿಸಲು
ವಯಸ್ಸಾದ ಹಾಗೂ ಅಂಬಾರಿ ಹೊರುವ ಅರ್ಜುನನನ್ನು ಅರಣ್ಯಧಿಕಾರಿಗಳು ಉಪಯೋಗಿಸಿಕೊಂಡಿದ್ದು ಕಾನೂನಿನ ಪ್ರಕಾರ ಅಪರಾಧ‌ ಎಂದಿದ್ದಾರೆ.
ಒಂಟಿಸಲಗವನ್ನು ಪಳಗಿಸಲು ಸೂಕ್ತವಾದ ಆನೆಗಳನ್ನು ಬಳಸಿಕೊಳ್ಳಬೇಕಿತ್ತು,ಮನುಷ್ಯನ ಜೀವದಷ್ಟೇ ಪ್ರಾಣಿಗಳ ಜೀವವೂ ಅಮೂಲ್ಯವಾದದ್ದು ಎಂಬುದನ್ನು ಇನ್ನಾದರೂ ಅಧಿಕಾರಿಗಳು ತಿಳಿಯಬೇಕು ಎಂದು ಹೇಳಿದ್ದಾರೆ.

ಸೂಕ್ತ ತನಿಖೆ ಮಾಡಿ ಆನೆ ಅರ್ಜುನನ ಸಾವಿಗೆ ಕಾರಣರಾದ ಅಧಿಕಾರಿಗಳ ವಿರುದ್ದ ಸರ್ಕಾರ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಬೇಕು‌ ಎಂದು ತೇಜಸ್ವಿ ಒತ್ತಾಯಿಸಿದ್ದಾರೆ.

ಆನೆ ಕಳೆದುಕೊಂಡ ಮಾವುತರಿಗೆ ನೋವು ತಡೆದುಕೊಳ್ಳುವ ಶಕ್ತಿ ಭಗವಂತನು ಕರುಣಿಸಲಿ ಎಂದು ಪ್ರಾರ್ಥಿಸಿದ್ದಾರೆ.
ಎಂಟು ಭಾರಿ ಅಂಬಾರಿ ಹೊತ್ತ ಮೈಸೂರು ದಸರಾ ಆಕರ್ಷಣೆಯ ಅರ್ಜುನ ಮತ್ತೆ ಕರ್ನಾಟಕದಲ್ಲೆ ಹುಟ್ಟಿ ಬರಲಿ ಎಂದು ಭಗವಂತನಲ್ಲಿ ತೇಜಸ್ವಿ ನಾಗಲಿಂಗಸ್ವಾಮಿ ಪ್ರಾರ್ಥಿಸಿದ್ದಾರೆ.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ